ಬ್ರೇಕಿಂಗ್ ನ್ಯೂಸ್
30-08-24 11:24 am HK News Desk ಕರ್ನಾಟಕ
ಕಾರವಾರ, ಆ 30: ಕೈದಿಗಳಿಬ್ಬರು ರಂಪಾಟ ಮಾಡಿ, ತಲೆ ಒಡೆದುಕೊಂಡಿರುವ ಘಟನೆ ಜಿಲ್ಲಾ ಕಾರಾಗೃಹದಲ್ಲಿ ನಡೆದಿದೆ.
ಜೈಲಿನೊಳಗೆ ಬಹಳಷ್ಟು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ, ಸೂಕ್ತ ಸೌಲಭ್ಯವಿಲ್ಲ ಹಾಗೂ ಹೊರಗಿನಿಂದ ಯಾವುದೇ ವಸ್ತುಗಳನ್ನು ತೆಗೆದುಕೊಂಡು ಹೋಗಲು ಬಿಡುತ್ತಿಲ್ಲ. ತಮಗೆ ತಂಬಾಕು ಸಿಗುತ್ತಿಲ್ಲ ಎನ್ನುವ ಕಾರಣಕ್ಕೆ ಅಧಿಕಾರಿಗಳ ಜೊತೆ ರಗಳೆ ತೆಗೆದಿದ್ದಾರೆ ಎನ್ನಲಾಗಿದೆ.
ಜೈಲಿನಲ್ಲಿ ಗಲಾಟೆ ನಡೆದ ಸುದ್ದಿ ತಿಳಿಯುತ್ತಿದ್ದಂತೆ, ಪೊಲೀಸರ ತಂಡ ಸ್ಥಳಕ್ಕೆ ಭೇಟಿ ನೀಡಿ ಭದ್ರತೆ ನೀಡಿದ್ದರು. ಅಲ್ಲದೇ ಜೈಲಿನ ಒಳಗೆ ಹೋಗಿ ಕೈದಿಗಳಿಗೆ ತರಾಟೆಗೆ ತೆಗೆದುಕೊಂಡಿದ್ದರು. ಗಲಾಟೆ ಮಾಡಿ ಗಾಯಗೊಂಡವರು ದಾಂಡೇಲಿಯ ಮುಜಾಮಿಲ್ ಹಾಗೂ ಕುಮಟಾದ ಫರಾನ್ ಛಬ್ಬಿ ಎನ್ನುವರಾಗಿದ್ದಾರೆ. ಕಲ್ಲಿನಿಂದ ಹೊಡೆದುಕೊಂಡು ಗಾಯ ಮಾಡಿಕೊಂಡಿದ್ದ ಇಬ್ಬರ ತಲೆಗೆ ಬಟ್ಟೆ ಸುತ್ತಿ, ಕಾರವಾರದ ಕ್ರೀಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.


ಕೈದಿಗಳನ್ನು ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗುವ ವೇಳೆ, ತಮಗೆ ಜೈಲು ಅಧಿಕಾರಿಗಳು ಮನಬಂದಂತೆ ಥಳಿಸಿದ್ದಾರೆ. ಈ ಗಲಾಟೆಗೆ ಜೈಲು ಅಧಿಕಾರಿಗಳೇ ಕಾರಣ ಎಂದು ಆರೋಪ ಮಾಡುತ್ತ ತೆರಳಿದರು. ಆದರೆ, ಈ ಬಗ್ಗೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಟಿ. ಜಯಕುಮಾರ್ ಕೈದಿಗಳ ಆರೋಪವು ಸುಳ್ಳು ಎಂದು ತಳ್ಳಿಹಾಕಿದ್ದಾರೆ.
''ಕೈದಿಗಳು ಗಲಾಟೆ ಮಾಡಿಕೊಳ್ಳುತ್ತಿರುವ ಮಾಹಿತಿ ಬಂದ ಹಿನ್ನೆಲೆಯಲ್ಲಿ ಜೈಲಿಗೆ ತೆರಳಿ ಪರಿಶೀಲಿಸಲಾಗಿದೆ. ಜೈಲಿನಲ್ಲಿ ತಪಾಸಣೆ ಬಿಗಿಗೊಳಿಸಿದ್ದರಿಂದ ಮತ್ತು ಸರಿಯಾಗಿ ಊಟ ನೀಡುವಂತೆ ಗಲಾಟೆ ನಡೆಸಿದ್ದರು. ಆರಂಭದಲ್ಲಿ ಗಲಾಟೆ ಬಗ್ಗೆ ಕೇಳಿದಾಗ ಜೈಲಾಧಿಕಾರಿಗಳು ಹಲ್ಲೆ ಮಾಡಿರುವುದಾಗಿ ನಮಗೂ ದೂರಿದ್ದರು. ಬಳಿಕ ಜೈಲಿನಲ್ಲಿ ಪರಿಶೀಲನೆ ನಡೆಸಿ, ಕೈದಿಗಳು ಹಾಗೂ ಜೈಲಿನ ಸಿಬ್ಬಂದಿಯಿಂದ ಮಾಹಿತಿ ಪಡೆದು, ಸಿಸಿ ಕ್ಯಾಮರಾ ಪರಿಶೀಲನೆ ನಡೆಸಿದಾಗ ಇಬ್ಬರೂ ಕಲ್ಲಿನಿಂದ ಮೂರ್ನಾಲ್ಕು ಬಾರಿ ಹೊಡೆದುಕೊಂಡಿರುವುದು ಖಚಿತವಾಗಿದೆ. ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ'' ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಟಿ. ಜಯಕುಮಾರ್ ತಿಳಿಸಿದ್ದಾರೆ.
Karwar jail inmates break head and fight, two hospitalized
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm