ಬ್ರೇಕಿಂಗ್ ನ್ಯೂಸ್
30-08-24 11:24 am HK News Desk ಕರ್ನಾಟಕ
ಕಾರವಾರ, ಆ 30: ಕೈದಿಗಳಿಬ್ಬರು ರಂಪಾಟ ಮಾಡಿ, ತಲೆ ಒಡೆದುಕೊಂಡಿರುವ ಘಟನೆ ಜಿಲ್ಲಾ ಕಾರಾಗೃಹದಲ್ಲಿ ನಡೆದಿದೆ.
ಜೈಲಿನೊಳಗೆ ಬಹಳಷ್ಟು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ, ಸೂಕ್ತ ಸೌಲಭ್ಯವಿಲ್ಲ ಹಾಗೂ ಹೊರಗಿನಿಂದ ಯಾವುದೇ ವಸ್ತುಗಳನ್ನು ತೆಗೆದುಕೊಂಡು ಹೋಗಲು ಬಿಡುತ್ತಿಲ್ಲ. ತಮಗೆ ತಂಬಾಕು ಸಿಗುತ್ತಿಲ್ಲ ಎನ್ನುವ ಕಾರಣಕ್ಕೆ ಅಧಿಕಾರಿಗಳ ಜೊತೆ ರಗಳೆ ತೆಗೆದಿದ್ದಾರೆ ಎನ್ನಲಾಗಿದೆ.
ಜೈಲಿನಲ್ಲಿ ಗಲಾಟೆ ನಡೆದ ಸುದ್ದಿ ತಿಳಿಯುತ್ತಿದ್ದಂತೆ, ಪೊಲೀಸರ ತಂಡ ಸ್ಥಳಕ್ಕೆ ಭೇಟಿ ನೀಡಿ ಭದ್ರತೆ ನೀಡಿದ್ದರು. ಅಲ್ಲದೇ ಜೈಲಿನ ಒಳಗೆ ಹೋಗಿ ಕೈದಿಗಳಿಗೆ ತರಾಟೆಗೆ ತೆಗೆದುಕೊಂಡಿದ್ದರು. ಗಲಾಟೆ ಮಾಡಿ ಗಾಯಗೊಂಡವರು ದಾಂಡೇಲಿಯ ಮುಜಾಮಿಲ್ ಹಾಗೂ ಕುಮಟಾದ ಫರಾನ್ ಛಬ್ಬಿ ಎನ್ನುವರಾಗಿದ್ದಾರೆ. ಕಲ್ಲಿನಿಂದ ಹೊಡೆದುಕೊಂಡು ಗಾಯ ಮಾಡಿಕೊಂಡಿದ್ದ ಇಬ್ಬರ ತಲೆಗೆ ಬಟ್ಟೆ ಸುತ್ತಿ, ಕಾರವಾರದ ಕ್ರೀಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.


ಕೈದಿಗಳನ್ನು ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗುವ ವೇಳೆ, ತಮಗೆ ಜೈಲು ಅಧಿಕಾರಿಗಳು ಮನಬಂದಂತೆ ಥಳಿಸಿದ್ದಾರೆ. ಈ ಗಲಾಟೆಗೆ ಜೈಲು ಅಧಿಕಾರಿಗಳೇ ಕಾರಣ ಎಂದು ಆರೋಪ ಮಾಡುತ್ತ ತೆರಳಿದರು. ಆದರೆ, ಈ ಬಗ್ಗೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಟಿ. ಜಯಕುಮಾರ್ ಕೈದಿಗಳ ಆರೋಪವು ಸುಳ್ಳು ಎಂದು ತಳ್ಳಿಹಾಕಿದ್ದಾರೆ.
''ಕೈದಿಗಳು ಗಲಾಟೆ ಮಾಡಿಕೊಳ್ಳುತ್ತಿರುವ ಮಾಹಿತಿ ಬಂದ ಹಿನ್ನೆಲೆಯಲ್ಲಿ ಜೈಲಿಗೆ ತೆರಳಿ ಪರಿಶೀಲಿಸಲಾಗಿದೆ. ಜೈಲಿನಲ್ಲಿ ತಪಾಸಣೆ ಬಿಗಿಗೊಳಿಸಿದ್ದರಿಂದ ಮತ್ತು ಸರಿಯಾಗಿ ಊಟ ನೀಡುವಂತೆ ಗಲಾಟೆ ನಡೆಸಿದ್ದರು. ಆರಂಭದಲ್ಲಿ ಗಲಾಟೆ ಬಗ್ಗೆ ಕೇಳಿದಾಗ ಜೈಲಾಧಿಕಾರಿಗಳು ಹಲ್ಲೆ ಮಾಡಿರುವುದಾಗಿ ನಮಗೂ ದೂರಿದ್ದರು. ಬಳಿಕ ಜೈಲಿನಲ್ಲಿ ಪರಿಶೀಲನೆ ನಡೆಸಿ, ಕೈದಿಗಳು ಹಾಗೂ ಜೈಲಿನ ಸಿಬ್ಬಂದಿಯಿಂದ ಮಾಹಿತಿ ಪಡೆದು, ಸಿಸಿ ಕ್ಯಾಮರಾ ಪರಿಶೀಲನೆ ನಡೆಸಿದಾಗ ಇಬ್ಬರೂ ಕಲ್ಲಿನಿಂದ ಮೂರ್ನಾಲ್ಕು ಬಾರಿ ಹೊಡೆದುಕೊಂಡಿರುವುದು ಖಚಿತವಾಗಿದೆ. ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ'' ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಟಿ. ಜಯಕುಮಾರ್ ತಿಳಿಸಿದ್ದಾರೆ.
Karwar jail inmates break head and fight, two hospitalized
21-12-25 05:33 pm
HK News Desk
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
21-12-25 11:04 pm
Mangalore Correspondent
ಕೇಪು ಜಾತ್ರೆ ಕೋಳಿ ಅಂಕ ಮಾಡಿಸಿದ ಶಾಸಕರ ವಿರುದ್ಧ ಕೇ...
20-12-25 10:53 pm
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
21-12-25 09:36 pm
Mangalore Correspondent
Cyber Fraud: ಸೈಬರ್ ವಂಚಕರಿಗೆ 22 ಲಕ್ಷ ವರ್ಗಾವಣೆ...
21-12-25 08:55 pm
Minor Girl Sexually Assaulted in Puttu: ಜೇನು...
21-12-25 01:18 pm
Fraud Abroad Job Scam, Mangalore, Armenia: ಅರ...
18-12-25 04:53 pm
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am