ಬ್ರೇಕಿಂಗ್ ನ್ಯೂಸ್
31-08-24 11:27 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 31: ಬಿಜೆಪಿ ಸರ್ಕಾರದ ಅವಧಿಯಲ್ಲಿ ಆರೋಗ್ಯ ಇಲಾಖೆಯಲ್ಲಿ ನಡೆದಿದೆ ಎನ್ನಲಾದ ಕೋವಿಡ್ ಹಗರಣ ಕುರಿತ ಪ್ರಕರಣದಲ್ಲಿ ನಿವೃತ್ತ ಜಸ್ಟೀಸ್ ಜಾನ್ ಮೈಕಲ್ ಡಿ ಕುನ್ನಾ ನೇತೃತ್ವದ ಆಯೋಗ ತನಿಖಾ ವರದಿಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಿದೆ.
ಆಮೂಲಕ ವಾಲ್ಮೀಕಿ ನಿಗಮ ಹಗರಣ ಹಾಗೂ ಮುಡಾ ಹಗರಣದ ಬಗ್ಗೆ ದೊಡ್ಡ ಮಟ್ಟದ ಹೋರಾಟ ನಡೆಸುತ್ತಿರುವ ಬಿಜೆಪಿ ನಾಯಕರಿಗೆ ಬಿಗ್ ಶಾಕ್ ನೀಡಲು ಸರ್ಕಾರ ಸಜ್ಜಾಗಿದೆ. ಕೋವಿಡ್ ಸಂದರ್ಭದಲ್ಲಿ 2 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಆರೋಪಿಸುತ್ತಿದ್ದ ಕಾಂಗ್ರೆಸ್ ನಾಯಕರಿಗೆ ಈಗ ಪ್ರಬಲ ಅಸ್ತ್ರ ಸಿಕ್ಕಂತಾಗಿದೆ. ವರದಿ ಕೈಸೇರಿದ ಬೆನ್ನಲ್ಲೇ ಸಿಎಂ ನಿವಾಸದಲ್ಲಿ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ, ಸಚಿವ ಎಂ.ಬಿ ಪಾಟೀಲ್, ಡಾ.ಜಿ ಪರಮೇಶ್ವರ್, ಪ್ರಿಯಾಂಕ್ ಖರ್ಗೆ ಸೇರಿದಂತೆ ಹಲವು ಸರಚಿವರು ಸಮಾಲೋಚನೆ ನಡೆಸಿದ್ದಾರೆ.
ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಸಿದ್ದರಾಮಯ್ಯ ಭೇಟಿ ಮಾಡಿದ ಜಸ್ಟೀಸ್ ಜಾನ್ ಮೈಕಲ್ ಡಿ.ಕುನ್ಹಾ ತನಿಖಾ ವರದಿ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಪೊನ್ನಣ್ಣ, ಸಚಿವರಾದ ಪ್ರಿಯಾಂಕ್ ಖರ್ಗೆ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಇದ್ದರು.
ಬಿಜೆಪಿ ಸರ್ಕಾರದ ಕೋವಿಡ್ ಕಾಲದ ಹಗರಣಗಳ ಆರೋಪಕ್ಕೆ ಸಂಬಂಧಪಟ್ಟಂತೆ ತನಿಖೆ ನಡೆಸಲು ತನಿಖಾ ಆಯೋಗ ರಚಿಸಲಾಗಿತ್ತು. 2023 ಆಗಸ್ಟ್ನಲ್ಲಿ ನಿವೃತ್ತ ಹೈಕೋರ್ಟ್ ನ್ಯಾಯಾಧೀಶ ಜಾನ್ ಮೈಕೆಲ್ ಡಿ.ಕುನ್ಹಾ ಅವರ ನೇತೃತ್ವದಲ್ಲಿ ತನಿಖಾ ಆಯೋಗ ರಚಿಸಿದ್ದ ಸಿದ್ದರಾಮಯ್ಯ ಸರ್ಕಾರ ವರದಿ ನೀಡುವಂತೆ ಸೂಚಿಸಿತ್ತು. ವೆಂಟಿಲೇಟರ್ಗಳ ಖರೀದಿ, ಆಕ್ಸಿಜನ್ ಉಪಕರಣಗಳ ಖರೀದಿ, ನಿರ್ವಹಣೆ ಲೋಪ, ಕೋವಿಡ್-19 ನಿರ್ವಹಣಾ ಉಪಕರಣಗಳು, ರ್ಯಾಪಿಡ್ ಆಂಟಿಜೆನ್ ಟೆಸ್ಟ್ ಕಿಟ್ಗಳ ಖರೀದಿ ಅಕ್ರಮಗಳ ಆರೋಪದ ಬಗ್ಗೆ ತನಿಖೆಗೆ ಸೂಚಿಸಲಾಗಿತ್ತು. ಆಯೋಗ ರಚನೆಯಾಗಿ ವರ್ಷದೊಳಗೆ ತನಿಖಾ ವರದಿ ಸಲ್ಲಿಕೆಯಾಗಿದ್ದು, ಕ್ಯಾಬಿನೆಟ್ನಲ್ಲಿ ಚರ್ಚಿಸಿ ವರದಿ ಬಹಿರಂಗೊಳಿಸುವ ಬಗ್ಗೆ ತೀರ್ಮಾನ ತೆಗೆದುಕೊಳ್ಳುವ ಸಾಧ್ಯತೆ ಇದೆ.
The commission headed by retired Justice John Michael D Cunna has submitted its inquiry report to the state government in the case of the alleged Covid scam in the health department during the BJP government.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
23-07-26 01:51 pm
HK News Staffer
CJP ಪ್ರತಿಭಟನೆಯಲ್ಲಿ ಪೊಲೀಸ್ ದೌರ್ಜನ್ಯ; ತುರ್ತು ವ...
22-07-26 02:32 pm
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am