ಬ್ರೇಕಿಂಗ್ ನ್ಯೂಸ್
02-09-24 02:55 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.2: ಮಲ್ಲಿಕಾರ್ಜುನ ಖರ್ಗೆ ಕುಟುಂಬದ ವಿರುದ್ಧ ಬಂದಿರುವ ದೂರಿನ ಬಗ್ಗೆ ದಾಖಲೆ ಸಹಿತ ವಿವರವಾದ ಮಾಹಿತಿ ನೀಡುವಂತೆ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಸೂಚಿಸಿದ್ದಾರೆ.
ಖರ್ಗೆ ಒಡೆತನದ ಸಿದ್ಧವಿಹಾರ ಟ್ರಸ್ಟ್ಗೆ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯಿಂದ ಸಿಎ ನಿವೇಶನ ನೀಡಿದ ಪ್ರಕರಣದ ವಿವರ ಕೊಡಿ ಎಂದು ಆದೇಶಿಸಿದ್ದಾರೆ. ಈ ಮೂಲಕ ರಾಜ್ಯಪಾಲರು ಮತ್ತೊಂದು ದಾಳ ಉರುಳಿಸಿದ್ದಾರೆ.
ಇತ್ತೀಚೆಗಷ್ಟೇ ಕೆಐಎಡಿಬಿ ಸಿಎ ನಿವೇಶನ ಮಾರಾಟ ಪ್ರಕರಣ ಸಂಬಂಧ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ರಾಜ್ಯಪಾಲರಿಗೆ ದೂರು ನೀಡಿದ್ದರು. ನಾರಾಯಣಸ್ವಾಮಿ ದೂರಿನ ಹಿನ್ನೆಲೆಯಲ್ಲಿ ಸರ್ಕಾರದಿಂದ ಹೆಚ್ಚಿನ ವಿವರಣೆ ನೀಡುವಂತೆ ರಾಜ್ಯಪಾಲರು ಮುಖ್ಯ ಕಾರ್ಯದರ್ಶಿಗೆ ಸೂಚಿಸಿದ್ದಾರೆ.
ಬೆಂಗಳೂರಿನ ಏರೋಸ್ಪೇಸ್ ಪಾರ್ಕ್ನಲ್ಲಿ 5 ಎಕರೆ ನಾಗರಿಕ ಸೌಕರ್ಯಗಳ ನಿವೇಶನವನ್ನು ಕೆಐಎಡಿಬಿಯಿಂದ ಖರ್ಗೆ ಕುಟುಂಬದ ಒಡೆತನದಲ್ಲಿರುವ ಸಿದ್ಧವಿಹಾರ ಟ್ರಸ್ಟ್ಗೆ ಮಂಜೂರು ಮಾಡಲಾಗಿದೆ. ಮಾರ್ಚ್ 4 ರಂದು ಅರ್ಜಿಗಳ ಪರಿಶೀಲನೆ ನಡೆದಿದ್ದು, ಮಾರ್ಚ್ 5 ರಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ನಿರ್ಣಯ ಕೈಗೊಂಡು ಮಾರ್ಚ್ 6 ರಿಂದ ಹಂಚಿಕೆ ಪತ್ರಗಳನ್ನು ನೀಡಲಾಗಿದೆ. ಇಷ್ಟೊಂದು ಅವಸರದಲ್ಲಿ ಹಂಚಿಕೆ ಮಾಡಿದ್ದು ಯಾಕೆ ಎಂದು ಛಲವಾದಿ ನಾರಾಯಣಸ್ವಾಮಿ ಪ್ರಶ್ನಿಸಿದ್ದರು.
ಟ್ರಸ್ಟ್ಗೆ ನೀಡಲಾಗಿರುವ ನಿವೇಶನ ಹಂಚಿಕೆಯಲ್ಲಿ ಹಲವಾರು ಲೋಪಗಳಾಗಿವೆ. ಅಕ್ರಮದಿಂದಾಗಿ ಸರ್ಕಾರಕ್ಕೆ ಸುಮಾರು ರೂ. 1,000 ಕೋಟಿ ನಷ್ಟವಾಗಿದೆ ಎಂದು ಆರೋಪಿಸಿದ್ದರು. ಅರ್ಜಿ ಸಲ್ಲಿಸಲು ಕೇವಲ 14 ದಿನಗಳ ಕಾಲಾವಕಾಶ ನೀಡಿ ತರಾತುರಿಯಲ್ಲಿ ಪ್ರಕ್ರಿಯೆ ಮುಗಿಸಿರುವುದರಿಂದ ಸಿಎ ನಿವೇಶನಗಳ ಹಂಚಿಕೆಗೆ ಅಧಿಸೂಚನೆ ಹೊರಡಿಸಿರುವ ಬಗ್ಗೆಯೂ ಸಾರ್ವಜನಿಕರಿಗೆ ತಿಳಿಯದಂತಾಗಿದೆ. ಇದು ಕೆಐಎಡಿಬಿ ಇತಿಹಾಸದಲ್ಲಿ ನಡೆದಿರುವ ಅತಿದೊಡ್ಡ ಲೋಪ ಎಂದು ಆರೋಪಿಸಿದ್ದಾರೆ.
Karnataka Governor Thaawarchand Gehlot has asked Chief Secretary Shalini Rajneesh to submit a detailed report on the complaint filed against the family of Mallikarjun Kharge.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
30-06-26 11:02 pm
HK News Staffer
ಪಾಗಲ್ ಪ್ರೇಮಿ ಕೇಸ್ ಬೆನ್ನಲ್ಲೇ ಬಯಲಾಯ್ತು ಅಕ್ರಮ ಬ...
30-06-26 03:48 pm
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm