ಬ್ರೇಕಿಂಗ್ ನ್ಯೂಸ್
02-09-24 02:55 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.2: ಮಲ್ಲಿಕಾರ್ಜುನ ಖರ್ಗೆ ಕುಟುಂಬದ ವಿರುದ್ಧ ಬಂದಿರುವ ದೂರಿನ ಬಗ್ಗೆ ದಾಖಲೆ ಸಹಿತ ವಿವರವಾದ ಮಾಹಿತಿ ನೀಡುವಂತೆ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಸೂಚಿಸಿದ್ದಾರೆ.
ಖರ್ಗೆ ಒಡೆತನದ ಸಿದ್ಧವಿಹಾರ ಟ್ರಸ್ಟ್ಗೆ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯಿಂದ ಸಿಎ ನಿವೇಶನ ನೀಡಿದ ಪ್ರಕರಣದ ವಿವರ ಕೊಡಿ ಎಂದು ಆದೇಶಿಸಿದ್ದಾರೆ. ಈ ಮೂಲಕ ರಾಜ್ಯಪಾಲರು ಮತ್ತೊಂದು ದಾಳ ಉರುಳಿಸಿದ್ದಾರೆ.
ಇತ್ತೀಚೆಗಷ್ಟೇ ಕೆಐಎಡಿಬಿ ಸಿಎ ನಿವೇಶನ ಮಾರಾಟ ಪ್ರಕರಣ ಸಂಬಂಧ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ರಾಜ್ಯಪಾಲರಿಗೆ ದೂರು ನೀಡಿದ್ದರು. ನಾರಾಯಣಸ್ವಾಮಿ ದೂರಿನ ಹಿನ್ನೆಲೆಯಲ್ಲಿ ಸರ್ಕಾರದಿಂದ ಹೆಚ್ಚಿನ ವಿವರಣೆ ನೀಡುವಂತೆ ರಾಜ್ಯಪಾಲರು ಮುಖ್ಯ ಕಾರ್ಯದರ್ಶಿಗೆ ಸೂಚಿಸಿದ್ದಾರೆ.
ಬೆಂಗಳೂರಿನ ಏರೋಸ್ಪೇಸ್ ಪಾರ್ಕ್ನಲ್ಲಿ 5 ಎಕರೆ ನಾಗರಿಕ ಸೌಕರ್ಯಗಳ ನಿವೇಶನವನ್ನು ಕೆಐಎಡಿಬಿಯಿಂದ ಖರ್ಗೆ ಕುಟುಂಬದ ಒಡೆತನದಲ್ಲಿರುವ ಸಿದ್ಧವಿಹಾರ ಟ್ರಸ್ಟ್ಗೆ ಮಂಜೂರು ಮಾಡಲಾಗಿದೆ. ಮಾರ್ಚ್ 4 ರಂದು ಅರ್ಜಿಗಳ ಪರಿಶೀಲನೆ ನಡೆದಿದ್ದು, ಮಾರ್ಚ್ 5 ರಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ನಿರ್ಣಯ ಕೈಗೊಂಡು ಮಾರ್ಚ್ 6 ರಿಂದ ಹಂಚಿಕೆ ಪತ್ರಗಳನ್ನು ನೀಡಲಾಗಿದೆ. ಇಷ್ಟೊಂದು ಅವಸರದಲ್ಲಿ ಹಂಚಿಕೆ ಮಾಡಿದ್ದು ಯಾಕೆ ಎಂದು ಛಲವಾದಿ ನಾರಾಯಣಸ್ವಾಮಿ ಪ್ರಶ್ನಿಸಿದ್ದರು.
ಟ್ರಸ್ಟ್ಗೆ ನೀಡಲಾಗಿರುವ ನಿವೇಶನ ಹಂಚಿಕೆಯಲ್ಲಿ ಹಲವಾರು ಲೋಪಗಳಾಗಿವೆ. ಅಕ್ರಮದಿಂದಾಗಿ ಸರ್ಕಾರಕ್ಕೆ ಸುಮಾರು ರೂ. 1,000 ಕೋಟಿ ನಷ್ಟವಾಗಿದೆ ಎಂದು ಆರೋಪಿಸಿದ್ದರು. ಅರ್ಜಿ ಸಲ್ಲಿಸಲು ಕೇವಲ 14 ದಿನಗಳ ಕಾಲಾವಕಾಶ ನೀಡಿ ತರಾತುರಿಯಲ್ಲಿ ಪ್ರಕ್ರಿಯೆ ಮುಗಿಸಿರುವುದರಿಂದ ಸಿಎ ನಿವೇಶನಗಳ ಹಂಚಿಕೆಗೆ ಅಧಿಸೂಚನೆ ಹೊರಡಿಸಿರುವ ಬಗ್ಗೆಯೂ ಸಾರ್ವಜನಿಕರಿಗೆ ತಿಳಿಯದಂತಾಗಿದೆ. ಇದು ಕೆಐಎಡಿಬಿ ಇತಿಹಾಸದಲ್ಲಿ ನಡೆದಿರುವ ಅತಿದೊಡ್ಡ ಲೋಪ ಎಂದು ಆರೋಪಿಸಿದ್ದಾರೆ.
Karnataka Governor Thaawarchand Gehlot has asked Chief Secretary Shalini Rajneesh to submit a detailed report on the complaint filed against the family of Mallikarjun Kharge.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
23-07-26 01:51 pm
HK News Staffer
CJP ಪ್ರತಿಭಟನೆಯಲ್ಲಿ ಪೊಲೀಸ್ ದೌರ್ಜನ್ಯ; ತುರ್ತು ವ...
22-07-26 02:32 pm
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am