ಬ್ರೇಕಿಂಗ್ ನ್ಯೂಸ್
02-09-24 02:55 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.2: ಮಲ್ಲಿಕಾರ್ಜುನ ಖರ್ಗೆ ಕುಟುಂಬದ ವಿರುದ್ಧ ಬಂದಿರುವ ದೂರಿನ ಬಗ್ಗೆ ದಾಖಲೆ ಸಹಿತ ವಿವರವಾದ ಮಾಹಿತಿ ನೀಡುವಂತೆ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಸೂಚಿಸಿದ್ದಾರೆ.
ಖರ್ಗೆ ಒಡೆತನದ ಸಿದ್ಧವಿಹಾರ ಟ್ರಸ್ಟ್ಗೆ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯಿಂದ ಸಿಎ ನಿವೇಶನ ನೀಡಿದ ಪ್ರಕರಣದ ವಿವರ ಕೊಡಿ ಎಂದು ಆದೇಶಿಸಿದ್ದಾರೆ. ಈ ಮೂಲಕ ರಾಜ್ಯಪಾಲರು ಮತ್ತೊಂದು ದಾಳ ಉರುಳಿಸಿದ್ದಾರೆ.
ಇತ್ತೀಚೆಗಷ್ಟೇ ಕೆಐಎಡಿಬಿ ಸಿಎ ನಿವೇಶನ ಮಾರಾಟ ಪ್ರಕರಣ ಸಂಬಂಧ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ರಾಜ್ಯಪಾಲರಿಗೆ ದೂರು ನೀಡಿದ್ದರು. ನಾರಾಯಣಸ್ವಾಮಿ ದೂರಿನ ಹಿನ್ನೆಲೆಯಲ್ಲಿ ಸರ್ಕಾರದಿಂದ ಹೆಚ್ಚಿನ ವಿವರಣೆ ನೀಡುವಂತೆ ರಾಜ್ಯಪಾಲರು ಮುಖ್ಯ ಕಾರ್ಯದರ್ಶಿಗೆ ಸೂಚಿಸಿದ್ದಾರೆ.
ಬೆಂಗಳೂರಿನ ಏರೋಸ್ಪೇಸ್ ಪಾರ್ಕ್ನಲ್ಲಿ 5 ಎಕರೆ ನಾಗರಿಕ ಸೌಕರ್ಯಗಳ ನಿವೇಶನವನ್ನು ಕೆಐಎಡಿಬಿಯಿಂದ ಖರ್ಗೆ ಕುಟುಂಬದ ಒಡೆತನದಲ್ಲಿರುವ ಸಿದ್ಧವಿಹಾರ ಟ್ರಸ್ಟ್ಗೆ ಮಂಜೂರು ಮಾಡಲಾಗಿದೆ. ಮಾರ್ಚ್ 4 ರಂದು ಅರ್ಜಿಗಳ ಪರಿಶೀಲನೆ ನಡೆದಿದ್ದು, ಮಾರ್ಚ್ 5 ರಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ನಿರ್ಣಯ ಕೈಗೊಂಡು ಮಾರ್ಚ್ 6 ರಿಂದ ಹಂಚಿಕೆ ಪತ್ರಗಳನ್ನು ನೀಡಲಾಗಿದೆ. ಇಷ್ಟೊಂದು ಅವಸರದಲ್ಲಿ ಹಂಚಿಕೆ ಮಾಡಿದ್ದು ಯಾಕೆ ಎಂದು ಛಲವಾದಿ ನಾರಾಯಣಸ್ವಾಮಿ ಪ್ರಶ್ನಿಸಿದ್ದರು.
ಟ್ರಸ್ಟ್ಗೆ ನೀಡಲಾಗಿರುವ ನಿವೇಶನ ಹಂಚಿಕೆಯಲ್ಲಿ ಹಲವಾರು ಲೋಪಗಳಾಗಿವೆ. ಅಕ್ರಮದಿಂದಾಗಿ ಸರ್ಕಾರಕ್ಕೆ ಸುಮಾರು ರೂ. 1,000 ಕೋಟಿ ನಷ್ಟವಾಗಿದೆ ಎಂದು ಆರೋಪಿಸಿದ್ದರು. ಅರ್ಜಿ ಸಲ್ಲಿಸಲು ಕೇವಲ 14 ದಿನಗಳ ಕಾಲಾವಕಾಶ ನೀಡಿ ತರಾತುರಿಯಲ್ಲಿ ಪ್ರಕ್ರಿಯೆ ಮುಗಿಸಿರುವುದರಿಂದ ಸಿಎ ನಿವೇಶನಗಳ ಹಂಚಿಕೆಗೆ ಅಧಿಸೂಚನೆ ಹೊರಡಿಸಿರುವ ಬಗ್ಗೆಯೂ ಸಾರ್ವಜನಿಕರಿಗೆ ತಿಳಿಯದಂತಾಗಿದೆ. ಇದು ಕೆಐಎಡಿಬಿ ಇತಿಹಾಸದಲ್ಲಿ ನಡೆದಿರುವ ಅತಿದೊಡ್ಡ ಲೋಪ ಎಂದು ಆರೋಪಿಸಿದ್ದಾರೆ.
Karnataka Governor Thaawarchand Gehlot has asked Chief Secretary Shalini Rajneesh to submit a detailed report on the complaint filed against the family of Mallikarjun Kharge.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm