ಬ್ರೇಕಿಂಗ್ ನ್ಯೂಸ್
02-09-24 02:55 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.2: ಮಲ್ಲಿಕಾರ್ಜುನ ಖರ್ಗೆ ಕುಟುಂಬದ ವಿರುದ್ಧ ಬಂದಿರುವ ದೂರಿನ ಬಗ್ಗೆ ದಾಖಲೆ ಸಹಿತ ವಿವರವಾದ ಮಾಹಿತಿ ನೀಡುವಂತೆ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಸೂಚಿಸಿದ್ದಾರೆ.
ಖರ್ಗೆ ಒಡೆತನದ ಸಿದ್ಧವಿಹಾರ ಟ್ರಸ್ಟ್ಗೆ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯಿಂದ ಸಿಎ ನಿವೇಶನ ನೀಡಿದ ಪ್ರಕರಣದ ವಿವರ ಕೊಡಿ ಎಂದು ಆದೇಶಿಸಿದ್ದಾರೆ. ಈ ಮೂಲಕ ರಾಜ್ಯಪಾಲರು ಮತ್ತೊಂದು ದಾಳ ಉರುಳಿಸಿದ್ದಾರೆ.
ಇತ್ತೀಚೆಗಷ್ಟೇ ಕೆಐಎಡಿಬಿ ಸಿಎ ನಿವೇಶನ ಮಾರಾಟ ಪ್ರಕರಣ ಸಂಬಂಧ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ರಾಜ್ಯಪಾಲರಿಗೆ ದೂರು ನೀಡಿದ್ದರು. ನಾರಾಯಣಸ್ವಾಮಿ ದೂರಿನ ಹಿನ್ನೆಲೆಯಲ್ಲಿ ಸರ್ಕಾರದಿಂದ ಹೆಚ್ಚಿನ ವಿವರಣೆ ನೀಡುವಂತೆ ರಾಜ್ಯಪಾಲರು ಮುಖ್ಯ ಕಾರ್ಯದರ್ಶಿಗೆ ಸೂಚಿಸಿದ್ದಾರೆ.
ಬೆಂಗಳೂರಿನ ಏರೋಸ್ಪೇಸ್ ಪಾರ್ಕ್ನಲ್ಲಿ 5 ಎಕರೆ ನಾಗರಿಕ ಸೌಕರ್ಯಗಳ ನಿವೇಶನವನ್ನು ಕೆಐಎಡಿಬಿಯಿಂದ ಖರ್ಗೆ ಕುಟುಂಬದ ಒಡೆತನದಲ್ಲಿರುವ ಸಿದ್ಧವಿಹಾರ ಟ್ರಸ್ಟ್ಗೆ ಮಂಜೂರು ಮಾಡಲಾಗಿದೆ. ಮಾರ್ಚ್ 4 ರಂದು ಅರ್ಜಿಗಳ ಪರಿಶೀಲನೆ ನಡೆದಿದ್ದು, ಮಾರ್ಚ್ 5 ರಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ನಿರ್ಣಯ ಕೈಗೊಂಡು ಮಾರ್ಚ್ 6 ರಿಂದ ಹಂಚಿಕೆ ಪತ್ರಗಳನ್ನು ನೀಡಲಾಗಿದೆ. ಇಷ್ಟೊಂದು ಅವಸರದಲ್ಲಿ ಹಂಚಿಕೆ ಮಾಡಿದ್ದು ಯಾಕೆ ಎಂದು ಛಲವಾದಿ ನಾರಾಯಣಸ್ವಾಮಿ ಪ್ರಶ್ನಿಸಿದ್ದರು.
ಟ್ರಸ್ಟ್ಗೆ ನೀಡಲಾಗಿರುವ ನಿವೇಶನ ಹಂಚಿಕೆಯಲ್ಲಿ ಹಲವಾರು ಲೋಪಗಳಾಗಿವೆ. ಅಕ್ರಮದಿಂದಾಗಿ ಸರ್ಕಾರಕ್ಕೆ ಸುಮಾರು ರೂ. 1,000 ಕೋಟಿ ನಷ್ಟವಾಗಿದೆ ಎಂದು ಆರೋಪಿಸಿದ್ದರು. ಅರ್ಜಿ ಸಲ್ಲಿಸಲು ಕೇವಲ 14 ದಿನಗಳ ಕಾಲಾವಕಾಶ ನೀಡಿ ತರಾತುರಿಯಲ್ಲಿ ಪ್ರಕ್ರಿಯೆ ಮುಗಿಸಿರುವುದರಿಂದ ಸಿಎ ನಿವೇಶನಗಳ ಹಂಚಿಕೆಗೆ ಅಧಿಸೂಚನೆ ಹೊರಡಿಸಿರುವ ಬಗ್ಗೆಯೂ ಸಾರ್ವಜನಿಕರಿಗೆ ತಿಳಿಯದಂತಾಗಿದೆ. ಇದು ಕೆಐಎಡಿಬಿ ಇತಿಹಾಸದಲ್ಲಿ ನಡೆದಿರುವ ಅತಿದೊಡ್ಡ ಲೋಪ ಎಂದು ಆರೋಪಿಸಿದ್ದಾರೆ.
Karnataka Governor Thaawarchand Gehlot has asked Chief Secretary Shalini Rajneesh to submit a detailed report on the complaint filed against the family of Mallikarjun Kharge.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
10-04-26 01:26 pm
HK News Desk
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
10-04-26 09:49 pm
Mangaluru Staffee
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
Besant Evening College, BPL Cricket: ಬೆಸೆಂಟ್...
07-04-26 01:22 pm
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm