ಬ್ರೇಕಿಂಗ್ ನ್ಯೂಸ್
02-09-24 02:55 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.2: ಮಲ್ಲಿಕಾರ್ಜುನ ಖರ್ಗೆ ಕುಟುಂಬದ ವಿರುದ್ಧ ಬಂದಿರುವ ದೂರಿನ ಬಗ್ಗೆ ದಾಖಲೆ ಸಹಿತ ವಿವರವಾದ ಮಾಹಿತಿ ನೀಡುವಂತೆ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಸೂಚಿಸಿದ್ದಾರೆ.
ಖರ್ಗೆ ಒಡೆತನದ ಸಿದ್ಧವಿಹಾರ ಟ್ರಸ್ಟ್ಗೆ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯಿಂದ ಸಿಎ ನಿವೇಶನ ನೀಡಿದ ಪ್ರಕರಣದ ವಿವರ ಕೊಡಿ ಎಂದು ಆದೇಶಿಸಿದ್ದಾರೆ. ಈ ಮೂಲಕ ರಾಜ್ಯಪಾಲರು ಮತ್ತೊಂದು ದಾಳ ಉರುಳಿಸಿದ್ದಾರೆ.
ಇತ್ತೀಚೆಗಷ್ಟೇ ಕೆಐಎಡಿಬಿ ಸಿಎ ನಿವೇಶನ ಮಾರಾಟ ಪ್ರಕರಣ ಸಂಬಂಧ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ರಾಜ್ಯಪಾಲರಿಗೆ ದೂರು ನೀಡಿದ್ದರು. ನಾರಾಯಣಸ್ವಾಮಿ ದೂರಿನ ಹಿನ್ನೆಲೆಯಲ್ಲಿ ಸರ್ಕಾರದಿಂದ ಹೆಚ್ಚಿನ ವಿವರಣೆ ನೀಡುವಂತೆ ರಾಜ್ಯಪಾಲರು ಮುಖ್ಯ ಕಾರ್ಯದರ್ಶಿಗೆ ಸೂಚಿಸಿದ್ದಾರೆ.
ಬೆಂಗಳೂರಿನ ಏರೋಸ್ಪೇಸ್ ಪಾರ್ಕ್ನಲ್ಲಿ 5 ಎಕರೆ ನಾಗರಿಕ ಸೌಕರ್ಯಗಳ ನಿವೇಶನವನ್ನು ಕೆಐಎಡಿಬಿಯಿಂದ ಖರ್ಗೆ ಕುಟುಂಬದ ಒಡೆತನದಲ್ಲಿರುವ ಸಿದ್ಧವಿಹಾರ ಟ್ರಸ್ಟ್ಗೆ ಮಂಜೂರು ಮಾಡಲಾಗಿದೆ. ಮಾರ್ಚ್ 4 ರಂದು ಅರ್ಜಿಗಳ ಪರಿಶೀಲನೆ ನಡೆದಿದ್ದು, ಮಾರ್ಚ್ 5 ರಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ನಿರ್ಣಯ ಕೈಗೊಂಡು ಮಾರ್ಚ್ 6 ರಿಂದ ಹಂಚಿಕೆ ಪತ್ರಗಳನ್ನು ನೀಡಲಾಗಿದೆ. ಇಷ್ಟೊಂದು ಅವಸರದಲ್ಲಿ ಹಂಚಿಕೆ ಮಾಡಿದ್ದು ಯಾಕೆ ಎಂದು ಛಲವಾದಿ ನಾರಾಯಣಸ್ವಾಮಿ ಪ್ರಶ್ನಿಸಿದ್ದರು.
ಟ್ರಸ್ಟ್ಗೆ ನೀಡಲಾಗಿರುವ ನಿವೇಶನ ಹಂಚಿಕೆಯಲ್ಲಿ ಹಲವಾರು ಲೋಪಗಳಾಗಿವೆ. ಅಕ್ರಮದಿಂದಾಗಿ ಸರ್ಕಾರಕ್ಕೆ ಸುಮಾರು ರೂ. 1,000 ಕೋಟಿ ನಷ್ಟವಾಗಿದೆ ಎಂದು ಆರೋಪಿಸಿದ್ದರು. ಅರ್ಜಿ ಸಲ್ಲಿಸಲು ಕೇವಲ 14 ದಿನಗಳ ಕಾಲಾವಕಾಶ ನೀಡಿ ತರಾತುರಿಯಲ್ಲಿ ಪ್ರಕ್ರಿಯೆ ಮುಗಿಸಿರುವುದರಿಂದ ಸಿಎ ನಿವೇಶನಗಳ ಹಂಚಿಕೆಗೆ ಅಧಿಸೂಚನೆ ಹೊರಡಿಸಿರುವ ಬಗ್ಗೆಯೂ ಸಾರ್ವಜನಿಕರಿಗೆ ತಿಳಿಯದಂತಾಗಿದೆ. ಇದು ಕೆಐಎಡಿಬಿ ಇತಿಹಾಸದಲ್ಲಿ ನಡೆದಿರುವ ಅತಿದೊಡ್ಡ ಲೋಪ ಎಂದು ಆರೋಪಿಸಿದ್ದಾರೆ.
Karnataka Governor Thaawarchand Gehlot has asked Chief Secretary Shalini Rajneesh to submit a detailed report on the complaint filed against the family of Mallikarjun Kharge.
21-04-25 07:27 pm
Bangalore Correspondent
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm