ಬ್ರೇಕಿಂಗ್ ನ್ಯೂಸ್
03-09-24 11:10 am HK News Desk ಕರ್ನಾಟಕ
ಶಿವಮೊಗ್ಗ, ಸೆ 03: ವಾಟ್ಸ್ಆ್ಯಪ್ ಸ್ಟೇಟಸ್ನಲ್ಲಿ ಡೆತ್ನೋಟ್ ಬರೆದಿಟ್ಟು ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆಯಾಗಿದ್ದಾನೆ. ಕಳೆದ ಶನಿವಾರ ತೀರ್ಥಹಳ್ಳಿ ತಾಲೂಕು ಇಂದಾವರ ಗ್ರಾಮದ ಜಯದೀಪ್(24) ಎಂಬಾತ ತನ್ನ ಸ್ಟೇಟಸ್ ಹಾಕಿ ನಾಪತ್ತೆಯಾಗಿದ್ದ. ಈತನ ಬೈಕ್ ತೀರ್ಥಹಳ್ಳಿಯ ತುಂಗಾ ನದಿಯ ಪಕ್ಕದಲ್ಲಿ ಪತ್ತೆಯಾಗಿತ್ತು. ಪೋಷಕರು ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಮಗ ನಾಪತ್ತೆಯಾದ ಕುರಿತು ದೂರು ದಾಖಲಿಸಿದ್ದರು.
ಇದರಿಂದ ಕಳೆದ ಎರಡು ದಿನಗಳಿಂದ ತೀರ್ಥಹಳ್ಳಿ ಪೊಲೀಸರು ಹಾಗೂ ಅಗ್ನಿ ಶಾಮಕದಳವರು ಜಯದೀಪ್ ಶವಕ್ಕಾಗಿ ತುಂಗಾ ನದಿಯಲ್ಲಿ ಹುಡುಕಾಟ ನಡೆಸಿದ್ದರು. ಸೋಮವಾರ ಸಂಜೆ ತೀರ್ಥಹಳ್ಳಿಯ ಸ್ಮಶಾನಕಟ್ಟೆ ಸಮೀಪ ನದಿಯಲ್ಲಿ ಮೃತದೇಹ ಸಿಕ್ಕಿದೆ.
ಜಯದೀಪ್ ನಾಪತ್ತೆಯಾಗುವ ಮುನ್ನ ತನ್ನ ಮೊಬೈಲ್ನಲ್ಲಿ ಮೂರು ಪುಟದ ಡೆತ್ನೋಟನ್ನು ವಾಟ್ಸ್ಆ್ಯಪ್ ಸ್ಟೇಟಸ್ಗೆ ಅಪ್ಲೋಡ್ ಮಾಡಿ ನಾಪತ್ತೆಯಾಗಿದ್ದ. ಇದರಲ್ಲಿ ಪ್ರೀತಿಸಲು ಹುಡುಗಿ ಸಿಕ್ಕಿಲ್ಲ ಎಂಬುದರ ಜೊತೆಗೆ ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಕಳೆದುಕೊಂಡಿದ್ದೇನೆ ಎಂದು ಬರೆದಿದ್ದಾನೆ. ನಾನು ಬದುಕಲು ಬೇರೆ ದಾರಿ ಹುಡುಕಬಹುದಾಗಿತ್ತು. ಆದರೆ, ಸಾವಿನ ದಾರಿ ಕರೆಯುತ್ತಿದೆ. ತಂದೆ-ತಾಯಿ ನನ್ನನ್ನು ಕ್ಷಮಿಸಿ. ನಾನು ಸಾಲ ಮಾಡಿದ್ದನ್ನು ನಿಮ್ಮ ಮೇಲೆ ಬಿಟ್ಟು ಹೋಗುತ್ತಿದ್ದೇನೆ ಎಂದು ಬೇಸರ ಮಾಡಿಕೊಳ್ಳಬೇಡಿ. ನನ್ನ ಬೈಕ್ ಮಾರಿ ಅದರಲ್ಲಿ ಎಲ್ಲರಿಗೂ ಸ್ವಲ್ಪ ಸ್ವಲ್ಪ ಹಣ ಕೊಟ್ಟು ಸಾಲ ತೀರಿಸಿ ಎಂದು ಬರೆದಿದ್ದಾನೆ.
ಮೃತ ಯುವಕ ಜಯದೀಪ್ ಓದಿನಲ್ಲಿ ಮುಂದಿದ್ದ. ಆದರೆ ತನಗೆ ಪ್ರೀತಿ ಮಾಡಲು ಯುವತಿ ಸಿಗುತ್ತಿಲ್ಲ ಅಂತಾ ನೊಂದಿದ್ದ. ಜೊತೆಗೆ ಆನ್ಲೈನ್ನಲ್ಲಿ ಹಣ ತೊಡಗಿಸಲು ಸಾಲ ಮಾಡಿಕೊಂಡಿದ್ದ. ಈಗಾಗಿ ಮನನೊಂದ ಯುವಕ ವಾಟ್ಸಪ್ ಸ್ಟೇಟಸ್ನಲ್ಲಿ ಡೆತ್ ಹಂಚಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ತುಂಗಾನದಿಯಿಂದ ಮೃತದೇಹ ಹೊರ ತೆಗೆದು, ಮರಣೋತ್ತರ ಶವ ಪರೀಕ್ಷೆ ನಡೆಸಿ, ಕುಟುಂಬಸ್ಥರಿಗೆ ಹಸ್ತಾಂತರಿಸಿದರು. ಘಟನೆ ಕುರಿತು ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Shivamogga 24 year old youth commits suicide by jumping into river, posts death note on whatsapp. The deceased has been identified as Jayadeep.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 10:50 pm
Mangalore Correspondent
Yenepoya Hospital, Mangalore: ಯೆನಪೋಯ ಆಸ್ಪತ್ರೆ...
10-09-25 08:46 pm
ಕೊಲ್ಲೂರು ಮೂಕಾಂಬಿಕೆಗೆ ನಾಲ್ಕು ಕೋಟಿ ಮೌಲ್ಯದ ವಜ್ರ...
10-09-25 08:14 pm
Mangalore, Baikampady Fire, Aromazen: ಬೈಕಂಪಾಡ...
10-09-25 02:10 pm
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm