ಬ್ರೇಕಿಂಗ್ ನ್ಯೂಸ್
03-09-24 11:10 am HK News Desk ಕರ್ನಾಟಕ
ಶಿವಮೊಗ್ಗ, ಸೆ 03: ವಾಟ್ಸ್ಆ್ಯಪ್ ಸ್ಟೇಟಸ್ನಲ್ಲಿ ಡೆತ್ನೋಟ್ ಬರೆದಿಟ್ಟು ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆಯಾಗಿದ್ದಾನೆ. ಕಳೆದ ಶನಿವಾರ ತೀರ್ಥಹಳ್ಳಿ ತಾಲೂಕು ಇಂದಾವರ ಗ್ರಾಮದ ಜಯದೀಪ್(24) ಎಂಬಾತ ತನ್ನ ಸ್ಟೇಟಸ್ ಹಾಕಿ ನಾಪತ್ತೆಯಾಗಿದ್ದ. ಈತನ ಬೈಕ್ ತೀರ್ಥಹಳ್ಳಿಯ ತುಂಗಾ ನದಿಯ ಪಕ್ಕದಲ್ಲಿ ಪತ್ತೆಯಾಗಿತ್ತು. ಪೋಷಕರು ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಮಗ ನಾಪತ್ತೆಯಾದ ಕುರಿತು ದೂರು ದಾಖಲಿಸಿದ್ದರು.
ಇದರಿಂದ ಕಳೆದ ಎರಡು ದಿನಗಳಿಂದ ತೀರ್ಥಹಳ್ಳಿ ಪೊಲೀಸರು ಹಾಗೂ ಅಗ್ನಿ ಶಾಮಕದಳವರು ಜಯದೀಪ್ ಶವಕ್ಕಾಗಿ ತುಂಗಾ ನದಿಯಲ್ಲಿ ಹುಡುಕಾಟ ನಡೆಸಿದ್ದರು. ಸೋಮವಾರ ಸಂಜೆ ತೀರ್ಥಹಳ್ಳಿಯ ಸ್ಮಶಾನಕಟ್ಟೆ ಸಮೀಪ ನದಿಯಲ್ಲಿ ಮೃತದೇಹ ಸಿಕ್ಕಿದೆ.

ಜಯದೀಪ್ ನಾಪತ್ತೆಯಾಗುವ ಮುನ್ನ ತನ್ನ ಮೊಬೈಲ್ನಲ್ಲಿ ಮೂರು ಪುಟದ ಡೆತ್ನೋಟನ್ನು ವಾಟ್ಸ್ಆ್ಯಪ್ ಸ್ಟೇಟಸ್ಗೆ ಅಪ್ಲೋಡ್ ಮಾಡಿ ನಾಪತ್ತೆಯಾಗಿದ್ದ. ಇದರಲ್ಲಿ ಪ್ರೀತಿಸಲು ಹುಡುಗಿ ಸಿಕ್ಕಿಲ್ಲ ಎಂಬುದರ ಜೊತೆಗೆ ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಕಳೆದುಕೊಂಡಿದ್ದೇನೆ ಎಂದು ಬರೆದಿದ್ದಾನೆ. ನಾನು ಬದುಕಲು ಬೇರೆ ದಾರಿ ಹುಡುಕಬಹುದಾಗಿತ್ತು. ಆದರೆ, ಸಾವಿನ ದಾರಿ ಕರೆಯುತ್ತಿದೆ. ತಂದೆ-ತಾಯಿ ನನ್ನನ್ನು ಕ್ಷಮಿಸಿ. ನಾನು ಸಾಲ ಮಾಡಿದ್ದನ್ನು ನಿಮ್ಮ ಮೇಲೆ ಬಿಟ್ಟು ಹೋಗುತ್ತಿದ್ದೇನೆ ಎಂದು ಬೇಸರ ಮಾಡಿಕೊಳ್ಳಬೇಡಿ. ನನ್ನ ಬೈಕ್ ಮಾರಿ ಅದರಲ್ಲಿ ಎಲ್ಲರಿಗೂ ಸ್ವಲ್ಪ ಸ್ವಲ್ಪ ಹಣ ಕೊಟ್ಟು ಸಾಲ ತೀರಿಸಿ ಎಂದು ಬರೆದಿದ್ದಾನೆ.
ಮೃತ ಯುವಕ ಜಯದೀಪ್ ಓದಿನಲ್ಲಿ ಮುಂದಿದ್ದ. ಆದರೆ ತನಗೆ ಪ್ರೀತಿ ಮಾಡಲು ಯುವತಿ ಸಿಗುತ್ತಿಲ್ಲ ಅಂತಾ ನೊಂದಿದ್ದ. ಜೊತೆಗೆ ಆನ್ಲೈನ್ನಲ್ಲಿ ಹಣ ತೊಡಗಿಸಲು ಸಾಲ ಮಾಡಿಕೊಂಡಿದ್ದ. ಈಗಾಗಿ ಮನನೊಂದ ಯುವಕ ವಾಟ್ಸಪ್ ಸ್ಟೇಟಸ್ನಲ್ಲಿ ಡೆತ್ ಹಂಚಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ತುಂಗಾನದಿಯಿಂದ ಮೃತದೇಹ ಹೊರ ತೆಗೆದು, ಮರಣೋತ್ತರ ಶವ ಪರೀಕ್ಷೆ ನಡೆಸಿ, ಕುಟುಂಬಸ್ಥರಿಗೆ ಹಸ್ತಾಂತರಿಸಿದರು. ಘಟನೆ ಕುರಿತು ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Shivamogga 24 year old youth commits suicide by jumping into river, posts death note on whatsapp. The deceased has been identified as Jayadeep.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 04:14 pm
HK News Staffer
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
ಚರಕದಿಂದ ನೂಲು ತೆಗೆದು, ಸಮುದ್ರ ಕಿನಾರೆಯಲ್ಲಿ ಉಪ್ಪು...
15-08-26 10:08 pm
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm