ಬ್ರೇಕಿಂಗ್ ನ್ಯೂಸ್
03-09-24 11:10 am HK News Desk ಕರ್ನಾಟಕ
ಶಿವಮೊಗ್ಗ, ಸೆ 03: ವಾಟ್ಸ್ಆ್ಯಪ್ ಸ್ಟೇಟಸ್ನಲ್ಲಿ ಡೆತ್ನೋಟ್ ಬರೆದಿಟ್ಟು ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆಯಾಗಿದ್ದಾನೆ. ಕಳೆದ ಶನಿವಾರ ತೀರ್ಥಹಳ್ಳಿ ತಾಲೂಕು ಇಂದಾವರ ಗ್ರಾಮದ ಜಯದೀಪ್(24) ಎಂಬಾತ ತನ್ನ ಸ್ಟೇಟಸ್ ಹಾಕಿ ನಾಪತ್ತೆಯಾಗಿದ್ದ. ಈತನ ಬೈಕ್ ತೀರ್ಥಹಳ್ಳಿಯ ತುಂಗಾ ನದಿಯ ಪಕ್ಕದಲ್ಲಿ ಪತ್ತೆಯಾಗಿತ್ತು. ಪೋಷಕರು ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಮಗ ನಾಪತ್ತೆಯಾದ ಕುರಿತು ದೂರು ದಾಖಲಿಸಿದ್ದರು.
ಇದರಿಂದ ಕಳೆದ ಎರಡು ದಿನಗಳಿಂದ ತೀರ್ಥಹಳ್ಳಿ ಪೊಲೀಸರು ಹಾಗೂ ಅಗ್ನಿ ಶಾಮಕದಳವರು ಜಯದೀಪ್ ಶವಕ್ಕಾಗಿ ತುಂಗಾ ನದಿಯಲ್ಲಿ ಹುಡುಕಾಟ ನಡೆಸಿದ್ದರು. ಸೋಮವಾರ ಸಂಜೆ ತೀರ್ಥಹಳ್ಳಿಯ ಸ್ಮಶಾನಕಟ್ಟೆ ಸಮೀಪ ನದಿಯಲ್ಲಿ ಮೃತದೇಹ ಸಿಕ್ಕಿದೆ.

ಜಯದೀಪ್ ನಾಪತ್ತೆಯಾಗುವ ಮುನ್ನ ತನ್ನ ಮೊಬೈಲ್ನಲ್ಲಿ ಮೂರು ಪುಟದ ಡೆತ್ನೋಟನ್ನು ವಾಟ್ಸ್ಆ್ಯಪ್ ಸ್ಟೇಟಸ್ಗೆ ಅಪ್ಲೋಡ್ ಮಾಡಿ ನಾಪತ್ತೆಯಾಗಿದ್ದ. ಇದರಲ್ಲಿ ಪ್ರೀತಿಸಲು ಹುಡುಗಿ ಸಿಕ್ಕಿಲ್ಲ ಎಂಬುದರ ಜೊತೆಗೆ ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಕಳೆದುಕೊಂಡಿದ್ದೇನೆ ಎಂದು ಬರೆದಿದ್ದಾನೆ. ನಾನು ಬದುಕಲು ಬೇರೆ ದಾರಿ ಹುಡುಕಬಹುದಾಗಿತ್ತು. ಆದರೆ, ಸಾವಿನ ದಾರಿ ಕರೆಯುತ್ತಿದೆ. ತಂದೆ-ತಾಯಿ ನನ್ನನ್ನು ಕ್ಷಮಿಸಿ. ನಾನು ಸಾಲ ಮಾಡಿದ್ದನ್ನು ನಿಮ್ಮ ಮೇಲೆ ಬಿಟ್ಟು ಹೋಗುತ್ತಿದ್ದೇನೆ ಎಂದು ಬೇಸರ ಮಾಡಿಕೊಳ್ಳಬೇಡಿ. ನನ್ನ ಬೈಕ್ ಮಾರಿ ಅದರಲ್ಲಿ ಎಲ್ಲರಿಗೂ ಸ್ವಲ್ಪ ಸ್ವಲ್ಪ ಹಣ ಕೊಟ್ಟು ಸಾಲ ತೀರಿಸಿ ಎಂದು ಬರೆದಿದ್ದಾನೆ.
ಮೃತ ಯುವಕ ಜಯದೀಪ್ ಓದಿನಲ್ಲಿ ಮುಂದಿದ್ದ. ಆದರೆ ತನಗೆ ಪ್ರೀತಿ ಮಾಡಲು ಯುವತಿ ಸಿಗುತ್ತಿಲ್ಲ ಅಂತಾ ನೊಂದಿದ್ದ. ಜೊತೆಗೆ ಆನ್ಲೈನ್ನಲ್ಲಿ ಹಣ ತೊಡಗಿಸಲು ಸಾಲ ಮಾಡಿಕೊಂಡಿದ್ದ. ಈಗಾಗಿ ಮನನೊಂದ ಯುವಕ ವಾಟ್ಸಪ್ ಸ್ಟೇಟಸ್ನಲ್ಲಿ ಡೆತ್ ಹಂಚಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ತುಂಗಾನದಿಯಿಂದ ಮೃತದೇಹ ಹೊರ ತೆಗೆದು, ಮರಣೋತ್ತರ ಶವ ಪರೀಕ್ಷೆ ನಡೆಸಿ, ಕುಟುಂಬಸ್ಥರಿಗೆ ಹಸ್ತಾಂತರಿಸಿದರು. ಘಟನೆ ಕುರಿತು ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Shivamogga 24 year old youth commits suicide by jumping into river, posts death note on whatsapp. The deceased has been identified as Jayadeep.
20-09-26 03:32 pm
HK News Staffer
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm