ಬ್ರೇಕಿಂಗ್ ನ್ಯೂಸ್
03-09-24 11:10 am HK News Desk ಕರ್ನಾಟಕ
ಶಿವಮೊಗ್ಗ, ಸೆ 03: ವಾಟ್ಸ್ಆ್ಯಪ್ ಸ್ಟೇಟಸ್ನಲ್ಲಿ ಡೆತ್ನೋಟ್ ಬರೆದಿಟ್ಟು ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆಯಾಗಿದ್ದಾನೆ. ಕಳೆದ ಶನಿವಾರ ತೀರ್ಥಹಳ್ಳಿ ತಾಲೂಕು ಇಂದಾವರ ಗ್ರಾಮದ ಜಯದೀಪ್(24) ಎಂಬಾತ ತನ್ನ ಸ್ಟೇಟಸ್ ಹಾಕಿ ನಾಪತ್ತೆಯಾಗಿದ್ದ. ಈತನ ಬೈಕ್ ತೀರ್ಥಹಳ್ಳಿಯ ತುಂಗಾ ನದಿಯ ಪಕ್ಕದಲ್ಲಿ ಪತ್ತೆಯಾಗಿತ್ತು. ಪೋಷಕರು ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಮಗ ನಾಪತ್ತೆಯಾದ ಕುರಿತು ದೂರು ದಾಖಲಿಸಿದ್ದರು.
ಇದರಿಂದ ಕಳೆದ ಎರಡು ದಿನಗಳಿಂದ ತೀರ್ಥಹಳ್ಳಿ ಪೊಲೀಸರು ಹಾಗೂ ಅಗ್ನಿ ಶಾಮಕದಳವರು ಜಯದೀಪ್ ಶವಕ್ಕಾಗಿ ತುಂಗಾ ನದಿಯಲ್ಲಿ ಹುಡುಕಾಟ ನಡೆಸಿದ್ದರು. ಸೋಮವಾರ ಸಂಜೆ ತೀರ್ಥಹಳ್ಳಿಯ ಸ್ಮಶಾನಕಟ್ಟೆ ಸಮೀಪ ನದಿಯಲ್ಲಿ ಮೃತದೇಹ ಸಿಕ್ಕಿದೆ.

ಜಯದೀಪ್ ನಾಪತ್ತೆಯಾಗುವ ಮುನ್ನ ತನ್ನ ಮೊಬೈಲ್ನಲ್ಲಿ ಮೂರು ಪುಟದ ಡೆತ್ನೋಟನ್ನು ವಾಟ್ಸ್ಆ್ಯಪ್ ಸ್ಟೇಟಸ್ಗೆ ಅಪ್ಲೋಡ್ ಮಾಡಿ ನಾಪತ್ತೆಯಾಗಿದ್ದ. ಇದರಲ್ಲಿ ಪ್ರೀತಿಸಲು ಹುಡುಗಿ ಸಿಕ್ಕಿಲ್ಲ ಎಂಬುದರ ಜೊತೆಗೆ ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಕಳೆದುಕೊಂಡಿದ್ದೇನೆ ಎಂದು ಬರೆದಿದ್ದಾನೆ. ನಾನು ಬದುಕಲು ಬೇರೆ ದಾರಿ ಹುಡುಕಬಹುದಾಗಿತ್ತು. ಆದರೆ, ಸಾವಿನ ದಾರಿ ಕರೆಯುತ್ತಿದೆ. ತಂದೆ-ತಾಯಿ ನನ್ನನ್ನು ಕ್ಷಮಿಸಿ. ನಾನು ಸಾಲ ಮಾಡಿದ್ದನ್ನು ನಿಮ್ಮ ಮೇಲೆ ಬಿಟ್ಟು ಹೋಗುತ್ತಿದ್ದೇನೆ ಎಂದು ಬೇಸರ ಮಾಡಿಕೊಳ್ಳಬೇಡಿ. ನನ್ನ ಬೈಕ್ ಮಾರಿ ಅದರಲ್ಲಿ ಎಲ್ಲರಿಗೂ ಸ್ವಲ್ಪ ಸ್ವಲ್ಪ ಹಣ ಕೊಟ್ಟು ಸಾಲ ತೀರಿಸಿ ಎಂದು ಬರೆದಿದ್ದಾನೆ.
ಮೃತ ಯುವಕ ಜಯದೀಪ್ ಓದಿನಲ್ಲಿ ಮುಂದಿದ್ದ. ಆದರೆ ತನಗೆ ಪ್ರೀತಿ ಮಾಡಲು ಯುವತಿ ಸಿಗುತ್ತಿಲ್ಲ ಅಂತಾ ನೊಂದಿದ್ದ. ಜೊತೆಗೆ ಆನ್ಲೈನ್ನಲ್ಲಿ ಹಣ ತೊಡಗಿಸಲು ಸಾಲ ಮಾಡಿಕೊಂಡಿದ್ದ. ಈಗಾಗಿ ಮನನೊಂದ ಯುವಕ ವಾಟ್ಸಪ್ ಸ್ಟೇಟಸ್ನಲ್ಲಿ ಡೆತ್ ಹಂಚಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ತುಂಗಾನದಿಯಿಂದ ಮೃತದೇಹ ಹೊರ ತೆಗೆದು, ಮರಣೋತ್ತರ ಶವ ಪರೀಕ್ಷೆ ನಡೆಸಿ, ಕುಟುಂಬಸ್ಥರಿಗೆ ಹಸ್ತಾಂತರಿಸಿದರು. ಘಟನೆ ಕುರಿತು ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Shivamogga 24 year old youth commits suicide by jumping into river, posts death note on whatsapp. The deceased has been identified as Jayadeep.
09-03-26 09:51 pm
HK News Staffer
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
ಕ್ಷುಲ್ಲಕ ಕಾರಣಕ್ಕೆ ಪತಿ- ಪತ್ನಿ ಜಗಳ, ಎರಡು ವರ್ಷದ...
09-03-26 05:44 pm
ಅವಕಾಶ ಕೊಟ್ಟರೆ ಮತ್ತೆರಡು ವರ್ಷ ಬಜೆಟ್ ಮಂಡಿಸುತ್ತೇನ...
09-03-26 04:17 pm
ಬಳ್ಳಾರಿ ವಸತಿ ಶಾಲೆಯಲ್ಲೇ ವಿದ್ಯಾರ್ಥಿಗಳ ಸಂಘರ್ಷ ;...
09-03-26 03:24 pm
09-03-26 01:44 pm
HK News Staffer
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
09-03-26 09:52 pm
HK News Staffer
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
CM Siddaramaiah, Kambala Bantwal: ರಮಾನಾಥ ರೈ ಐ...
07-03-26 11:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm