ಬ್ರೇಕಿಂಗ್ ನ್ಯೂಸ್
03-09-24 06:16 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.3: ಮಾಜಿ ಮುಖ್ಯಮಂತ್ರಿ, ಪ್ರಮುಖ ಸ್ವಾಮೀಜಿ ಸೇರಿದಂತೆ ಹಲವು ರಾಜಕೀಯ ನಾಯಕರ ಸೆಕ್ಸ್ ಸಿಡಿ ತನ್ನಲ್ಲಿದೆ ಎಂದು ಹೇಳಿಕೊಂಡಿದ್ದ ವಕೀಲ ಕೆ.ಎನ್. ಜಗದೀಶ್ ಅವರನ್ನು ಪೊಲೀಸರು ಹಳೆ ಪ್ರಕರಣ ಒಂದರಲ್ಲಿ ಬಂಧಿಸಿದ್ದು ಕೋರ್ಟಿಗೆ ಹಾಜರುಪಡಿಸಿದ ಬೆನ್ನಲ್ಲೇ ಜಾಮೀನಿನಲ್ಲಿ ಬಿಡಗುಡೆಯಾಗಿದ್ದಾರೆ.
ಪೊಲೀಸರು ಬಂಧನ ಮಾಡಿದ ಬೆನ್ನಲ್ಲೇ ವಕೀಲ ಜಗದೀಶ್ ಜಾಲತಾಣದಲ್ಲಿ ವಿಡಿಯೋ ಹಂಚಿಕೊಂಡಿದ್ದು, ಪೊಲೀಸರಿಗೆ ಚಾಲೆಂಜ್ ಮಾಡಿದ್ದಾರೆ. ಲೈಂಗಿಕ ಕಾರ್ಯಕರ್ತೆಯರು ತನ್ನನ್ನು ಭೇಟಿಯಾಗಿದ್ದು, ತಮ್ಮಲ್ಲಿ 9 ಸಾವಿರಕ್ಕೂ ಹೆಚ್ಚು ವಿಡಿಯೋ ತುಣುಕುಗಳಿರುವುದಾಗಿ ಹೇಳಿದ್ದಾರೆ. ಅದನ್ನು ಮುಖ್ಯಮಂತ್ರಿಗೆ ಸಲ್ಲಿಸಲು ರೆಡಿ ಇದ್ದೇನೆ. ಆದರೆ ಸೂಕ್ತ ರಕ್ಷಣೆ ಕೊಡಬೇಕು ಎಂದು ಹೇಳಿದ್ದಾರೆ.
ಎರಡು ದಿನಗಳ ಹಿಂದೆ ವಕೀಲ ಜಗದೀಶ್ ತನ್ನಲ್ಲಿ ಸೆಕ್ಸ್ ಸಿಡಿ ಇದೆಯೆಂದು ಹೇಳಿದ ಬೆನ್ನಲ್ಲೇ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ತನ್ನ ವಿರುದ್ಧ ಮಾನಹಾನಿಕರ ಸುದ್ದಿ ಪ್ರಸಾರ ಮಾಡಬಾರದು ಎಂದು ಕೋರ್ಟಿನಿಂದ ತಡೆಯಾಜ್ಞೆ ತಂದಿದ್ದಾರೆ. ಮಾಜಿ ಸಿಎಂ ಮತ್ತು ರಾಜ್ಯದ ಪ್ರಮುಖ ಸ್ವಾಮೀಜಿಯೊಬ್ಬರ ಸೆಕ್ಸ್ ಸಿಡಿ ಇದೆಯೆಂದು ವಕೀಲ ಜಗದೀಶ್ ಹೇಳಿಕೊಂಡಿದ್ದು ಭಾರೀ ಸಂಚಲನ ಮೂಡಿಸಿತ್ತು. 2022ರಲ್ಲಿ ಎಸ್ಸಿ- ಎಸ್ಟಿ ಕಾಯ್ದೆಯಡಿ ವಕೀಲ ಜಗದೀಶ್ ವಿರುದ್ಧ ದಾಖಲಾದ ಪ್ರಕರಣದಲ್ಲಿ ಕೋರ್ಟಿನಿಂದ ಜಾಮೀನು ರಹಿತ ವಾರೆಂಟ್ ಜಾರಿಯಾಗಿತ್ತು. ಕೋರ್ಟಿಗೆ ಹಾಜರಾಗದೇ ಇದ್ದುದರಿಂದ ಪೊಲೀಸರು ರಾಜಕೀಯ ಒತ್ತಡಕ್ಕೆ ಮಣಿದು ಈಗ ಜಗದೀಶ್ ಅವರನ್ನು ಬಂಧಿಸಿದ್ದಾರೆ. ಈ ಬಗ್ಗೆ ಪೊಲೀಸ್ ಅಧಿಕಾರಿಯೊಬ್ಬರಲ್ಲಿ ಕೇಳಿದಾಗ, ವಾರೆಂಟ್ ಬಳಿಕ ಅವರು ಎಲ್ಲಿದ್ದಾರೆಂದು ತಿಳಿದಿರಲಿಲ್ಲ. ಈಗ ವಿಡಿಯೋ ಬಿಡುಗಡೆ ಮಾಡಿದ್ದರಿಂದ ಚೆಕ್ ಮಾಡಿದಾಗ, ಗೋವಾದಲ್ಲಿರುವುದು ತಿಳಿದುಬಂದು ಅಲ್ಲಿಂದಲೇ ಅರೆಸ್ಟ್ ಮಾಡಿದ್ದೇವೆ. ಕೋರ್ಟ್ ಜಾಮೀನು ನೀಡಿದೆ ಎಂದಿದ್ದಾರೆ.
2022ರ ಫೆಬ್ರವರಿಯಲ್ಲಿ ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ಇತರ ವಕೀಲರ ಮೇಲೆ ಹಲ್ಲೆ ನಡೆಸಿದ್ದಕ್ಕಾಗಿ ಜಗದೀಶ್ ಅವರನ್ನು ಪೊಲೀಸರು ಬಂಧಿಸಿದ್ದರು. ಆನಂತರ, ರಮೇಶ್ ಜಾರಕಿಹೊಳಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಹೊರಿಸಿದ್ದ ಮಹಿಳೆಯ ಪರವಾಗಿ ಜಗದೀಶ್ ವಕಾಲತ್ತು ವಹಿಸಿದ್ದರು. ಅದಕ್ಕೂ ಹಿಂದೆ ಬೆಂಗಳೂರು ಸಿಟಿ ಪೊಲೀಸ್ ಕಮಿಷನರ್ ಕಚೇರಿಯ ಪೇದೆ ಒಬ್ಬರನ್ನು ನಿಂದಿಸಿದ ಬಗ್ಗೆ ಜಗದೀಶ್ ವಿರುದ್ಧ ಪ್ರಕರಣ ದಾಖಲಾಗಿತ್ತು. ಇದೀಗ ಪೊಲೀಸರು ಬಂಧಿಸಿರುವ ಕ್ರಮವನ್ನು ಖಂಡಿಸಿ ವಿಡಿಯೋ ಬಿಡುಗಡೆ ಮಾಡಿರುವ ಜಗದೀಶ್, ನೀವು ಬಂಧನ ಮಾಡಿದರೆ ಹೇಗೆ ಹೊರಗೆ ಬರಬೇಕು ಎಂದು ತಿಳಿದಿದೆ ಎಂದು ಸವಾಲು ಹಾಕಿದ್ದಾರೆ.
Bangalore Advocate Jagadish claim to have sex cd of former cm, arrested, released on bail. Advocate K.N. Jagadish, who over the last three days claimed to have “sex CDs” of a former Chief Minister of Karnataka and a prominent seer in the State, was arrested by the city police on Thursday in a case that dates back to 2022. He was produced before a city court on Friday which granted him bail.
21-04-25 07:27 pm
Bangalore Correspondent
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm