ಬ್ರೇಕಿಂಗ್ ನ್ಯೂಸ್
04-09-24 11:18 am Bangalore Correspondent ಕರ್ನಾಟಕ
ಬೆಂಗಳೂರು, ಸೆ.4: ಖರ್ಗೆ ಕುಟುಂಬಕ್ಕೆ ಭೂಮಿ ನೀಡಿರುವುದನ್ನು ಪ್ರಶ್ನೆ ಮಾಡಿದ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ವಿರುದ್ಧವೇ ಭೂ ಅಕ್ರಮ ಆರೋಪ ಕೇಳಿಬಂದಿದೆ. ಏಟಿಗೆ ಎದುರೇಟು ಎಂಬಂತೆ ಕಾಂಗ್ರೆಸ್ ನಾಯಕರು ರಾಜ್ಯಪಾಲರಿಗೆ ದೂರು ನೀಡಿದ್ದು ನಾರಾಯಣ ಸ್ವಾಮಿ ಅವರನ್ನು ವಿಧಾನ ಪರಿಷತ್ ಸದಸ್ಯ ಸ್ಥಾನದಿಂದ ಅನರ್ಹಗೊಳಿಸುವಂತೆ ಆಗ್ರಹ ಮಾಡಿದ್ದಾರೆ.
ವಿಧಾನ ಪರಿಷತ್ನ ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹಮದ್ ನೇತೃತ್ವದಲ್ಲಿ ಕಾಂಗ್ರೆಸ್ನ ಹಲವು ಸದಸ್ಯರು, ನಾಯಕರು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿ 61 ಪುಟಗಳ ಸುದೀರ್ಘ ದೂರನ್ನು ಸಲ್ಲಿಸಿದರು. ಇದೇ ವೇಳೆ ಆರೋಪಕ್ಕೆ ಸಂಬಂಧಿಸಿದಂತೆ ಅಗತ್ಯ ಪುರಾವೆಗಳನ್ನು ಒದಗಿಸಿದ್ದಾರೆ.
2002 ರ ನವೆಂಬರ್ 28 ರಿಂದ 2004 ರ ಮೇ 5 ರ ನಡುವೆ ಕರ್ನಾಟಕ ವಸತಿ ಮಂಡಳಿ ನಿರ್ದೇಕರಾಗಿದ್ದ ಛಲವಾದಿ ನಾರಾಯಣ ಸ್ವಾಮಿಯವರು ಭೂಕಬಳಿಕೆ ಮಾಡಿ ತಾವು ಅಧ್ಯಕ್ಷರಾಗಿರುವ ಆದರ್ಶ ಸೋಶಿಯಲ್ ಆ್ಯಂಡ್ ಎಜುಕೇಷನ್ ಟ್ರಸ್ಟ್ಗೆ ಬಳಸಿಕೊಂಡಿದ್ದು, ಶಾಲೆ ನಿರ್ಮಿಸಿದ್ದಾರೆ ಎಂದು ದೂರಿದ್ದಾರೆ. ಈ ಹಗರಣವನ್ನು ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಸೆಕ್ಷನ್ 13, ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್ 316, 318ರ ಅಡಿ ತನಿಖೆ ನಡೆಸಲು ಅನುಮತಿ ನೀಡಬೇಕು ಹಾಗೂ ನಾರಾಯಣ ಸ್ವಾಮಿಯವರ ವಿಧಾನ ಪರಿಷತ್ನ ಸದಸ್ಯತ್ವವನ್ನು ರದ್ದುಪಡಿಸಬೇಕು ಎಂದು ಆಗ್ರಹಿಸಿದ್ದಾರೆ.
ವಿಧಾನಪರಿಷತ್ ಸದಸ್ಯರಾದ ಎಂ.ಆರ್.ಸೀತಾರಾಂ, ಮಂಜುನಾಥ್ ಭಂಡಾರಿ, ಎಸ್.ರವಿ ವಸಂತಕುಮಾರ್, ಅನಿಲ್ಕುಮಾರ್, ದಿನೇಶ್ ಗೂಳಿಗೌಡ, ಪುಟ್ಟಣ್ಣ, ಕೆಪಿಸಿಸಿ ಮಾಧ್ಯಮ ಘಟಕದ ಅಧ್ಯಕ್ಷ ರಮೇಶ್ ಬಾಬು ಸೇರಿದಂತೆ ಹಲವರು ರಾಜ್ಯಪಾಲರನ್ನು ಭೇಟಿ ಮಾಡಿದ ನಿಯೋಗದಲ್ಲಿದ್ದರು. ಈ ಬಗ್ಗೆ ಮುಖ್ಯ ಸಚೇತಕ ಸಲೀಂ ಅಹಮದ್ ಅವರು, ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿಯನ್ನು ವಜಾ ಮಾಡಬೇಕು. ಹೌಸಿಂಗ್ ಬೋರ್ಡ್ ನಿರ್ದೇಶಕರಾಗಿದ್ದಾಗ ಸಿಎ ಸೈಟ್ ಪಡೆದುಕೊಂಡಿದ್ದರು. ಆದರ್ಶ ಸ್ಕೂಲ್ ಎಜುಕೇಶನ್ ಗ್ರೂಪ್ನ ಚೇರಮನ್ ಆಗಿದ್ದರು ಛಲವಾದಿ. ಇದೀಗ ಸಿಎ ಸೈಟ್ ಪಡೆದ ಜಾಗದಲ್ಲಿ ಆನಂದ್ ಧಂ ಬಿರಿಯಾನಿ ನಡೆಯುತ್ತಿದೆ. ಶಿಕ್ಷಣ ಉದ್ದೇಶಕ್ಕಾಗಿ ಪಡೆದಿರುವ ಸಿಎ ಸೈಟ್ನಲ್ಲಿ ಬಿರಿಯಾನಿ ಹೋಟೆಲ್ ನಡೆಸುತ್ತಿದ್ದಾರೆ. ಶಿಕ್ಷಣ ಉದ್ದೇಶಕ್ಕೆ ಪಡೆದ ಜಾಗವನ್ನು ಅದೇ ಉದ್ದೇಶಕ್ಕೆ ಬಳಸಿಕೊಳ್ಳಬೇಕು. ರಾಜ್ಯಪಾಲರಿಗೆ ಇದನ್ನು ವಿವರವಾಗಿ ತಿಳಿಸಿದ್ದೇವೆ ಎಂದರು.
ಐದು ವರ್ಷದಲ್ಲಿ ಶಾಲೆಯ ಕಟ್ಟಡ ಕಟ್ಟಬೇಕು ಎಂಬ ಕಂಡೀಷನ್ ಮೇಲೆ ಹೌಸಿಂಗ್ ಬೋರ್ಡ್ ನಿವೇಶನ ಪಡೆದಿದ್ದು ಇದೇ ನಿವೇಶನವನ್ನು ಬೇರೆ ಉದ್ದೇಶಕ್ಕೆ ಬಳಸಿಕೊಂಡಿದ್ದಾರೆ. ಶಾಲೆ ಕಟ್ಟುವ ಬದಲು ಟೆಲಿ ಕಮ್ಯುನಿಕೇಷನ್ ಆ್ಯಂಡ್ ಪಬ್ಲಿಕ್ ಸರ್ವೀಸ್ ಕಂಪನಿ ಹೆಸರಿಗೆ ಈ ಜಾಗವನ್ನು ಮಾರ್ಪಾಡು ಮಾಡ್ತಾರೆ. ಸೇಲ್ ಡೀಡ್ ಆಗುವ ಮೊದಲೇ ಈ ರೀತಿ ಮಾರ್ಪಾಡು ಮಾಡಿರುತ್ತಾರೆ. ಯಾವಾಗ ಟೆಲಿ ಕಮ್ಯುನಿಕೇಷನ್ನಲ್ಲಿ ಛಲವಾದಿ ನಾರಾಯಣಸ್ವಾಮಿ ಎಕ್ಸ್ಪರ್ಟ್ ಆದರೋ ಅವರೇ ಹೇಳಬೇಕು ಎಂದು ಲೇವಡಿ ಮಾಡಿದರು.
A Congress delegation led by Saleem Ahmed, the State government’s chief whip in the Legislative Council, called on Governor Thaawarchand Gehlot at the Raj Bhavan on Tuesday and alleged that Leader of the Opposition Chalavadi T. Narayanaswamy was involved in a land grabbing case on the outskirts of Bengaluru and demanded his disqualification from the membership of the Council.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
30-06-26 11:02 pm
HK News Staffer
ಪಾಗಲ್ ಪ್ರೇಮಿ ಕೇಸ್ ಬೆನ್ನಲ್ಲೇ ಬಯಲಾಯ್ತು ಅಕ್ರಮ ಬ...
30-06-26 03:48 pm
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm