ಬ್ರೇಕಿಂಗ್ ನ್ಯೂಸ್
09-12-20 05:15 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.9: ಭಾರತ್ ಬಂದ್, ಕರ್ನಾಟಕ ಬಂದ್ ಮುಗೀತು. ಈಗ ಸಾರಿಗೆ ನೌಕರರು ಪ್ರತಿಭಟನೆಗೆ ಇಳಿದಿದ್ದಾರೆ. ಕಳೆದ ಎರಡು ದಿನಗಳ ಬಂದ್ ನಿಂದಾಗಿ ಸಾರಿಗೆ ಬಸ್ಸುಗಳ ಬಿಸಿ ಜನರಿಗೆ ಮುಟ್ಟಿರದೇ ಇದ್ದರೂ, ನಾಳೆಯ ಸಾರಿಗೆ ನೌಕರರ ಪ್ರತಿಭಟನೆಯ ಬಿಸಿ ಸಾಮಾನ್ಯ ಜನರಿಗೆ ತಟ್ಟಲಿದೆ. ಕೆಎಸ್ಸಾರ್ಟಿಸಿ ಮತ್ತು ಬಿಎಂಟಿಸಿ ಬಸ್ ನೌಕರರು ತಮ್ಮನ್ನು ಸರಕಾರಿ ನೌಕರರನ್ನಾಗಿ ಮಾಡುವಂತೆ ಒತ್ತಾಯಿಸಿ ಬೆಂಗಳೂರಿನಲ್ಲಿ ಬೃಹತ್ ಜಾಥಾ ನಡೆಸಲಿದ್ದಾರೆ.
ಡಿ.10ರಂದು ಬೆಳಗ್ಗೆ 10 ಗಂಟೆಗೆ ಸಾರಿಗೆ ನೌಕರರು ಬಿಎಂಟಿಸಿ ಬಸ್ ನಿಲ್ದಾಣದಿಂದ ಕಾಲ್ನಡಿಗೆ ಹೊರಡಲಿದ್ದು, ವಿಧಾನಸೌಧದ ವರೆಗೆ ಸಾಗಲಿದ್ದಾರೆ. ಜಾಥಾದಲ್ಲಿ ರಾಜ್ಯದ ಒಂದೂವರೆ ಲಕ್ಷ ಮಂದಿ ಕೆಎಸ್ಸಾರ್ಟಿಸಿ ಮತ್ತು ಬಿಎಂಟಿಸಿ ನೌಕರರು ಭಾಗವಹಿಸುವ ನಿರೀಕ್ಷೆಯಿದ್ದು, ಇಷ್ಟೂ ಜನ ಸಿಬಂದಿ ಬಸ್ ಸ್ಥಗಿತಗೊಳಿಸಿ ಪ್ರತಿಭಟನೆಗಿಳಿದರೆ ಮುಷ್ಕರದ ಬಿಸಿ ಇಡೀ ರಾಜ್ಯಕ್ಕೆ ತಟ್ಟುವ ಸಾಧ್ಯತೆಯಿದೆ. ಸಾರಿಗೆ ಸಂಚಾರದಲ್ಲಿ ಭಾರೀ ಪ್ರಮಾಣದ ವ್ಯತ್ಯಯ ಆಗಲಿದೆ.


ಈ ಮಧ್ಯೆ ಹೇಳಿಕೆ ನೀಡಿರುವ ಸಾರಿಗೆ ಸಚಿವ ಲಕ್ಷ್ಮಣ ಸವದಿ, ಸಾರಿಗೆ ನೌಕರರ ವೇತನವನ್ನು ನವೆಂಬರ್ ತಿಂಗಳ ವರೆಗೂ ಪೂರ್ತಿಯಾಗಿ ನೀಡಲಾಗಿದೆ. ಸದ್ಯಕ್ಕೆ ಕೊರೊನಾ ಸಂಕಷ್ಟ ಇರುವುದರಿಂದ ಸಾರಿಗೆ ನೌಕರರನ್ನು ಸರಕಾರಿ ನೌಕರರನ್ನಾಗಿ ಪರಿಗಣಿಸುವ ಪ್ರಸ್ತಾಪ ಇಲ್ಲ. ಸದ್ಯಕ್ಕೆ ಹಣಕಾಸು ಸಮಸ್ಯೆ ಇದೆ. ಅಲ್ಲದೆ, ಸಾರಿಗೆ ನೌಕರರ ಈ ಬೇಡಿಕೆ ಪರಿಗಣಿಸಿದರೆ ಇತರೇ ನಿಗಮಗಳ ನೌಕರರು ಅದೇ ಬೇಡಿಕೆ ಮುಂದಿಡುತ್ತಾರೆ. ಇದರಿಂದಾಗಿ ಇದನ್ನು ಸದ್ಯಕ್ಕೆ ಮಾನ್ಯ ಮಾಡುವ ಸ್ಥಿತಿಯಲ್ಲಿ ಸರಕಾರ ಇಲ್ಲ ಎಂದು ಹೇಳಿದ್ದಾರೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm