ಬ್ರೇಕಿಂಗ್ ನ್ಯೂಸ್
09-12-20 05:15 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.9: ಭಾರತ್ ಬಂದ್, ಕರ್ನಾಟಕ ಬಂದ್ ಮುಗೀತು. ಈಗ ಸಾರಿಗೆ ನೌಕರರು ಪ್ರತಿಭಟನೆಗೆ ಇಳಿದಿದ್ದಾರೆ. ಕಳೆದ ಎರಡು ದಿನಗಳ ಬಂದ್ ನಿಂದಾಗಿ ಸಾರಿಗೆ ಬಸ್ಸುಗಳ ಬಿಸಿ ಜನರಿಗೆ ಮುಟ್ಟಿರದೇ ಇದ್ದರೂ, ನಾಳೆಯ ಸಾರಿಗೆ ನೌಕರರ ಪ್ರತಿಭಟನೆಯ ಬಿಸಿ ಸಾಮಾನ್ಯ ಜನರಿಗೆ ತಟ್ಟಲಿದೆ. ಕೆಎಸ್ಸಾರ್ಟಿಸಿ ಮತ್ತು ಬಿಎಂಟಿಸಿ ಬಸ್ ನೌಕರರು ತಮ್ಮನ್ನು ಸರಕಾರಿ ನೌಕರರನ್ನಾಗಿ ಮಾಡುವಂತೆ ಒತ್ತಾಯಿಸಿ ಬೆಂಗಳೂರಿನಲ್ಲಿ ಬೃಹತ್ ಜಾಥಾ ನಡೆಸಲಿದ್ದಾರೆ.
ಡಿ.10ರಂದು ಬೆಳಗ್ಗೆ 10 ಗಂಟೆಗೆ ಸಾರಿಗೆ ನೌಕರರು ಬಿಎಂಟಿಸಿ ಬಸ್ ನಿಲ್ದಾಣದಿಂದ ಕಾಲ್ನಡಿಗೆ ಹೊರಡಲಿದ್ದು, ವಿಧಾನಸೌಧದ ವರೆಗೆ ಸಾಗಲಿದ್ದಾರೆ. ಜಾಥಾದಲ್ಲಿ ರಾಜ್ಯದ ಒಂದೂವರೆ ಲಕ್ಷ ಮಂದಿ ಕೆಎಸ್ಸಾರ್ಟಿಸಿ ಮತ್ತು ಬಿಎಂಟಿಸಿ ನೌಕರರು ಭಾಗವಹಿಸುವ ನಿರೀಕ್ಷೆಯಿದ್ದು, ಇಷ್ಟೂ ಜನ ಸಿಬಂದಿ ಬಸ್ ಸ್ಥಗಿತಗೊಳಿಸಿ ಪ್ರತಿಭಟನೆಗಿಳಿದರೆ ಮುಷ್ಕರದ ಬಿಸಿ ಇಡೀ ರಾಜ್ಯಕ್ಕೆ ತಟ್ಟುವ ಸಾಧ್ಯತೆಯಿದೆ. ಸಾರಿಗೆ ಸಂಚಾರದಲ್ಲಿ ಭಾರೀ ಪ್ರಮಾಣದ ವ್ಯತ್ಯಯ ಆಗಲಿದೆ.


ಈ ಮಧ್ಯೆ ಹೇಳಿಕೆ ನೀಡಿರುವ ಸಾರಿಗೆ ಸಚಿವ ಲಕ್ಷ್ಮಣ ಸವದಿ, ಸಾರಿಗೆ ನೌಕರರ ವೇತನವನ್ನು ನವೆಂಬರ್ ತಿಂಗಳ ವರೆಗೂ ಪೂರ್ತಿಯಾಗಿ ನೀಡಲಾಗಿದೆ. ಸದ್ಯಕ್ಕೆ ಕೊರೊನಾ ಸಂಕಷ್ಟ ಇರುವುದರಿಂದ ಸಾರಿಗೆ ನೌಕರರನ್ನು ಸರಕಾರಿ ನೌಕರರನ್ನಾಗಿ ಪರಿಗಣಿಸುವ ಪ್ರಸ್ತಾಪ ಇಲ್ಲ. ಸದ್ಯಕ್ಕೆ ಹಣಕಾಸು ಸಮಸ್ಯೆ ಇದೆ. ಅಲ್ಲದೆ, ಸಾರಿಗೆ ನೌಕರರ ಈ ಬೇಡಿಕೆ ಪರಿಗಣಿಸಿದರೆ ಇತರೇ ನಿಗಮಗಳ ನೌಕರರು ಅದೇ ಬೇಡಿಕೆ ಮುಂದಿಡುತ್ತಾರೆ. ಇದರಿಂದಾಗಿ ಇದನ್ನು ಸದ್ಯಕ್ಕೆ ಮಾನ್ಯ ಮಾಡುವ ಸ್ಥಿತಿಯಲ್ಲಿ ಸರಕಾರ ಇಲ್ಲ ಎಂದು ಹೇಳಿದ್ದಾರೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm