ಬ್ರೇಕಿಂಗ್ ನ್ಯೂಸ್
09-12-20 05:15 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.9: ಭಾರತ್ ಬಂದ್, ಕರ್ನಾಟಕ ಬಂದ್ ಮುಗೀತು. ಈಗ ಸಾರಿಗೆ ನೌಕರರು ಪ್ರತಿಭಟನೆಗೆ ಇಳಿದಿದ್ದಾರೆ. ಕಳೆದ ಎರಡು ದಿನಗಳ ಬಂದ್ ನಿಂದಾಗಿ ಸಾರಿಗೆ ಬಸ್ಸುಗಳ ಬಿಸಿ ಜನರಿಗೆ ಮುಟ್ಟಿರದೇ ಇದ್ದರೂ, ನಾಳೆಯ ಸಾರಿಗೆ ನೌಕರರ ಪ್ರತಿಭಟನೆಯ ಬಿಸಿ ಸಾಮಾನ್ಯ ಜನರಿಗೆ ತಟ್ಟಲಿದೆ. ಕೆಎಸ್ಸಾರ್ಟಿಸಿ ಮತ್ತು ಬಿಎಂಟಿಸಿ ಬಸ್ ನೌಕರರು ತಮ್ಮನ್ನು ಸರಕಾರಿ ನೌಕರರನ್ನಾಗಿ ಮಾಡುವಂತೆ ಒತ್ತಾಯಿಸಿ ಬೆಂಗಳೂರಿನಲ್ಲಿ ಬೃಹತ್ ಜಾಥಾ ನಡೆಸಲಿದ್ದಾರೆ.
ಡಿ.10ರಂದು ಬೆಳಗ್ಗೆ 10 ಗಂಟೆಗೆ ಸಾರಿಗೆ ನೌಕರರು ಬಿಎಂಟಿಸಿ ಬಸ್ ನಿಲ್ದಾಣದಿಂದ ಕಾಲ್ನಡಿಗೆ ಹೊರಡಲಿದ್ದು, ವಿಧಾನಸೌಧದ ವರೆಗೆ ಸಾಗಲಿದ್ದಾರೆ. ಜಾಥಾದಲ್ಲಿ ರಾಜ್ಯದ ಒಂದೂವರೆ ಲಕ್ಷ ಮಂದಿ ಕೆಎಸ್ಸಾರ್ಟಿಸಿ ಮತ್ತು ಬಿಎಂಟಿಸಿ ನೌಕರರು ಭಾಗವಹಿಸುವ ನಿರೀಕ್ಷೆಯಿದ್ದು, ಇಷ್ಟೂ ಜನ ಸಿಬಂದಿ ಬಸ್ ಸ್ಥಗಿತಗೊಳಿಸಿ ಪ್ರತಿಭಟನೆಗಿಳಿದರೆ ಮುಷ್ಕರದ ಬಿಸಿ ಇಡೀ ರಾಜ್ಯಕ್ಕೆ ತಟ್ಟುವ ಸಾಧ್ಯತೆಯಿದೆ. ಸಾರಿಗೆ ಸಂಚಾರದಲ್ಲಿ ಭಾರೀ ಪ್ರಮಾಣದ ವ್ಯತ್ಯಯ ಆಗಲಿದೆ.


ಈ ಮಧ್ಯೆ ಹೇಳಿಕೆ ನೀಡಿರುವ ಸಾರಿಗೆ ಸಚಿವ ಲಕ್ಷ್ಮಣ ಸವದಿ, ಸಾರಿಗೆ ನೌಕರರ ವೇತನವನ್ನು ನವೆಂಬರ್ ತಿಂಗಳ ವರೆಗೂ ಪೂರ್ತಿಯಾಗಿ ನೀಡಲಾಗಿದೆ. ಸದ್ಯಕ್ಕೆ ಕೊರೊನಾ ಸಂಕಷ್ಟ ಇರುವುದರಿಂದ ಸಾರಿಗೆ ನೌಕರರನ್ನು ಸರಕಾರಿ ನೌಕರರನ್ನಾಗಿ ಪರಿಗಣಿಸುವ ಪ್ರಸ್ತಾಪ ಇಲ್ಲ. ಸದ್ಯಕ್ಕೆ ಹಣಕಾಸು ಸಮಸ್ಯೆ ಇದೆ. ಅಲ್ಲದೆ, ಸಾರಿಗೆ ನೌಕರರ ಈ ಬೇಡಿಕೆ ಪರಿಗಣಿಸಿದರೆ ಇತರೇ ನಿಗಮಗಳ ನೌಕರರು ಅದೇ ಬೇಡಿಕೆ ಮುಂದಿಡುತ್ತಾರೆ. ಇದರಿಂದಾಗಿ ಇದನ್ನು ಸದ್ಯಕ್ಕೆ ಮಾನ್ಯ ಮಾಡುವ ಸ್ಥಿತಿಯಲ್ಲಿ ಸರಕಾರ ಇಲ್ಲ ಎಂದು ಹೇಳಿದ್ದಾರೆ.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm