ಬ್ರೇಕಿಂಗ್ ನ್ಯೂಸ್
04-09-24 02:53 pm HK News Desk ಕರ್ನಾಟಕ
ಚಿಕ್ಕೋಡಿ, ಸೆ 04: ಮದುವೆಗೆ ಒಂದು ದಿನ ಮುನ್ನ ಯುವಕ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನಲ್ಲಿ ನಡೆದಿದೆ. ಇಲ್ಲಿನ ಝುಂಜರವಾಡ ಆರ್ಸಿ ಗ್ರಾಮದ ನಿವಾಸಿ ಸದಾಶಿವ ರಾಮಪ್ಪ ಹೋಸಲ್ಕಾರ (31) ಮೃತಪಟ್ಟಿದ್ದಾರೆ.
ಸೆಪ್ಟೆಂಬರ್ 5ರಂದು ಈ ಯುವಕನ ಮದುವೆ ನಿಶ್ಚಯವಾಗಿತ್ತು. ಕುಟುಂಬ ಸದಸ್ಯರು ಸ್ವಚ್ಛತಾ ಕಾರ್ಯದಲ್ಲಿ ತೊಡಗಿಕೊಂಡಿದ್ದರು. ಮಂಗಳವಾರ ರಾತ್ರಿ 8 ಗಂಟೆಯ ಸುಮಾರಿಗೆ ಮನೆ ಮುಂದೆ ಮದುವೆಪೂರ್ವ ಸಿದ್ಧತೆ ನಡೆಸಲಾಗುತ್ತಿತ್ತು. ಸದಾಶಿವ ಸ್ನೇಹಿತನ ಜೊತೆಗೆ ಮದುವೆ ಕೆಲಸದ ಬಗ್ಗೆ ದೂರವಾಣಿಯಲ್ಲಿ ಮಾತನಾಡುತ್ತಿದ್ದರು. ಈ ಸಂದರ್ಭದಲ್ಲಿ ಹಠಾತ್ ಹೃದಯಾಘಾತ ಸಂಭವಿಸಿದ್ದು, ಸ್ಥಳದಲ್ಲಿ ಕುಸಿದು ಬಿದ್ದಿದ್ದಾರೆ. ತಕ್ಷಣ ಅಥಣಿ ಪಟ್ಟಣದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು. ಆದರೆ, ಅಷ್ಟರಲ್ಲೇ ಯುವಕನ ಪ್ರಾಣಪಕ್ಷಿ ಹಾರಿ ಹೋಗಿದೆ.
ಮನೆಗೆ ಆಸರೆಯಾಗಿದ್ದ ಒಬ್ಬನೇ ಮಗನನ್ನು ಕಳೆದುಕೊಂಡು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಐಗಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಶಾಲಾ-ಕಾಲೇಜು ಮಕ್ಕಳಿಗೆ CPR ತರಬೇತಿಗೆ ಶಿಕ್ಷಣ ಇಲಾಖೆ ಚಿಂತನೆ;
ಪಿಯು ಕಾಲೇಜು ಹಾಗೂ ಪ್ರೌಢ ಶಾಲಾ ಮಕ್ಕಳಿಗೆ CPR ಕ್ಲಾಸ್ ಮಾಡಲು ಕರ್ನಾಟಕ ಶಿಕ್ಷಣ ಇಲಾಖೆ ಮುಂದಾಗಿದೆ. ಹೃದಯಘಾತವಾದಗ ತಕ್ಷಣಕ್ಕೆ ಏನು ಮಾಡಬೇಕು? ಹೇಗೆ ನಿರ್ವಹಿಸಬೇಕು? ಗೋಲ್ಡನ್ ಟೈಮ್ ನಲ್ಲಿ ಏನು ಮಾಡಿದ್ರೆ ಜೀವ ಉಳಿಸಬಹುದು ಎನ್ನುವ ಜ್ಞಾನ ಬಹುತೇಕ ಜನರಲ್ಲಿ ಇಲ್ಲ. ಹೃದಯಘಾತದ ವೇಳೆ ತಕ್ಷಣದ ಚಿಕಿತ್ಸೆ ನೀಡದೆ ಗೊಂದಲದಲ್ಲಿ ಅನೇಕ ಜನರು ಜೀವ ಕೈಚೆಲ್ಲುತ್ತಿದ್ದಾರೆ. ಹೀಗಾಗಿ CPR ಶಿಕ್ಷಣವನ್ನ ಪ್ರೌಢ ಹಾಗೂ ಕಾಲೇಜು ಹಂತದ 10,11,12 ನೇ ತರಗತಿಯ ಮಕ್ಕಳಿಗೆ ನೀಡಲು ಶಾಲಾ ಶಿಕ್ಷಣ ಇಲಾಖೆ ಮುಂದಾಗಿದೆ.
ವಾರದಲ್ಲಿ 40 ನಿಮಿಷ ಒಂದು ತರಗತಿಯ ಅವಧಿಯಲ್ಲಿ ಸಿಪಿಆರ್ ಅಂದ್ರೇನು? ಹೇಗೆ ಯಾವ ಸಮಯದಲ್ಲಿ ಇದನ್ನ ಮಾಡಿದ್ರೆ ಜೀವ ಉಳಿಸಬಹುದು? ಹಾಗೂ ಪ್ರಥಮ ದರ್ಜೆ ಚಿಕಿತ್ಸೆ ಹೇಗೆ ನೀಡಬೇಕು.? ಎಂಬ ಎಲ್ಲ ತರಬೇತಿಯ ಶಿಕ್ಷಣವನ್ನ ಶಾಲಾ ಮಕ್ಕಳಿಗೆ ನೀಡಲು ಶಾಲಾ ಶಿಕ್ಷಣ ಇಲಾಖೆ ಮುಂದಾಗಿದೆ. ಈ ಮೂಲಕ ಶಾಲಾ ಹಂತದಲ್ಲಿ ಮಕ್ಕಳಿಗೆ ಆರೋಗ್ಯದ ಬಗ್ಗೆ ತರಬೇತಿ ಹಾಗೂ ಪ್ರಾಥಮಿಕ ಚಿಕಿತ್ಸೆಯ ಶಿಕ್ಷಣ ನೀಡಲು ಶಾಲಾ ಶಿಕ್ಷಣ ಇಲಾಖೆ ಮಹತ್ವದ ಹೆಜ್ಜೆ ಇಟ್ಟಿದೆ.
31 year old bride groom dies of heart attack day before marriage due to heart attack Chikodi.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
23-07-26 01:51 pm
HK News Staffer
CJP ಪ್ರತಿಭಟನೆಯಲ್ಲಿ ಪೊಲೀಸ್ ದೌರ್ಜನ್ಯ; ತುರ್ತು ವ...
22-07-26 02:32 pm
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am