ಬ್ರೇಕಿಂಗ್ ನ್ಯೂಸ್
09-12-20 06:04 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.9: ಶಾಲೆ ಆರಂಭಿಸುವ ಕುರಿತು ಶೀಘ್ರದಲ್ಲೇ ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಸಭೆ ಕರೆದು ನಿರ್ಧರಿಸಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಬುಧವಾರ ವಿಧಾನಸೌಧದಲ್ಲಿ ಖಾಸಗಿ ಅನುದಾನ ರಹಿತ ಶಾಲೆಗಳ ಆಡಳಿತ ಮಂಡಳಿಗಳ ಒಕ್ಕೂಟದ ಪ್ರತಿನಿಧಿಗಳೊಂದಿಗೆ ನಡೆಯ ಸಭೆಯಲ್ಲಿ ಮಾತನಾಡಿದ ಸಚಿವರು, ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ತರಗತಿಗಳನ್ನು ಆದಷ್ಟು ಬೇಗ ಆರಂಭಿಸಬೇಕೆಂಬ ಒತ್ತಾಯ ಇದೆ. ಈ ಬಗ್ಗೆ ಆರೋಗ್ಯ ಇಲಾಖೆಯ ತಜ್ಞರ ಮಾಹಿತಿ ಪಡೆದು ನಿರ್ಧರಿಸಲಾಗುವುದು ಎಂದರು.
ಹಲವು ಸಮಯಗಳ ಕಾಲ ಶಾಲೆಯಿಂದ ಹೊರಗುಳಿಯುವುದರಿಂದ ಮಕ್ಕಳ ಮೇಲೆ ಆಗುತ್ತಿರುವ ಪರಿಣಾಮಗಳ ಬಗ್ಗೆ ಅರಿವಿಗೆ ಬಂದಿದೆ. ಈ ಬಗ್ಗೆ ವಿಧಾನ ಪರಿಷತ್ತಿನ ಪದವೀಧರ ಮತ್ತು ಶಿಕ್ಷಕ ಕ್ಷೇತ್ರದ ಸದಸ್ಯರು ಕೂಡ ಗಮನಕ್ಕೆ ತಂದಿದ್ದಾರೆ. ಮಕ್ಕಳ ಭವಿಷ್ಯದ ಪ್ರಶ್ನೆಯಾಗಿರುವುದರಿಂದ ಸೂಕ್ತ ಸುರಕ್ಷತಾ ಕ್ರಮಗಳೊಂದಿಗೆ ಶೀಘ್ರದಲ್ಲೇ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ತರಗತಿಗಳನ್ನು ಆರಂಭಿಸಲಾಗುವುದು ಎಂದು ಹೇಳಿದರು.
ಇದೇ ವೇಳೆ, ಉನ್ನತ ಶಿಕ್ಷಣ ಸಚಿವ ಡಾ.ಅಶ್ವಥ್ ನಾರಾಯಣ ಮಾತನಾಡಿ, ಕೋವಿಡ್ ಕಾರಣದಿಂದ ಯಾವ ರಾಜ್ಯದಲ್ಲೂ ಪೂರ್ಣ ಪ್ರಮಾಣದಲ್ಲಿ ಶಾಲೆಗಳು ಆರಂಭಗೊಂಡಿಲ್ಲ. ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ವಿಶ್ವವಿದ್ಯಾನಿಲಯ ಮತ್ತು ಉನ್ನತ ಶಿಕ್ಷಣದ ತರಗತಿಗಳನ್ನು ಆರಂಭಿಸಲಾಗಿದೆ. ಪದವಿಪೂರ್ವ ತರಗತಿಗಳ ಬಗ್ಗೆ ಶೀಘ್ರದಲ್ಲಿಯೇ ನಿರ್ಧಾರಕ್ಕೆ ಬರಲಾಗುವುದು ಎಂದು ಹೇಳಿದರು.
ಖಾಸಗಿ ಅನುದಾನ ರಹಿತ ಪದವಿಪೂರ್ವ ಕಾಲೇಜುಗಳ ಆಡಳಿತ ಮಂಡಳಿಗಳ ಒಕ್ಕೂಟದ ಅಧ್ಯಕ್ಷ, ಆಳ್ವಾಸ್ ಪ್ರತಿಷ್ಠಾನದ ಅಧ್ಯಕ್ಷ ಡಾ.ಮೋಹನ ಆಳ್ವಾ, ಮಂಗಳೂರಿನ ಶಾರದಾ ವಿದ್ಯಾಲಯದ ಅಧ್ಯಕ್ಷ ಎಂ.ಬಿ.ಪುರಾಣಿಕ್, ಎಕ್ಸ್ ಪರ್ಟ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ನರೇಂದ್ರ ನಾಯಕ್, ಮಂಗಳೂರಿನ ಶಕ್ತಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಕೆ.ಸಿ.ನಾಯ್ಕ್, ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ಸಂಚಾಲಕ ವಸಂತ ಮಾಧವ ಸೇರಿ ರಾಜ್ಯದ ವಿವಿಧ ಕಾಲೇಜುಗಳ 20ಕ್ಕೂ ಹೆಚ್ಚು ಪ್ರತಿನಿಧಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm