ಬ್ರೇಕಿಂಗ್ ನ್ಯೂಸ್
09-12-20 06:04 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.9: ಶಾಲೆ ಆರಂಭಿಸುವ ಕುರಿತು ಶೀಘ್ರದಲ್ಲೇ ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಸಭೆ ಕರೆದು ನಿರ್ಧರಿಸಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಬುಧವಾರ ವಿಧಾನಸೌಧದಲ್ಲಿ ಖಾಸಗಿ ಅನುದಾನ ರಹಿತ ಶಾಲೆಗಳ ಆಡಳಿತ ಮಂಡಳಿಗಳ ಒಕ್ಕೂಟದ ಪ್ರತಿನಿಧಿಗಳೊಂದಿಗೆ ನಡೆಯ ಸಭೆಯಲ್ಲಿ ಮಾತನಾಡಿದ ಸಚಿವರು, ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ತರಗತಿಗಳನ್ನು ಆದಷ್ಟು ಬೇಗ ಆರಂಭಿಸಬೇಕೆಂಬ ಒತ್ತಾಯ ಇದೆ. ಈ ಬಗ್ಗೆ ಆರೋಗ್ಯ ಇಲಾಖೆಯ ತಜ್ಞರ ಮಾಹಿತಿ ಪಡೆದು ನಿರ್ಧರಿಸಲಾಗುವುದು ಎಂದರು.

ಹಲವು ಸಮಯಗಳ ಕಾಲ ಶಾಲೆಯಿಂದ ಹೊರಗುಳಿಯುವುದರಿಂದ ಮಕ್ಕಳ ಮೇಲೆ ಆಗುತ್ತಿರುವ ಪರಿಣಾಮಗಳ ಬಗ್ಗೆ ಅರಿವಿಗೆ ಬಂದಿದೆ. ಈ ಬಗ್ಗೆ ವಿಧಾನ ಪರಿಷತ್ತಿನ ಪದವೀಧರ ಮತ್ತು ಶಿಕ್ಷಕ ಕ್ಷೇತ್ರದ ಸದಸ್ಯರು ಕೂಡ ಗಮನಕ್ಕೆ ತಂದಿದ್ದಾರೆ. ಮಕ್ಕಳ ಭವಿಷ್ಯದ ಪ್ರಶ್ನೆಯಾಗಿರುವುದರಿಂದ ಸೂಕ್ತ ಸುರಕ್ಷತಾ ಕ್ರಮಗಳೊಂದಿಗೆ ಶೀಘ್ರದಲ್ಲೇ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ತರಗತಿಗಳನ್ನು ಆರಂಭಿಸಲಾಗುವುದು ಎಂದು ಹೇಳಿದರು.
ಇದೇ ವೇಳೆ, ಉನ್ನತ ಶಿಕ್ಷಣ ಸಚಿವ ಡಾ.ಅಶ್ವಥ್ ನಾರಾಯಣ ಮಾತನಾಡಿ, ಕೋವಿಡ್ ಕಾರಣದಿಂದ ಯಾವ ರಾಜ್ಯದಲ್ಲೂ ಪೂರ್ಣ ಪ್ರಮಾಣದಲ್ಲಿ ಶಾಲೆಗಳು ಆರಂಭಗೊಂಡಿಲ್ಲ. ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ವಿಶ್ವವಿದ್ಯಾನಿಲಯ ಮತ್ತು ಉನ್ನತ ಶಿಕ್ಷಣದ ತರಗತಿಗಳನ್ನು ಆರಂಭಿಸಲಾಗಿದೆ. ಪದವಿಪೂರ್ವ ತರಗತಿಗಳ ಬಗ್ಗೆ ಶೀಘ್ರದಲ್ಲಿಯೇ ನಿರ್ಧಾರಕ್ಕೆ ಬರಲಾಗುವುದು ಎಂದು ಹೇಳಿದರು.

ಖಾಸಗಿ ಅನುದಾನ ರಹಿತ ಪದವಿಪೂರ್ವ ಕಾಲೇಜುಗಳ ಆಡಳಿತ ಮಂಡಳಿಗಳ ಒಕ್ಕೂಟದ ಅಧ್ಯಕ್ಷ, ಆಳ್ವಾಸ್ ಪ್ರತಿಷ್ಠಾನದ ಅಧ್ಯಕ್ಷ ಡಾ.ಮೋಹನ ಆಳ್ವಾ, ಮಂಗಳೂರಿನ ಶಾರದಾ ವಿದ್ಯಾಲಯದ ಅಧ್ಯಕ್ಷ ಎಂ.ಬಿ.ಪುರಾಣಿಕ್, ಎಕ್ಸ್ ಪರ್ಟ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ನರೇಂದ್ರ ನಾಯಕ್, ಮಂಗಳೂರಿನ ಶಕ್ತಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಕೆ.ಸಿ.ನಾಯ್ಕ್, ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ಸಂಚಾಲಕ ವಸಂತ ಮಾಧವ ಸೇರಿ ರಾಜ್ಯದ ವಿವಿಧ ಕಾಲೇಜುಗಳ 20ಕ್ಕೂ ಹೆಚ್ಚು ಪ್ರತಿನಿಧಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm