ಬ್ರೇಕಿಂಗ್ ನ್ಯೂಸ್
08-09-24 03:33 pm HK News Desk ಕರ್ನಾಟಕ
ಚಿಕ್ಕಮಗಳೂರು, ಸೆ.8: ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್. ಪುರದಲ್ಲಿ ಹಿಂದೂ, ಮುಸ್ಲಿಂ ಮತ್ತು ಕ್ರಿಶ್ಚಿಯನ್ ಸಮಯದಾಯದವರು ಸೇರಿ ಭಾವೈಕ್ಯತೆಯ ಗಣೇಶನ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಿದ್ದಾರೆ. ಈ ಮೂಲಕ ಸಮಾಜಕ್ಕೆ ಸೌಹಾರ್ದತೆಯ ಸಂದೇಶ ಸಾರಿದ್ದಾರೆ.
ಎನ್. ಆರ್.ಪುರ ತಾಲೂಕಿನ ರಾಜೀವ್ ನಗರದಲ್ಲಿ ಪ್ರತಿಷ್ಟಾಪನೆ ಮಾಡಲಾಗಿರುವ ಗಣೇಶ ಮೂರ್ತಿ ಭಾವೈಕ್ಯತೆಗೆ ಸಾಕ್ಷಿಯಾಗಿದೆ. ಭಾನುವಾರ ಬೆಳಗ್ಗೆ 9 ಗಂಟೆಗೆ ಹಿಂದೂ, ಮುಸ್ಲಿಂ ಮತ್ತು ಕ್ರಿಶ್ಚಿಯನ್ ಸಮುದಾಯದವರು ಎಲ್ಲರೂ ಒಟ್ಟಾಗಿ ಸೇರಿ ಗಣಪತಿಗೆ ವಿಶೇಷ ಪೂಜೆ ಸಲ್ಲಿಸಿ, ಸಂಭ್ರಮಿಸಿದರು.
ವಿನಾಯಕ ಸೇವಾ ಸಮಿತಿ ವತಿಯಿಂದ ಪ್ರತಿಷ್ಠಾಪನೆ ಮಾಡಿರುವ ಈ ಗಣೇಶನಿಗೆ ಭಾವೈಕ್ಯತೆಯ ಗಣಪ ಎಂದೇ ಹೆಸರಿಡಲಾಗಿದೆ. ಅಲ್ಲದೇ ಈ ಗಣಪತಿ ಸಮಿತಿಗೆ ಮುಸ್ಲಿಂ ಮಹಿಳೆಯೇ ಅಧ್ಯಕ್ಷೆ ಆಗಿರುವುದು ವಿಶೇಷ. ಹಿಂದೂ ಮುಸ್ಲಿಮರ ಮಧ್ಯೆ ಅನೇಕ ವಿಚಾರಕ್ಕೆ ಘರ್ಷಣೆಗಳು ನಡೆಯುತ್ತವೆ. ಆದರೆ ಹಿಂದುಗಳ ಗಣೇಶನದ ಹಬ್ಬವನ್ನು ಸೌಹಾರ್ದ ಸಾರುವಂತೆ ಇಲ್ಲಿ ಆಚರಿಸಲಾಗಿದ್ದು ಸಮಾಜಕ್ಕೆ ಮಾದರಿಯಾಗಿದೆ.
ಕಳೆದ 14 ವರ್ಷಗಳಿಂದ ಇದೇ ಗ್ರಾಮದ ಮುಸ್ಲಿಂ ಮಹಿಳೆ ಜುಬೇದಾ ಗಣಪತಿ ಸೇವಾ ಸಮಿತಿ ಅಧ್ಯಕ್ಷರಾಗಿ ಹಿಂದೂ ಸಮುದಾಯದರ ಜೊತೆ ಸೇರಿ ಗಣೇಶೋತ್ಸವ ನಡೆಸಿಕೊಂಡು ಬರುತ್ತಿದ್ದಾರೆ. ಈ ಬಾರಿಯೂ ಗಣೇಶನ ಮೂರ್ತಿಯನ್ನು ತಂದು ಭಾನುವಾರ ಬೆಳಗ್ಗೆ ಪ್ರತಿಷ್ಠಾಪಿಸಿ ಹಿಂದೂ, ಮುಸ್ಲಿಂ ಮತ್ತು ಕ್ರಿಶ್ಚಿಯನ್ ಸಮುದಾಯದ ಮಕ್ಕಳನ್ನು ಒಂದು ಕಡೆ ಸೇರಿಸಿ ಯಾವುದೇ ತಾರತಮ್ಯವಿಲ್ಲದೇ ಎಲ್ಲರೂ ಒಟ್ಟಾಗಿ ಪೂಜೆ ಸಲ್ಲಿಸಲಾಗಿದೆ. ಮಕ್ಕಳಿಗೂ ಸಹ ಭಾವೈಕ್ಯತೆ ಸಂದೇಶವನ್ನು ಸಾರಲಾಗಿದೆ.
14 ವರ್ಷಗಳಿಂದ ನಾವು ರಾಜೀವ್ ನಗರದಲ್ಲಿ ಗಣಪತಿ ಸೇವಾ ಸಮಿತಿ ಮೂಲಕ ಗಣಪತಿ ಪ್ರತಿಷ್ಠಾಪನೆ ಮಾಡಿ ಪೂಜಿಸುತ್ತಿದ್ದೇವೆ. ಯಾವ ಧರ್ಮದ ಭೇದವಿಲ್ಲದೇ ಎಲ್ಲರೂ ಗಣೇಶನನ್ನು ಪೂಜಿಸುತ್ತಾರೆ. ಹಿಂದೂ, ಮುಸ್ಲಿಂ ಮತ್ತು ಕ್ರಿಶ್ಚಿಯನ್ ಸಮಯದಾಯದವರು ಸೇರಿ ಪ್ರತಿವರ್ಷ ಹಬ್ಬ ಆಚರಣೆ ಮಾಡುತ್ತೇವೆ ಎಂದು ಜುಬೇದಾ ಹೇಳಿದ್ದಾರೆ.
Chikmagalur Ganesha festival celebrated in harmony by all three religions, muslims women leads as president.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 04:14 pm
HK News Staffer
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
ಚರಕದಿಂದ ನೂಲು ತೆಗೆದು, ಸಮುದ್ರ ಕಿನಾರೆಯಲ್ಲಿ ಉಪ್ಪು...
15-08-26 10:08 pm
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm