ಬ್ರೇಕಿಂಗ್ ನ್ಯೂಸ್
08-09-24 03:33 pm HK News Desk ಕರ್ನಾಟಕ
ಚಿಕ್ಕಮಗಳೂರು, ಸೆ.8: ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್. ಪುರದಲ್ಲಿ ಹಿಂದೂ, ಮುಸ್ಲಿಂ ಮತ್ತು ಕ್ರಿಶ್ಚಿಯನ್ ಸಮಯದಾಯದವರು ಸೇರಿ ಭಾವೈಕ್ಯತೆಯ ಗಣೇಶನ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಿದ್ದಾರೆ. ಈ ಮೂಲಕ ಸಮಾಜಕ್ಕೆ ಸೌಹಾರ್ದತೆಯ ಸಂದೇಶ ಸಾರಿದ್ದಾರೆ.
ಎನ್. ಆರ್.ಪುರ ತಾಲೂಕಿನ ರಾಜೀವ್ ನಗರದಲ್ಲಿ ಪ್ರತಿಷ್ಟಾಪನೆ ಮಾಡಲಾಗಿರುವ ಗಣೇಶ ಮೂರ್ತಿ ಭಾವೈಕ್ಯತೆಗೆ ಸಾಕ್ಷಿಯಾಗಿದೆ. ಭಾನುವಾರ ಬೆಳಗ್ಗೆ 9 ಗಂಟೆಗೆ ಹಿಂದೂ, ಮುಸ್ಲಿಂ ಮತ್ತು ಕ್ರಿಶ್ಚಿಯನ್ ಸಮುದಾಯದವರು ಎಲ್ಲರೂ ಒಟ್ಟಾಗಿ ಸೇರಿ ಗಣಪತಿಗೆ ವಿಶೇಷ ಪೂಜೆ ಸಲ್ಲಿಸಿ, ಸಂಭ್ರಮಿಸಿದರು.
ವಿನಾಯಕ ಸೇವಾ ಸಮಿತಿ ವತಿಯಿಂದ ಪ್ರತಿಷ್ಠಾಪನೆ ಮಾಡಿರುವ ಈ ಗಣೇಶನಿಗೆ ಭಾವೈಕ್ಯತೆಯ ಗಣಪ ಎಂದೇ ಹೆಸರಿಡಲಾಗಿದೆ. ಅಲ್ಲದೇ ಈ ಗಣಪತಿ ಸಮಿತಿಗೆ ಮುಸ್ಲಿಂ ಮಹಿಳೆಯೇ ಅಧ್ಯಕ್ಷೆ ಆಗಿರುವುದು ವಿಶೇಷ. ಹಿಂದೂ ಮುಸ್ಲಿಮರ ಮಧ್ಯೆ ಅನೇಕ ವಿಚಾರಕ್ಕೆ ಘರ್ಷಣೆಗಳು ನಡೆಯುತ್ತವೆ. ಆದರೆ ಹಿಂದುಗಳ ಗಣೇಶನದ ಹಬ್ಬವನ್ನು ಸೌಹಾರ್ದ ಸಾರುವಂತೆ ಇಲ್ಲಿ ಆಚರಿಸಲಾಗಿದ್ದು ಸಮಾಜಕ್ಕೆ ಮಾದರಿಯಾಗಿದೆ.
ಕಳೆದ 14 ವರ್ಷಗಳಿಂದ ಇದೇ ಗ್ರಾಮದ ಮುಸ್ಲಿಂ ಮಹಿಳೆ ಜುಬೇದಾ ಗಣಪತಿ ಸೇವಾ ಸಮಿತಿ ಅಧ್ಯಕ್ಷರಾಗಿ ಹಿಂದೂ ಸಮುದಾಯದರ ಜೊತೆ ಸೇರಿ ಗಣೇಶೋತ್ಸವ ನಡೆಸಿಕೊಂಡು ಬರುತ್ತಿದ್ದಾರೆ. ಈ ಬಾರಿಯೂ ಗಣೇಶನ ಮೂರ್ತಿಯನ್ನು ತಂದು ಭಾನುವಾರ ಬೆಳಗ್ಗೆ ಪ್ರತಿಷ್ಠಾಪಿಸಿ ಹಿಂದೂ, ಮುಸ್ಲಿಂ ಮತ್ತು ಕ್ರಿಶ್ಚಿಯನ್ ಸಮುದಾಯದ ಮಕ್ಕಳನ್ನು ಒಂದು ಕಡೆ ಸೇರಿಸಿ ಯಾವುದೇ ತಾರತಮ್ಯವಿಲ್ಲದೇ ಎಲ್ಲರೂ ಒಟ್ಟಾಗಿ ಪೂಜೆ ಸಲ್ಲಿಸಲಾಗಿದೆ. ಮಕ್ಕಳಿಗೂ ಸಹ ಭಾವೈಕ್ಯತೆ ಸಂದೇಶವನ್ನು ಸಾರಲಾಗಿದೆ.
14 ವರ್ಷಗಳಿಂದ ನಾವು ರಾಜೀವ್ ನಗರದಲ್ಲಿ ಗಣಪತಿ ಸೇವಾ ಸಮಿತಿ ಮೂಲಕ ಗಣಪತಿ ಪ್ರತಿಷ್ಠಾಪನೆ ಮಾಡಿ ಪೂಜಿಸುತ್ತಿದ್ದೇವೆ. ಯಾವ ಧರ್ಮದ ಭೇದವಿಲ್ಲದೇ ಎಲ್ಲರೂ ಗಣೇಶನನ್ನು ಪೂಜಿಸುತ್ತಾರೆ. ಹಿಂದೂ, ಮುಸ್ಲಿಂ ಮತ್ತು ಕ್ರಿಶ್ಚಿಯನ್ ಸಮಯದಾಯದವರು ಸೇರಿ ಪ್ರತಿವರ್ಷ ಹಬ್ಬ ಆಚರಣೆ ಮಾಡುತ್ತೇವೆ ಎಂದು ಜುಬೇದಾ ಹೇಳಿದ್ದಾರೆ.
Chikmagalur Ganesha festival celebrated in harmony by all three religions, muslims women leads as president.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm