ಬ್ರೇಕಿಂಗ್ ನ್ಯೂಸ್
08-09-24 03:33 pm HK News Desk ಕರ್ನಾಟಕ
ಚಿಕ್ಕಮಗಳೂರು, ಸೆ.8: ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್. ಪುರದಲ್ಲಿ ಹಿಂದೂ, ಮುಸ್ಲಿಂ ಮತ್ತು ಕ್ರಿಶ್ಚಿಯನ್ ಸಮಯದಾಯದವರು ಸೇರಿ ಭಾವೈಕ್ಯತೆಯ ಗಣೇಶನ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಿದ್ದಾರೆ. ಈ ಮೂಲಕ ಸಮಾಜಕ್ಕೆ ಸೌಹಾರ್ದತೆಯ ಸಂದೇಶ ಸಾರಿದ್ದಾರೆ.
ಎನ್. ಆರ್.ಪುರ ತಾಲೂಕಿನ ರಾಜೀವ್ ನಗರದಲ್ಲಿ ಪ್ರತಿಷ್ಟಾಪನೆ ಮಾಡಲಾಗಿರುವ ಗಣೇಶ ಮೂರ್ತಿ ಭಾವೈಕ್ಯತೆಗೆ ಸಾಕ್ಷಿಯಾಗಿದೆ. ಭಾನುವಾರ ಬೆಳಗ್ಗೆ 9 ಗಂಟೆಗೆ ಹಿಂದೂ, ಮುಸ್ಲಿಂ ಮತ್ತು ಕ್ರಿಶ್ಚಿಯನ್ ಸಮುದಾಯದವರು ಎಲ್ಲರೂ ಒಟ್ಟಾಗಿ ಸೇರಿ ಗಣಪತಿಗೆ ವಿಶೇಷ ಪೂಜೆ ಸಲ್ಲಿಸಿ, ಸಂಭ್ರಮಿಸಿದರು.
ವಿನಾಯಕ ಸೇವಾ ಸಮಿತಿ ವತಿಯಿಂದ ಪ್ರತಿಷ್ಠಾಪನೆ ಮಾಡಿರುವ ಈ ಗಣೇಶನಿಗೆ ಭಾವೈಕ್ಯತೆಯ ಗಣಪ ಎಂದೇ ಹೆಸರಿಡಲಾಗಿದೆ. ಅಲ್ಲದೇ ಈ ಗಣಪತಿ ಸಮಿತಿಗೆ ಮುಸ್ಲಿಂ ಮಹಿಳೆಯೇ ಅಧ್ಯಕ್ಷೆ ಆಗಿರುವುದು ವಿಶೇಷ. ಹಿಂದೂ ಮುಸ್ಲಿಮರ ಮಧ್ಯೆ ಅನೇಕ ವಿಚಾರಕ್ಕೆ ಘರ್ಷಣೆಗಳು ನಡೆಯುತ್ತವೆ. ಆದರೆ ಹಿಂದುಗಳ ಗಣೇಶನದ ಹಬ್ಬವನ್ನು ಸೌಹಾರ್ದ ಸಾರುವಂತೆ ಇಲ್ಲಿ ಆಚರಿಸಲಾಗಿದ್ದು ಸಮಾಜಕ್ಕೆ ಮಾದರಿಯಾಗಿದೆ.
ಕಳೆದ 14 ವರ್ಷಗಳಿಂದ ಇದೇ ಗ್ರಾಮದ ಮುಸ್ಲಿಂ ಮಹಿಳೆ ಜುಬೇದಾ ಗಣಪತಿ ಸೇವಾ ಸಮಿತಿ ಅಧ್ಯಕ್ಷರಾಗಿ ಹಿಂದೂ ಸಮುದಾಯದರ ಜೊತೆ ಸೇರಿ ಗಣೇಶೋತ್ಸವ ನಡೆಸಿಕೊಂಡು ಬರುತ್ತಿದ್ದಾರೆ. ಈ ಬಾರಿಯೂ ಗಣೇಶನ ಮೂರ್ತಿಯನ್ನು ತಂದು ಭಾನುವಾರ ಬೆಳಗ್ಗೆ ಪ್ರತಿಷ್ಠಾಪಿಸಿ ಹಿಂದೂ, ಮುಸ್ಲಿಂ ಮತ್ತು ಕ್ರಿಶ್ಚಿಯನ್ ಸಮುದಾಯದ ಮಕ್ಕಳನ್ನು ಒಂದು ಕಡೆ ಸೇರಿಸಿ ಯಾವುದೇ ತಾರತಮ್ಯವಿಲ್ಲದೇ ಎಲ್ಲರೂ ಒಟ್ಟಾಗಿ ಪೂಜೆ ಸಲ್ಲಿಸಲಾಗಿದೆ. ಮಕ್ಕಳಿಗೂ ಸಹ ಭಾವೈಕ್ಯತೆ ಸಂದೇಶವನ್ನು ಸಾರಲಾಗಿದೆ.
14 ವರ್ಷಗಳಿಂದ ನಾವು ರಾಜೀವ್ ನಗರದಲ್ಲಿ ಗಣಪತಿ ಸೇವಾ ಸಮಿತಿ ಮೂಲಕ ಗಣಪತಿ ಪ್ರತಿಷ್ಠಾಪನೆ ಮಾಡಿ ಪೂಜಿಸುತ್ತಿದ್ದೇವೆ. ಯಾವ ಧರ್ಮದ ಭೇದವಿಲ್ಲದೇ ಎಲ್ಲರೂ ಗಣೇಶನನ್ನು ಪೂಜಿಸುತ್ತಾರೆ. ಹಿಂದೂ, ಮುಸ್ಲಿಂ ಮತ್ತು ಕ್ರಿಶ್ಚಿಯನ್ ಸಮಯದಾಯದವರು ಸೇರಿ ಪ್ರತಿವರ್ಷ ಹಬ್ಬ ಆಚರಣೆ ಮಾಡುತ್ತೇವೆ ಎಂದು ಜುಬೇದಾ ಹೇಳಿದ್ದಾರೆ.
Chikmagalur Ganesha festival celebrated in harmony by all three religions, muslims women leads as president.
09-03-26 09:51 pm
HK News Staffer
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
ಕ್ಷುಲ್ಲಕ ಕಾರಣಕ್ಕೆ ಪತಿ- ಪತ್ನಿ ಜಗಳ, ಎರಡು ವರ್ಷದ...
09-03-26 05:44 pm
ಅವಕಾಶ ಕೊಟ್ಟರೆ ಮತ್ತೆರಡು ವರ್ಷ ಬಜೆಟ್ ಮಂಡಿಸುತ್ತೇನ...
09-03-26 04:17 pm
ಬಳ್ಳಾರಿ ವಸತಿ ಶಾಲೆಯಲ್ಲೇ ವಿದ್ಯಾರ್ಥಿಗಳ ಸಂಘರ್ಷ ;...
09-03-26 03:24 pm
09-03-26 01:44 pm
HK News Staffer
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
09-03-26 09:52 pm
HK News Staffer
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
CM Siddaramaiah, Kambala Bantwal: ರಮಾನಾಥ ರೈ ಐ...
07-03-26 11:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm