ಬ್ರೇಕಿಂಗ್ ನ್ಯೂಸ್
08-09-24 03:33 pm HK News Desk ಕರ್ನಾಟಕ
ಚಿಕ್ಕಮಗಳೂರು, ಸೆ.8: ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್. ಪುರದಲ್ಲಿ ಹಿಂದೂ, ಮುಸ್ಲಿಂ ಮತ್ತು ಕ್ರಿಶ್ಚಿಯನ್ ಸಮಯದಾಯದವರು ಸೇರಿ ಭಾವೈಕ್ಯತೆಯ ಗಣೇಶನ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಿದ್ದಾರೆ. ಈ ಮೂಲಕ ಸಮಾಜಕ್ಕೆ ಸೌಹಾರ್ದತೆಯ ಸಂದೇಶ ಸಾರಿದ್ದಾರೆ.
ಎನ್. ಆರ್.ಪುರ ತಾಲೂಕಿನ ರಾಜೀವ್ ನಗರದಲ್ಲಿ ಪ್ರತಿಷ್ಟಾಪನೆ ಮಾಡಲಾಗಿರುವ ಗಣೇಶ ಮೂರ್ತಿ ಭಾವೈಕ್ಯತೆಗೆ ಸಾಕ್ಷಿಯಾಗಿದೆ. ಭಾನುವಾರ ಬೆಳಗ್ಗೆ 9 ಗಂಟೆಗೆ ಹಿಂದೂ, ಮುಸ್ಲಿಂ ಮತ್ತು ಕ್ರಿಶ್ಚಿಯನ್ ಸಮುದಾಯದವರು ಎಲ್ಲರೂ ಒಟ್ಟಾಗಿ ಸೇರಿ ಗಣಪತಿಗೆ ವಿಶೇಷ ಪೂಜೆ ಸಲ್ಲಿಸಿ, ಸಂಭ್ರಮಿಸಿದರು.
ವಿನಾಯಕ ಸೇವಾ ಸಮಿತಿ ವತಿಯಿಂದ ಪ್ರತಿಷ್ಠಾಪನೆ ಮಾಡಿರುವ ಈ ಗಣೇಶನಿಗೆ ಭಾವೈಕ್ಯತೆಯ ಗಣಪ ಎಂದೇ ಹೆಸರಿಡಲಾಗಿದೆ. ಅಲ್ಲದೇ ಈ ಗಣಪತಿ ಸಮಿತಿಗೆ ಮುಸ್ಲಿಂ ಮಹಿಳೆಯೇ ಅಧ್ಯಕ್ಷೆ ಆಗಿರುವುದು ವಿಶೇಷ. ಹಿಂದೂ ಮುಸ್ಲಿಮರ ಮಧ್ಯೆ ಅನೇಕ ವಿಚಾರಕ್ಕೆ ಘರ್ಷಣೆಗಳು ನಡೆಯುತ್ತವೆ. ಆದರೆ ಹಿಂದುಗಳ ಗಣೇಶನದ ಹಬ್ಬವನ್ನು ಸೌಹಾರ್ದ ಸಾರುವಂತೆ ಇಲ್ಲಿ ಆಚರಿಸಲಾಗಿದ್ದು ಸಮಾಜಕ್ಕೆ ಮಾದರಿಯಾಗಿದೆ.
ಕಳೆದ 14 ವರ್ಷಗಳಿಂದ ಇದೇ ಗ್ರಾಮದ ಮುಸ್ಲಿಂ ಮಹಿಳೆ ಜುಬೇದಾ ಗಣಪತಿ ಸೇವಾ ಸಮಿತಿ ಅಧ್ಯಕ್ಷರಾಗಿ ಹಿಂದೂ ಸಮುದಾಯದರ ಜೊತೆ ಸೇರಿ ಗಣೇಶೋತ್ಸವ ನಡೆಸಿಕೊಂಡು ಬರುತ್ತಿದ್ದಾರೆ. ಈ ಬಾರಿಯೂ ಗಣೇಶನ ಮೂರ್ತಿಯನ್ನು ತಂದು ಭಾನುವಾರ ಬೆಳಗ್ಗೆ ಪ್ರತಿಷ್ಠಾಪಿಸಿ ಹಿಂದೂ, ಮುಸ್ಲಿಂ ಮತ್ತು ಕ್ರಿಶ್ಚಿಯನ್ ಸಮುದಾಯದ ಮಕ್ಕಳನ್ನು ಒಂದು ಕಡೆ ಸೇರಿಸಿ ಯಾವುದೇ ತಾರತಮ್ಯವಿಲ್ಲದೇ ಎಲ್ಲರೂ ಒಟ್ಟಾಗಿ ಪೂಜೆ ಸಲ್ಲಿಸಲಾಗಿದೆ. ಮಕ್ಕಳಿಗೂ ಸಹ ಭಾವೈಕ್ಯತೆ ಸಂದೇಶವನ್ನು ಸಾರಲಾಗಿದೆ.
14 ವರ್ಷಗಳಿಂದ ನಾವು ರಾಜೀವ್ ನಗರದಲ್ಲಿ ಗಣಪತಿ ಸೇವಾ ಸಮಿತಿ ಮೂಲಕ ಗಣಪತಿ ಪ್ರತಿಷ್ಠಾಪನೆ ಮಾಡಿ ಪೂಜಿಸುತ್ತಿದ್ದೇವೆ. ಯಾವ ಧರ್ಮದ ಭೇದವಿಲ್ಲದೇ ಎಲ್ಲರೂ ಗಣೇಶನನ್ನು ಪೂಜಿಸುತ್ತಾರೆ. ಹಿಂದೂ, ಮುಸ್ಲಿಂ ಮತ್ತು ಕ್ರಿಶ್ಚಿಯನ್ ಸಮಯದಾಯದವರು ಸೇರಿ ಪ್ರತಿವರ್ಷ ಹಬ್ಬ ಆಚರಣೆ ಮಾಡುತ್ತೇವೆ ಎಂದು ಜುಬೇದಾ ಹೇಳಿದ್ದಾರೆ.
Chikmagalur Ganesha festival celebrated in harmony by all three religions, muslims women leads as president.
20-09-26 03:32 pm
HK News Staffer
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm