ಬ್ರೇಕಿಂಗ್ ನ್ಯೂಸ್
08-09-24 03:33 pm HK News Desk ಕರ್ನಾಟಕ
ಚಿಕ್ಕಮಗಳೂರು, ಸೆ.8: ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್. ಪುರದಲ್ಲಿ ಹಿಂದೂ, ಮುಸ್ಲಿಂ ಮತ್ತು ಕ್ರಿಶ್ಚಿಯನ್ ಸಮಯದಾಯದವರು ಸೇರಿ ಭಾವೈಕ್ಯತೆಯ ಗಣೇಶನ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಿದ್ದಾರೆ. ಈ ಮೂಲಕ ಸಮಾಜಕ್ಕೆ ಸೌಹಾರ್ದತೆಯ ಸಂದೇಶ ಸಾರಿದ್ದಾರೆ.
ಎನ್. ಆರ್.ಪುರ ತಾಲೂಕಿನ ರಾಜೀವ್ ನಗರದಲ್ಲಿ ಪ್ರತಿಷ್ಟಾಪನೆ ಮಾಡಲಾಗಿರುವ ಗಣೇಶ ಮೂರ್ತಿ ಭಾವೈಕ್ಯತೆಗೆ ಸಾಕ್ಷಿಯಾಗಿದೆ. ಭಾನುವಾರ ಬೆಳಗ್ಗೆ 9 ಗಂಟೆಗೆ ಹಿಂದೂ, ಮುಸ್ಲಿಂ ಮತ್ತು ಕ್ರಿಶ್ಚಿಯನ್ ಸಮುದಾಯದವರು ಎಲ್ಲರೂ ಒಟ್ಟಾಗಿ ಸೇರಿ ಗಣಪತಿಗೆ ವಿಶೇಷ ಪೂಜೆ ಸಲ್ಲಿಸಿ, ಸಂಭ್ರಮಿಸಿದರು.
ವಿನಾಯಕ ಸೇವಾ ಸಮಿತಿ ವತಿಯಿಂದ ಪ್ರತಿಷ್ಠಾಪನೆ ಮಾಡಿರುವ ಈ ಗಣೇಶನಿಗೆ ಭಾವೈಕ್ಯತೆಯ ಗಣಪ ಎಂದೇ ಹೆಸರಿಡಲಾಗಿದೆ. ಅಲ್ಲದೇ ಈ ಗಣಪತಿ ಸಮಿತಿಗೆ ಮುಸ್ಲಿಂ ಮಹಿಳೆಯೇ ಅಧ್ಯಕ್ಷೆ ಆಗಿರುವುದು ವಿಶೇಷ. ಹಿಂದೂ ಮುಸ್ಲಿಮರ ಮಧ್ಯೆ ಅನೇಕ ವಿಚಾರಕ್ಕೆ ಘರ್ಷಣೆಗಳು ನಡೆಯುತ್ತವೆ. ಆದರೆ ಹಿಂದುಗಳ ಗಣೇಶನದ ಹಬ್ಬವನ್ನು ಸೌಹಾರ್ದ ಸಾರುವಂತೆ ಇಲ್ಲಿ ಆಚರಿಸಲಾಗಿದ್ದು ಸಮಾಜಕ್ಕೆ ಮಾದರಿಯಾಗಿದೆ.
ಕಳೆದ 14 ವರ್ಷಗಳಿಂದ ಇದೇ ಗ್ರಾಮದ ಮುಸ್ಲಿಂ ಮಹಿಳೆ ಜುಬೇದಾ ಗಣಪತಿ ಸೇವಾ ಸಮಿತಿ ಅಧ್ಯಕ್ಷರಾಗಿ ಹಿಂದೂ ಸಮುದಾಯದರ ಜೊತೆ ಸೇರಿ ಗಣೇಶೋತ್ಸವ ನಡೆಸಿಕೊಂಡು ಬರುತ್ತಿದ್ದಾರೆ. ಈ ಬಾರಿಯೂ ಗಣೇಶನ ಮೂರ್ತಿಯನ್ನು ತಂದು ಭಾನುವಾರ ಬೆಳಗ್ಗೆ ಪ್ರತಿಷ್ಠಾಪಿಸಿ ಹಿಂದೂ, ಮುಸ್ಲಿಂ ಮತ್ತು ಕ್ರಿಶ್ಚಿಯನ್ ಸಮುದಾಯದ ಮಕ್ಕಳನ್ನು ಒಂದು ಕಡೆ ಸೇರಿಸಿ ಯಾವುದೇ ತಾರತಮ್ಯವಿಲ್ಲದೇ ಎಲ್ಲರೂ ಒಟ್ಟಾಗಿ ಪೂಜೆ ಸಲ್ಲಿಸಲಾಗಿದೆ. ಮಕ್ಕಳಿಗೂ ಸಹ ಭಾವೈಕ್ಯತೆ ಸಂದೇಶವನ್ನು ಸಾರಲಾಗಿದೆ.
14 ವರ್ಷಗಳಿಂದ ನಾವು ರಾಜೀವ್ ನಗರದಲ್ಲಿ ಗಣಪತಿ ಸೇವಾ ಸಮಿತಿ ಮೂಲಕ ಗಣಪತಿ ಪ್ರತಿಷ್ಠಾಪನೆ ಮಾಡಿ ಪೂಜಿಸುತ್ತಿದ್ದೇವೆ. ಯಾವ ಧರ್ಮದ ಭೇದವಿಲ್ಲದೇ ಎಲ್ಲರೂ ಗಣೇಶನನ್ನು ಪೂಜಿಸುತ್ತಾರೆ. ಹಿಂದೂ, ಮುಸ್ಲಿಂ ಮತ್ತು ಕ್ರಿಶ್ಚಿಯನ್ ಸಮಯದಾಯದವರು ಸೇರಿ ಪ್ರತಿವರ್ಷ ಹಬ್ಬ ಆಚರಣೆ ಮಾಡುತ್ತೇವೆ ಎಂದು ಜುಬೇದಾ ಹೇಳಿದ್ದಾರೆ.
Chikmagalur Ganesha festival celebrated in harmony by all three religions, muslims women leads as president.
21-04-25 07:27 pm
Bangalore Correspondent
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm