ಬ್ರೇಕಿಂಗ್ ನ್ಯೂಸ್
08-09-24 03:33 pm HK News Desk ಕರ್ನಾಟಕ
ಚಿಕ್ಕಮಗಳೂರು, ಸೆ.8: ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್. ಪುರದಲ್ಲಿ ಹಿಂದೂ, ಮುಸ್ಲಿಂ ಮತ್ತು ಕ್ರಿಶ್ಚಿಯನ್ ಸಮಯದಾಯದವರು ಸೇರಿ ಭಾವೈಕ್ಯತೆಯ ಗಣೇಶನ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಿದ್ದಾರೆ. ಈ ಮೂಲಕ ಸಮಾಜಕ್ಕೆ ಸೌಹಾರ್ದತೆಯ ಸಂದೇಶ ಸಾರಿದ್ದಾರೆ.
ಎನ್. ಆರ್.ಪುರ ತಾಲೂಕಿನ ರಾಜೀವ್ ನಗರದಲ್ಲಿ ಪ್ರತಿಷ್ಟಾಪನೆ ಮಾಡಲಾಗಿರುವ ಗಣೇಶ ಮೂರ್ತಿ ಭಾವೈಕ್ಯತೆಗೆ ಸಾಕ್ಷಿಯಾಗಿದೆ. ಭಾನುವಾರ ಬೆಳಗ್ಗೆ 9 ಗಂಟೆಗೆ ಹಿಂದೂ, ಮುಸ್ಲಿಂ ಮತ್ತು ಕ್ರಿಶ್ಚಿಯನ್ ಸಮುದಾಯದವರು ಎಲ್ಲರೂ ಒಟ್ಟಾಗಿ ಸೇರಿ ಗಣಪತಿಗೆ ವಿಶೇಷ ಪೂಜೆ ಸಲ್ಲಿಸಿ, ಸಂಭ್ರಮಿಸಿದರು.
ವಿನಾಯಕ ಸೇವಾ ಸಮಿತಿ ವತಿಯಿಂದ ಪ್ರತಿಷ್ಠಾಪನೆ ಮಾಡಿರುವ ಈ ಗಣೇಶನಿಗೆ ಭಾವೈಕ್ಯತೆಯ ಗಣಪ ಎಂದೇ ಹೆಸರಿಡಲಾಗಿದೆ. ಅಲ್ಲದೇ ಈ ಗಣಪತಿ ಸಮಿತಿಗೆ ಮುಸ್ಲಿಂ ಮಹಿಳೆಯೇ ಅಧ್ಯಕ್ಷೆ ಆಗಿರುವುದು ವಿಶೇಷ. ಹಿಂದೂ ಮುಸ್ಲಿಮರ ಮಧ್ಯೆ ಅನೇಕ ವಿಚಾರಕ್ಕೆ ಘರ್ಷಣೆಗಳು ನಡೆಯುತ್ತವೆ. ಆದರೆ ಹಿಂದುಗಳ ಗಣೇಶನದ ಹಬ್ಬವನ್ನು ಸೌಹಾರ್ದ ಸಾರುವಂತೆ ಇಲ್ಲಿ ಆಚರಿಸಲಾಗಿದ್ದು ಸಮಾಜಕ್ಕೆ ಮಾದರಿಯಾಗಿದೆ.
ಕಳೆದ 14 ವರ್ಷಗಳಿಂದ ಇದೇ ಗ್ರಾಮದ ಮುಸ್ಲಿಂ ಮಹಿಳೆ ಜುಬೇದಾ ಗಣಪತಿ ಸೇವಾ ಸಮಿತಿ ಅಧ್ಯಕ್ಷರಾಗಿ ಹಿಂದೂ ಸಮುದಾಯದರ ಜೊತೆ ಸೇರಿ ಗಣೇಶೋತ್ಸವ ನಡೆಸಿಕೊಂಡು ಬರುತ್ತಿದ್ದಾರೆ. ಈ ಬಾರಿಯೂ ಗಣೇಶನ ಮೂರ್ತಿಯನ್ನು ತಂದು ಭಾನುವಾರ ಬೆಳಗ್ಗೆ ಪ್ರತಿಷ್ಠಾಪಿಸಿ ಹಿಂದೂ, ಮುಸ್ಲಿಂ ಮತ್ತು ಕ್ರಿಶ್ಚಿಯನ್ ಸಮುದಾಯದ ಮಕ್ಕಳನ್ನು ಒಂದು ಕಡೆ ಸೇರಿಸಿ ಯಾವುದೇ ತಾರತಮ್ಯವಿಲ್ಲದೇ ಎಲ್ಲರೂ ಒಟ್ಟಾಗಿ ಪೂಜೆ ಸಲ್ಲಿಸಲಾಗಿದೆ. ಮಕ್ಕಳಿಗೂ ಸಹ ಭಾವೈಕ್ಯತೆ ಸಂದೇಶವನ್ನು ಸಾರಲಾಗಿದೆ.
14 ವರ್ಷಗಳಿಂದ ನಾವು ರಾಜೀವ್ ನಗರದಲ್ಲಿ ಗಣಪತಿ ಸೇವಾ ಸಮಿತಿ ಮೂಲಕ ಗಣಪತಿ ಪ್ರತಿಷ್ಠಾಪನೆ ಮಾಡಿ ಪೂಜಿಸುತ್ತಿದ್ದೇವೆ. ಯಾವ ಧರ್ಮದ ಭೇದವಿಲ್ಲದೇ ಎಲ್ಲರೂ ಗಣೇಶನನ್ನು ಪೂಜಿಸುತ್ತಾರೆ. ಹಿಂದೂ, ಮುಸ್ಲಿಂ ಮತ್ತು ಕ್ರಿಶ್ಚಿಯನ್ ಸಮಯದಾಯದವರು ಸೇರಿ ಪ್ರತಿವರ್ಷ ಹಬ್ಬ ಆಚರಣೆ ಮಾಡುತ್ತೇವೆ ಎಂದು ಜುಬೇದಾ ಹೇಳಿದ್ದಾರೆ.
Chikmagalur Ganesha festival celebrated in harmony by all three religions, muslims women leads as president.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
23-07-26 01:51 pm
HK News Staffer
CJP ಪ್ರತಿಭಟನೆಯಲ್ಲಿ ಪೊಲೀಸ್ ದೌರ್ಜನ್ಯ; ತುರ್ತು ವ...
22-07-26 02:32 pm
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am