ಬ್ರೇಕಿಂಗ್ ನ್ಯೂಸ್
09-09-24 04:49 pm HK News Desk ಕರ್ನಾಟಕ
ತುಮಕೂರು, ಸೆ.9: ಕಾಂಗ್ರೆಸ್ ನಲ್ಲಿ ಮುಂದಿನ ಸಿಎಂ ಯಾರು ಎನ್ನುವ ಚರ್ಚೆ ಜೋರಾಗಿದೆ. ಕೆಲವು ನಾಯಕರ ಹಿಂಬಾಲಕರು ತಮ್ಮವರೇ ಮುಂದಿನ ಸಿಎಂ ಎಂದು ಪೋಸ್ಟರ್ ಹಾಕುತ್ತಿದ್ದಾರೆ. ಪರಮೇಶ್ವರ್ ಮುಂದಿನ ಸಿಎಂ ಆಗಲಿದ್ದಾರೆ ಎಂದು ತುಮಕೂರು ಭಾಗದಲ್ಲಿ ಅವರ ಬೆಂಬಲಿಗರು ಪೋಸ್ಟರ್ ಹಾಕಲು ಆರಂಭಿಸಿದ್ದಾರೆ.
ಸಿದ್ದರಾಮಯ್ಯ ಅವರ ಮೂಡಾ ಪ್ರಕರಣದ ಬಗ್ಗೆ ಹೈಕೋರ್ಟ್ ತೀರ್ಪು ಹೊರಬರುವ ಮೊದಲೇ ಸಿಎಂ ಪೋಸ್ಟರ್ ಶುರುವಾಗಿದೆ. ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ಬೆಂಬಲಿಗರು ಈಗ ಕಾಂಗ್ರೆಸಿನ ನೂತನ ಸಿಎಂ ಪರಮೇಶ್ವರ್ ಎಂದು ಪೋಸ್ಟರ್ ಹಾಕಿದ್ದು ಭಾರೀ ವೈರಲ್ ಆಗಿದೆ.
ಮುಂದಿನ ಸಿಎಂ ಪರಮೇಶ್ವರ್ ಆಗೋದು ಖಚಿತ ಎಂದು ಗೃಹ ಸಚಿವರ ತವರು ನೆಲ ಕೊರಟಗೆರೆ ತಾಲೂಕಿನ ಗ್ರಾಮಾಂತರ ಭಾಗದ ಅಧ್ಯಕ್ಷ ಸೋಮಶೇಖರ್ ಎಂಬವರು ಪೋಸ್ಟ್ ಹಾಕಿದ್ದಾರೆ. ಸಿದ್ದರಾಮಯ್ಯ ಕುರಿತ ಮೂಡಾ ಪ್ರಕರಣ ತೀರ್ಪು ಹೊರಬೀಳುವ ದಿನವೇ ಈ ಪೋಸ್ಟ್ ಹಾಕಿದ್ದು ರಾಜಕೀಯದಲ್ಲಿ ಗುಸು ಗುಸು ಶುರುವಾಗಿದೆ. ಕೋಟ್೯ ಪ್ರಾಸಿಕ್ಯೂಷನ್ ಅನುಮತಿ ನೀಡಿದ್ರೆ ಸಿದ್ದರಾಮಯ್ಯ ಕೆಳಗಿಳಿಯೋದು ಪಕ್ಕಾ ಎಂದು ಹೇಳಲಾಗುತ್ತಿದೆ. ಕೋರ್ಟ್ ಅನುಮತಿ ನೀಡಿದರೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕಾಗುತ್ತದೆ ಎಂದು ಚರ್ಚೆಯಾಗುತ್ತಿದ್ದು ಇದೇ ಕಾರಣಕ್ಕೆ ಪರಂ ಬೆಂಬಲಿಗರು ಪೋಸ್ಟ್ ಹಾಕಿದ್ದಾರೆ.
ರಾಜ್ಯಪಾಲರು ಪ್ರಾಸಿಕ್ಯೂಶನ್ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿದ್ದರಾಮಯ್ಯ ಬೆಂಬಲಿಗರು ಹೈಕೋರ್ಟ್ ಕದ ತಟ್ಟಿದ್ದಾರೆ. ಎರಡು ಬಾರಿ ವಿಚಾರಣೆ ಮುಂದೂಡಿಕೆಯಾಗಿ ಸೆ.9ಕ್ಕೆ ಬಂದಿತ್ತು. ಇಂದು ಸಂಜೆಯ ವೇಳೆಗೆ ತೀರ್ಪು ಹೊರಬೀಳಲಿದೆ ಎನ್ನಲಾಗುತ್ತಿದೆ. ಮುಂದಿನ ಸಿಎಂ ವಿಚಾರದಲ್ಲಿ ಹಿರಿಯ ಸಚಿವರಾದ ಸತೀಶ್ ಜಾರಕಿಹೊಳಿ, ಎಂಬಿ ಪಾಟೀಲ, ಪರಮೇಶ್ವರ್ ಹೇಳಿಕೆ ನೀಡುತ್ತಿದ್ದು ಪರಸ್ಪರ ವೈರುಧ್ಯದ ಹೇಳಿಕೆ ನೀಡಿರುವುದರಿಂದ ಸಾಕಷ್ಟು ಚರ್ಚೆಗೆ ಕಾರಣವಾಗಿದೆ.
Parameshwara to be the next cm of Karnataka poster goes viral. Supporters of Parameshwara poster goes viral Mangalore.
15-07-25 01:32 pm
Bangalore Correspondent
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 02:28 pm
HK News Desk
Mangalore Accident, Alto Car: ದೆಹಲಿಯಿಂದ ಬಂದ ಗ...
15-07-25 10:32 am
ಕಲ್ಲು ಮರಳಿನ ಸಮಸ್ಯೆಯಿಂದ ಜನರ ತಲೆಗೆ ಚಪ್ಪಡಿ ಕಲ್ಲು...
14-07-25 09:55 pm
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
15-07-25 06:07 pm
Mangalore Correspondent
ಹಿಂದು ಯುವತಿಯರನ್ನು ಮತಾಂತರ ಮಾಡುತ್ತಿದ್ದಾನೆಂದು ಸು...
15-07-25 05:21 pm
Mangalore Police, Arrest, NITTE College Stude...
15-07-25 01:13 pm
Mangalore Crime, Police: ದುಬೈನಲ್ಲಿ ವಹಿವಾಟು ;...
15-07-25 11:38 am
ಮ್ಯಾಟ್ರಿಮನಿ ಸೈಟಲ್ಲಿ ಸಿಕ್ಕ ಗೆಳತಿಯಿಂದಲೇ ಮೋಸ ; ಆ...
13-07-25 05:23 pm