ಬ್ರೇಕಿಂಗ್ ನ್ಯೂಸ್
09-09-24 04:49 pm HK News Desk ಕರ್ನಾಟಕ
ತುಮಕೂರು, ಸೆ.9: ಕಾಂಗ್ರೆಸ್ ನಲ್ಲಿ ಮುಂದಿನ ಸಿಎಂ ಯಾರು ಎನ್ನುವ ಚರ್ಚೆ ಜೋರಾಗಿದೆ. ಕೆಲವು ನಾಯಕರ ಹಿಂಬಾಲಕರು ತಮ್ಮವರೇ ಮುಂದಿನ ಸಿಎಂ ಎಂದು ಪೋಸ್ಟರ್ ಹಾಕುತ್ತಿದ್ದಾರೆ. ಪರಮೇಶ್ವರ್ ಮುಂದಿನ ಸಿಎಂ ಆಗಲಿದ್ದಾರೆ ಎಂದು ತುಮಕೂರು ಭಾಗದಲ್ಲಿ ಅವರ ಬೆಂಬಲಿಗರು ಪೋಸ್ಟರ್ ಹಾಕಲು ಆರಂಭಿಸಿದ್ದಾರೆ.
ಸಿದ್ದರಾಮಯ್ಯ ಅವರ ಮೂಡಾ ಪ್ರಕರಣದ ಬಗ್ಗೆ ಹೈಕೋರ್ಟ್ ತೀರ್ಪು ಹೊರಬರುವ ಮೊದಲೇ ಸಿಎಂ ಪೋಸ್ಟರ್ ಶುರುವಾಗಿದೆ. ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ಬೆಂಬಲಿಗರು ಈಗ ಕಾಂಗ್ರೆಸಿನ ನೂತನ ಸಿಎಂ ಪರಮೇಶ್ವರ್ ಎಂದು ಪೋಸ್ಟರ್ ಹಾಕಿದ್ದು ಭಾರೀ ವೈರಲ್ ಆಗಿದೆ.
ಮುಂದಿನ ಸಿಎಂ ಪರಮೇಶ್ವರ್ ಆಗೋದು ಖಚಿತ ಎಂದು ಗೃಹ ಸಚಿವರ ತವರು ನೆಲ ಕೊರಟಗೆರೆ ತಾಲೂಕಿನ ಗ್ರಾಮಾಂತರ ಭಾಗದ ಅಧ್ಯಕ್ಷ ಸೋಮಶೇಖರ್ ಎಂಬವರು ಪೋಸ್ಟ್ ಹಾಕಿದ್ದಾರೆ. ಸಿದ್ದರಾಮಯ್ಯ ಕುರಿತ ಮೂಡಾ ಪ್ರಕರಣ ತೀರ್ಪು ಹೊರಬೀಳುವ ದಿನವೇ ಈ ಪೋಸ್ಟ್ ಹಾಕಿದ್ದು ರಾಜಕೀಯದಲ್ಲಿ ಗುಸು ಗುಸು ಶುರುವಾಗಿದೆ. ಕೋಟ್೯ ಪ್ರಾಸಿಕ್ಯೂಷನ್ ಅನುಮತಿ ನೀಡಿದ್ರೆ ಸಿದ್ದರಾಮಯ್ಯ ಕೆಳಗಿಳಿಯೋದು ಪಕ್ಕಾ ಎಂದು ಹೇಳಲಾಗುತ್ತಿದೆ. ಕೋರ್ಟ್ ಅನುಮತಿ ನೀಡಿದರೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕಾಗುತ್ತದೆ ಎಂದು ಚರ್ಚೆಯಾಗುತ್ತಿದ್ದು ಇದೇ ಕಾರಣಕ್ಕೆ ಪರಂ ಬೆಂಬಲಿಗರು ಪೋಸ್ಟ್ ಹಾಕಿದ್ದಾರೆ.
ರಾಜ್ಯಪಾಲರು ಪ್ರಾಸಿಕ್ಯೂಶನ್ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿದ್ದರಾಮಯ್ಯ ಬೆಂಬಲಿಗರು ಹೈಕೋರ್ಟ್ ಕದ ತಟ್ಟಿದ್ದಾರೆ. ಎರಡು ಬಾರಿ ವಿಚಾರಣೆ ಮುಂದೂಡಿಕೆಯಾಗಿ ಸೆ.9ಕ್ಕೆ ಬಂದಿತ್ತು. ಇಂದು ಸಂಜೆಯ ವೇಳೆಗೆ ತೀರ್ಪು ಹೊರಬೀಳಲಿದೆ ಎನ್ನಲಾಗುತ್ತಿದೆ. ಮುಂದಿನ ಸಿಎಂ ವಿಚಾರದಲ್ಲಿ ಹಿರಿಯ ಸಚಿವರಾದ ಸತೀಶ್ ಜಾರಕಿಹೊಳಿ, ಎಂಬಿ ಪಾಟೀಲ, ಪರಮೇಶ್ವರ್ ಹೇಳಿಕೆ ನೀಡುತ್ತಿದ್ದು ಪರಸ್ಪರ ವೈರುಧ್ಯದ ಹೇಳಿಕೆ ನೀಡಿರುವುದರಿಂದ ಸಾಕಷ್ಟು ಚರ್ಚೆಗೆ ಕಾರಣವಾಗಿದೆ.
Parameshwara to be the next cm of Karnataka poster goes viral. Supporters of Parameshwara poster goes viral Mangalore.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 04:14 pm
HK News Staffer
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
ಚರಕದಿಂದ ನೂಲು ತೆಗೆದು, ಸಮುದ್ರ ಕಿನಾರೆಯಲ್ಲಿ ಉಪ್ಪು...
15-08-26 10:08 pm
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm