ಬ್ರೇಕಿಂಗ್ ನ್ಯೂಸ್
09-09-24 04:49 pm HK News Desk ಕರ್ನಾಟಕ
ತುಮಕೂರು, ಸೆ.9: ಕಾಂಗ್ರೆಸ್ ನಲ್ಲಿ ಮುಂದಿನ ಸಿಎಂ ಯಾರು ಎನ್ನುವ ಚರ್ಚೆ ಜೋರಾಗಿದೆ. ಕೆಲವು ನಾಯಕರ ಹಿಂಬಾಲಕರು ತಮ್ಮವರೇ ಮುಂದಿನ ಸಿಎಂ ಎಂದು ಪೋಸ್ಟರ್ ಹಾಕುತ್ತಿದ್ದಾರೆ. ಪರಮೇಶ್ವರ್ ಮುಂದಿನ ಸಿಎಂ ಆಗಲಿದ್ದಾರೆ ಎಂದು ತುಮಕೂರು ಭಾಗದಲ್ಲಿ ಅವರ ಬೆಂಬಲಿಗರು ಪೋಸ್ಟರ್ ಹಾಕಲು ಆರಂಭಿಸಿದ್ದಾರೆ.
ಸಿದ್ದರಾಮಯ್ಯ ಅವರ ಮೂಡಾ ಪ್ರಕರಣದ ಬಗ್ಗೆ ಹೈಕೋರ್ಟ್ ತೀರ್ಪು ಹೊರಬರುವ ಮೊದಲೇ ಸಿಎಂ ಪೋಸ್ಟರ್ ಶುರುವಾಗಿದೆ. ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ಬೆಂಬಲಿಗರು ಈಗ ಕಾಂಗ್ರೆಸಿನ ನೂತನ ಸಿಎಂ ಪರಮೇಶ್ವರ್ ಎಂದು ಪೋಸ್ಟರ್ ಹಾಕಿದ್ದು ಭಾರೀ ವೈರಲ್ ಆಗಿದೆ.
ಮುಂದಿನ ಸಿಎಂ ಪರಮೇಶ್ವರ್ ಆಗೋದು ಖಚಿತ ಎಂದು ಗೃಹ ಸಚಿವರ ತವರು ನೆಲ ಕೊರಟಗೆರೆ ತಾಲೂಕಿನ ಗ್ರಾಮಾಂತರ ಭಾಗದ ಅಧ್ಯಕ್ಷ ಸೋಮಶೇಖರ್ ಎಂಬವರು ಪೋಸ್ಟ್ ಹಾಕಿದ್ದಾರೆ. ಸಿದ್ದರಾಮಯ್ಯ ಕುರಿತ ಮೂಡಾ ಪ್ರಕರಣ ತೀರ್ಪು ಹೊರಬೀಳುವ ದಿನವೇ ಈ ಪೋಸ್ಟ್ ಹಾಕಿದ್ದು ರಾಜಕೀಯದಲ್ಲಿ ಗುಸು ಗುಸು ಶುರುವಾಗಿದೆ. ಕೋಟ್೯ ಪ್ರಾಸಿಕ್ಯೂಷನ್ ಅನುಮತಿ ನೀಡಿದ್ರೆ ಸಿದ್ದರಾಮಯ್ಯ ಕೆಳಗಿಳಿಯೋದು ಪಕ್ಕಾ ಎಂದು ಹೇಳಲಾಗುತ್ತಿದೆ. ಕೋರ್ಟ್ ಅನುಮತಿ ನೀಡಿದರೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕಾಗುತ್ತದೆ ಎಂದು ಚರ್ಚೆಯಾಗುತ್ತಿದ್ದು ಇದೇ ಕಾರಣಕ್ಕೆ ಪರಂ ಬೆಂಬಲಿಗರು ಪೋಸ್ಟ್ ಹಾಕಿದ್ದಾರೆ.
ರಾಜ್ಯಪಾಲರು ಪ್ರಾಸಿಕ್ಯೂಶನ್ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿದ್ದರಾಮಯ್ಯ ಬೆಂಬಲಿಗರು ಹೈಕೋರ್ಟ್ ಕದ ತಟ್ಟಿದ್ದಾರೆ. ಎರಡು ಬಾರಿ ವಿಚಾರಣೆ ಮುಂದೂಡಿಕೆಯಾಗಿ ಸೆ.9ಕ್ಕೆ ಬಂದಿತ್ತು. ಇಂದು ಸಂಜೆಯ ವೇಳೆಗೆ ತೀರ್ಪು ಹೊರಬೀಳಲಿದೆ ಎನ್ನಲಾಗುತ್ತಿದೆ. ಮುಂದಿನ ಸಿಎಂ ವಿಚಾರದಲ್ಲಿ ಹಿರಿಯ ಸಚಿವರಾದ ಸತೀಶ್ ಜಾರಕಿಹೊಳಿ, ಎಂಬಿ ಪಾಟೀಲ, ಪರಮೇಶ್ವರ್ ಹೇಳಿಕೆ ನೀಡುತ್ತಿದ್ದು ಪರಸ್ಪರ ವೈರುಧ್ಯದ ಹೇಳಿಕೆ ನೀಡಿರುವುದರಿಂದ ಸಾಕಷ್ಟು ಚರ್ಚೆಗೆ ಕಾರಣವಾಗಿದೆ.
Parameshwara to be the next cm of Karnataka poster goes viral. Supporters of Parameshwara poster goes viral Mangalore.
20-09-26 03:32 pm
HK News Staffer
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm