ಬ್ರೇಕಿಂಗ್ ನ್ಯೂಸ್
09-09-24 04:49 pm HK News Desk ಕರ್ನಾಟಕ
ತುಮಕೂರು, ಸೆ.9: ಕಾಂಗ್ರೆಸ್ ನಲ್ಲಿ ಮುಂದಿನ ಸಿಎಂ ಯಾರು ಎನ್ನುವ ಚರ್ಚೆ ಜೋರಾಗಿದೆ. ಕೆಲವು ನಾಯಕರ ಹಿಂಬಾಲಕರು ತಮ್ಮವರೇ ಮುಂದಿನ ಸಿಎಂ ಎಂದು ಪೋಸ್ಟರ್ ಹಾಕುತ್ತಿದ್ದಾರೆ. ಪರಮೇಶ್ವರ್ ಮುಂದಿನ ಸಿಎಂ ಆಗಲಿದ್ದಾರೆ ಎಂದು ತುಮಕೂರು ಭಾಗದಲ್ಲಿ ಅವರ ಬೆಂಬಲಿಗರು ಪೋಸ್ಟರ್ ಹಾಕಲು ಆರಂಭಿಸಿದ್ದಾರೆ.
ಸಿದ್ದರಾಮಯ್ಯ ಅವರ ಮೂಡಾ ಪ್ರಕರಣದ ಬಗ್ಗೆ ಹೈಕೋರ್ಟ್ ತೀರ್ಪು ಹೊರಬರುವ ಮೊದಲೇ ಸಿಎಂ ಪೋಸ್ಟರ್ ಶುರುವಾಗಿದೆ. ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ಬೆಂಬಲಿಗರು ಈಗ ಕಾಂಗ್ರೆಸಿನ ನೂತನ ಸಿಎಂ ಪರಮೇಶ್ವರ್ ಎಂದು ಪೋಸ್ಟರ್ ಹಾಕಿದ್ದು ಭಾರೀ ವೈರಲ್ ಆಗಿದೆ.
ಮುಂದಿನ ಸಿಎಂ ಪರಮೇಶ್ವರ್ ಆಗೋದು ಖಚಿತ ಎಂದು ಗೃಹ ಸಚಿವರ ತವರು ನೆಲ ಕೊರಟಗೆರೆ ತಾಲೂಕಿನ ಗ್ರಾಮಾಂತರ ಭಾಗದ ಅಧ್ಯಕ್ಷ ಸೋಮಶೇಖರ್ ಎಂಬವರು ಪೋಸ್ಟ್ ಹಾಕಿದ್ದಾರೆ. ಸಿದ್ದರಾಮಯ್ಯ ಕುರಿತ ಮೂಡಾ ಪ್ರಕರಣ ತೀರ್ಪು ಹೊರಬೀಳುವ ದಿನವೇ ಈ ಪೋಸ್ಟ್ ಹಾಕಿದ್ದು ರಾಜಕೀಯದಲ್ಲಿ ಗುಸು ಗುಸು ಶುರುವಾಗಿದೆ. ಕೋಟ್೯ ಪ್ರಾಸಿಕ್ಯೂಷನ್ ಅನುಮತಿ ನೀಡಿದ್ರೆ ಸಿದ್ದರಾಮಯ್ಯ ಕೆಳಗಿಳಿಯೋದು ಪಕ್ಕಾ ಎಂದು ಹೇಳಲಾಗುತ್ತಿದೆ. ಕೋರ್ಟ್ ಅನುಮತಿ ನೀಡಿದರೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕಾಗುತ್ತದೆ ಎಂದು ಚರ್ಚೆಯಾಗುತ್ತಿದ್ದು ಇದೇ ಕಾರಣಕ್ಕೆ ಪರಂ ಬೆಂಬಲಿಗರು ಪೋಸ್ಟ್ ಹಾಕಿದ್ದಾರೆ.
ರಾಜ್ಯಪಾಲರು ಪ್ರಾಸಿಕ್ಯೂಶನ್ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿದ್ದರಾಮಯ್ಯ ಬೆಂಬಲಿಗರು ಹೈಕೋರ್ಟ್ ಕದ ತಟ್ಟಿದ್ದಾರೆ. ಎರಡು ಬಾರಿ ವಿಚಾರಣೆ ಮುಂದೂಡಿಕೆಯಾಗಿ ಸೆ.9ಕ್ಕೆ ಬಂದಿತ್ತು. ಇಂದು ಸಂಜೆಯ ವೇಳೆಗೆ ತೀರ್ಪು ಹೊರಬೀಳಲಿದೆ ಎನ್ನಲಾಗುತ್ತಿದೆ. ಮುಂದಿನ ಸಿಎಂ ವಿಚಾರದಲ್ಲಿ ಹಿರಿಯ ಸಚಿವರಾದ ಸತೀಶ್ ಜಾರಕಿಹೊಳಿ, ಎಂಬಿ ಪಾಟೀಲ, ಪರಮೇಶ್ವರ್ ಹೇಳಿಕೆ ನೀಡುತ್ತಿದ್ದು ಪರಸ್ಪರ ವೈರುಧ್ಯದ ಹೇಳಿಕೆ ನೀಡಿರುವುದರಿಂದ ಸಾಕಷ್ಟು ಚರ್ಚೆಗೆ ಕಾರಣವಾಗಿದೆ.
Parameshwara to be the next cm of Karnataka poster goes viral. Supporters of Parameshwara poster goes viral Mangalore.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
10-04-26 11:05 pm
HK News Staffer
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
10-04-26 10:12 pm
Mangalore Correspondent
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
Besant Evening College, BPL Cricket: ಬೆಸೆಂಟ್...
07-04-26 01:22 pm
10-04-26 11:06 pm
HK News Staffer
Red Corner Notice, Mangalore crime: ದೇರಳಕಟ್ಟೆ...
09-04-26 09:16 pm
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm