ಬ್ರೇಕಿಂಗ್ ನ್ಯೂಸ್
09-09-24 04:49 pm HK News Desk ಕರ್ನಾಟಕ
ತುಮಕೂರು, ಸೆ.9: ಕಾಂಗ್ರೆಸ್ ನಲ್ಲಿ ಮುಂದಿನ ಸಿಎಂ ಯಾರು ಎನ್ನುವ ಚರ್ಚೆ ಜೋರಾಗಿದೆ. ಕೆಲವು ನಾಯಕರ ಹಿಂಬಾಲಕರು ತಮ್ಮವರೇ ಮುಂದಿನ ಸಿಎಂ ಎಂದು ಪೋಸ್ಟರ್ ಹಾಕುತ್ತಿದ್ದಾರೆ. ಪರಮೇಶ್ವರ್ ಮುಂದಿನ ಸಿಎಂ ಆಗಲಿದ್ದಾರೆ ಎಂದು ತುಮಕೂರು ಭಾಗದಲ್ಲಿ ಅವರ ಬೆಂಬಲಿಗರು ಪೋಸ್ಟರ್ ಹಾಕಲು ಆರಂಭಿಸಿದ್ದಾರೆ.
ಸಿದ್ದರಾಮಯ್ಯ ಅವರ ಮೂಡಾ ಪ್ರಕರಣದ ಬಗ್ಗೆ ಹೈಕೋರ್ಟ್ ತೀರ್ಪು ಹೊರಬರುವ ಮೊದಲೇ ಸಿಎಂ ಪೋಸ್ಟರ್ ಶುರುವಾಗಿದೆ. ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ಬೆಂಬಲಿಗರು ಈಗ ಕಾಂಗ್ರೆಸಿನ ನೂತನ ಸಿಎಂ ಪರಮೇಶ್ವರ್ ಎಂದು ಪೋಸ್ಟರ್ ಹಾಕಿದ್ದು ಭಾರೀ ವೈರಲ್ ಆಗಿದೆ.
ಮುಂದಿನ ಸಿಎಂ ಪರಮೇಶ್ವರ್ ಆಗೋದು ಖಚಿತ ಎಂದು ಗೃಹ ಸಚಿವರ ತವರು ನೆಲ ಕೊರಟಗೆರೆ ತಾಲೂಕಿನ ಗ್ರಾಮಾಂತರ ಭಾಗದ ಅಧ್ಯಕ್ಷ ಸೋಮಶೇಖರ್ ಎಂಬವರು ಪೋಸ್ಟ್ ಹಾಕಿದ್ದಾರೆ. ಸಿದ್ದರಾಮಯ್ಯ ಕುರಿತ ಮೂಡಾ ಪ್ರಕರಣ ತೀರ್ಪು ಹೊರಬೀಳುವ ದಿನವೇ ಈ ಪೋಸ್ಟ್ ಹಾಕಿದ್ದು ರಾಜಕೀಯದಲ್ಲಿ ಗುಸು ಗುಸು ಶುರುವಾಗಿದೆ. ಕೋಟ್೯ ಪ್ರಾಸಿಕ್ಯೂಷನ್ ಅನುಮತಿ ನೀಡಿದ್ರೆ ಸಿದ್ದರಾಮಯ್ಯ ಕೆಳಗಿಳಿಯೋದು ಪಕ್ಕಾ ಎಂದು ಹೇಳಲಾಗುತ್ತಿದೆ. ಕೋರ್ಟ್ ಅನುಮತಿ ನೀಡಿದರೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕಾಗುತ್ತದೆ ಎಂದು ಚರ್ಚೆಯಾಗುತ್ತಿದ್ದು ಇದೇ ಕಾರಣಕ್ಕೆ ಪರಂ ಬೆಂಬಲಿಗರು ಪೋಸ್ಟ್ ಹಾಕಿದ್ದಾರೆ.
ರಾಜ್ಯಪಾಲರು ಪ್ರಾಸಿಕ್ಯೂಶನ್ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿದ್ದರಾಮಯ್ಯ ಬೆಂಬಲಿಗರು ಹೈಕೋರ್ಟ್ ಕದ ತಟ್ಟಿದ್ದಾರೆ. ಎರಡು ಬಾರಿ ವಿಚಾರಣೆ ಮುಂದೂಡಿಕೆಯಾಗಿ ಸೆ.9ಕ್ಕೆ ಬಂದಿತ್ತು. ಇಂದು ಸಂಜೆಯ ವೇಳೆಗೆ ತೀರ್ಪು ಹೊರಬೀಳಲಿದೆ ಎನ್ನಲಾಗುತ್ತಿದೆ. ಮುಂದಿನ ಸಿಎಂ ವಿಚಾರದಲ್ಲಿ ಹಿರಿಯ ಸಚಿವರಾದ ಸತೀಶ್ ಜಾರಕಿಹೊಳಿ, ಎಂಬಿ ಪಾಟೀಲ, ಪರಮೇಶ್ವರ್ ಹೇಳಿಕೆ ನೀಡುತ್ತಿದ್ದು ಪರಸ್ಪರ ವೈರುಧ್ಯದ ಹೇಳಿಕೆ ನೀಡಿರುವುದರಿಂದ ಸಾಕಷ್ಟು ಚರ್ಚೆಗೆ ಕಾರಣವಾಗಿದೆ.
Parameshwara to be the next cm of Karnataka poster goes viral. Supporters of Parameshwara poster goes viral Mangalore.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
23-07-26 01:51 pm
HK News Staffer
CJP ಪ್ರತಿಭಟನೆಯಲ್ಲಿ ಪೊಲೀಸ್ ದೌರ್ಜನ್ಯ; ತುರ್ತು ವ...
22-07-26 02:32 pm
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am