ಬ್ರೇಕಿಂಗ್ ನ್ಯೂಸ್
09-09-24 04:49 pm HK News Desk ಕರ್ನಾಟಕ
ತುಮಕೂರು, ಸೆ.9: ಕಾಂಗ್ರೆಸ್ ನಲ್ಲಿ ಮುಂದಿನ ಸಿಎಂ ಯಾರು ಎನ್ನುವ ಚರ್ಚೆ ಜೋರಾಗಿದೆ. ಕೆಲವು ನಾಯಕರ ಹಿಂಬಾಲಕರು ತಮ್ಮವರೇ ಮುಂದಿನ ಸಿಎಂ ಎಂದು ಪೋಸ್ಟರ್ ಹಾಕುತ್ತಿದ್ದಾರೆ. ಪರಮೇಶ್ವರ್ ಮುಂದಿನ ಸಿಎಂ ಆಗಲಿದ್ದಾರೆ ಎಂದು ತುಮಕೂರು ಭಾಗದಲ್ಲಿ ಅವರ ಬೆಂಬಲಿಗರು ಪೋಸ್ಟರ್ ಹಾಕಲು ಆರಂಭಿಸಿದ್ದಾರೆ.
ಸಿದ್ದರಾಮಯ್ಯ ಅವರ ಮೂಡಾ ಪ್ರಕರಣದ ಬಗ್ಗೆ ಹೈಕೋರ್ಟ್ ತೀರ್ಪು ಹೊರಬರುವ ಮೊದಲೇ ಸಿಎಂ ಪೋಸ್ಟರ್ ಶುರುವಾಗಿದೆ. ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ಬೆಂಬಲಿಗರು ಈಗ ಕಾಂಗ್ರೆಸಿನ ನೂತನ ಸಿಎಂ ಪರಮೇಶ್ವರ್ ಎಂದು ಪೋಸ್ಟರ್ ಹಾಕಿದ್ದು ಭಾರೀ ವೈರಲ್ ಆಗಿದೆ.
ಮುಂದಿನ ಸಿಎಂ ಪರಮೇಶ್ವರ್ ಆಗೋದು ಖಚಿತ ಎಂದು ಗೃಹ ಸಚಿವರ ತವರು ನೆಲ ಕೊರಟಗೆರೆ ತಾಲೂಕಿನ ಗ್ರಾಮಾಂತರ ಭಾಗದ ಅಧ್ಯಕ್ಷ ಸೋಮಶೇಖರ್ ಎಂಬವರು ಪೋಸ್ಟ್ ಹಾಕಿದ್ದಾರೆ. ಸಿದ್ದರಾಮಯ್ಯ ಕುರಿತ ಮೂಡಾ ಪ್ರಕರಣ ತೀರ್ಪು ಹೊರಬೀಳುವ ದಿನವೇ ಈ ಪೋಸ್ಟ್ ಹಾಕಿದ್ದು ರಾಜಕೀಯದಲ್ಲಿ ಗುಸು ಗುಸು ಶುರುವಾಗಿದೆ. ಕೋಟ್೯ ಪ್ರಾಸಿಕ್ಯೂಷನ್ ಅನುಮತಿ ನೀಡಿದ್ರೆ ಸಿದ್ದರಾಮಯ್ಯ ಕೆಳಗಿಳಿಯೋದು ಪಕ್ಕಾ ಎಂದು ಹೇಳಲಾಗುತ್ತಿದೆ. ಕೋರ್ಟ್ ಅನುಮತಿ ನೀಡಿದರೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕಾಗುತ್ತದೆ ಎಂದು ಚರ್ಚೆಯಾಗುತ್ತಿದ್ದು ಇದೇ ಕಾರಣಕ್ಕೆ ಪರಂ ಬೆಂಬಲಿಗರು ಪೋಸ್ಟ್ ಹಾಕಿದ್ದಾರೆ.
ರಾಜ್ಯಪಾಲರು ಪ್ರಾಸಿಕ್ಯೂಶನ್ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿದ್ದರಾಮಯ್ಯ ಬೆಂಬಲಿಗರು ಹೈಕೋರ್ಟ್ ಕದ ತಟ್ಟಿದ್ದಾರೆ. ಎರಡು ಬಾರಿ ವಿಚಾರಣೆ ಮುಂದೂಡಿಕೆಯಾಗಿ ಸೆ.9ಕ್ಕೆ ಬಂದಿತ್ತು. ಇಂದು ಸಂಜೆಯ ವೇಳೆಗೆ ತೀರ್ಪು ಹೊರಬೀಳಲಿದೆ ಎನ್ನಲಾಗುತ್ತಿದೆ. ಮುಂದಿನ ಸಿಎಂ ವಿಚಾರದಲ್ಲಿ ಹಿರಿಯ ಸಚಿವರಾದ ಸತೀಶ್ ಜಾರಕಿಹೊಳಿ, ಎಂಬಿ ಪಾಟೀಲ, ಪರಮೇಶ್ವರ್ ಹೇಳಿಕೆ ನೀಡುತ್ತಿದ್ದು ಪರಸ್ಪರ ವೈರುಧ್ಯದ ಹೇಳಿಕೆ ನೀಡಿರುವುದರಿಂದ ಸಾಕಷ್ಟು ಚರ್ಚೆಗೆ ಕಾರಣವಾಗಿದೆ.
Parameshwara to be the next cm of Karnataka poster goes viral. Supporters of Parameshwara poster goes viral Mangalore.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 10:50 pm
Mangalore Correspondent
Yenepoya Hospital, Mangalore: ಯೆನಪೋಯ ಆಸ್ಪತ್ರೆ...
10-09-25 08:46 pm
ಕೊಲ್ಲೂರು ಮೂಕಾಂಬಿಕೆಗೆ ನಾಲ್ಕು ಕೋಟಿ ಮೌಲ್ಯದ ವಜ್ರ...
10-09-25 08:14 pm
Mangalore, Baikampady Fire, Aromazen: ಬೈಕಂಪಾಡ...
10-09-25 02:10 pm
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm