ಬ್ರೇಕಿಂಗ್ ನ್ಯೂಸ್
10-09-24 12:52 pm Bangalore Correspondent ಕರ್ನಾಟಕ
ಬೆಂಗಳೂರು, ಸೆ 10: ಕನ್ನಡ ಚಿತ್ರರಂಗದಲ್ಲಿ ಒಂದಾದ ಮೇಲೊಂದು ಅವಘಡಗಳು ನಡೆಯುತ್ತಲೇ ಇದೆ. ಸಾಮಾನ್ಯ ಜನರಿಗೆ ಮಾದರಿಯಾಗಬೇಕಿದ್ದ ನಟರು ಹಾಗೂ ಅವರ ಆಪ್ತರು ಈಗೀಗ ತಾವೇ ನೂರಾರು ವಿವಾದದಲ್ಲಿ ಸಿಲುಕಿ ಪೊಲೀಸ್ ಠಾಣೆಯ ಮೆಟ್ಟಿಲೇರುತ್ತಿದ್ದಾರೆ. ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲು ಸೇರಿ ಮೂರು ತಿಂಗಳು ಕಳೆಯುತ್ತಿದೆ. ಇದೀಗ ಮತ್ತೊಬ್ಬ ಜನಪ್ರಿಯ ನಟನ ಆಪ್ತನ ಬಂಧನವಾಗಿದೆ.
ಕಳೆದ ಮೇ 26ರ ರಾತ್ರಿ ಜಿಮ್ ಟ್ರೈನರ್ ಪ್ರಶಾಂತ್ ಪೂಜಾರಿ ಎಂಬಾತನ ಮೇಲೆ ಹಲ್ಲೆ ನಡೆದಿತ್ತು. ಈ ಪ್ರಕರಣ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದು, ಒಬ್ಬೊರಿಗೊಬ್ಬರು ಚೈನ್ ಲಿಂಕ್ ಎನ್ನುವಂತೆ ಇದೀಗ ಹಲ್ಲೆ ಪ್ರಕರಣದಲ್ಲಿ ಧ್ರುವ ಸರ್ಜಾ ಮ್ಯಾನೇಜರ್ ಅಶ್ವಿನ್ ಬಂಧನವಾಗಿದೆ.
ಜಿಮ್ ಟ್ರೈನರ್ ಪ್ರಶಾಂತ್ ಪೂಜಾರಿ ಮೇಲೆ ಹರ್ಷ ಮತ್ತು ಸುಭಾಷ್ ಎನ್ನುವವರು ಹಲ್ಲೆ ಮಾಡಿದ್ದರು. ವೈಯಕ್ತಿಕ ಕಾರಣದಿಂದ ನಾಗೇಂದ್ರ ಎನ್ನುವಾತ ಹರ್ಷ ಮತ್ತು ಸುಭಾಷ್ ಮೂಲಕ ಪ್ರಶಾಂತ್ ಪೂಜಾರಿ ಮೇಲೆ ಹಲ್ಲೆ ಮಾಡಿಸಿದ್ದ ಎನ್ನಲಾಗಿದೆ. ಈ ನಾಗೇಂದ್ರ ಎನ್ನುವಾತ ಕೆಲವು ದಿನಗಳ ಹಿಂದೆ ಧ್ರುವ ಸರ್ಜಾ ಬಳಿ ಕೆಲಸ ಮಾಡಿಕೊಂಡಿದ್ದ. ಧ್ರುವ ಸರ್ಜಾ ಕಾರು ಚಾಲಕನಾಗಿ ಕೂಡ ಕೆಲಸ ಮಾಡಿದ್ದ ಎನ್ನುವ ಮಾಹಿತಿ ಇದೆ.
ಈತ ಜಿಮ್ ಟ್ರೈನರ್ ಪ್ರಶಾಂತ್ ಪೂಜಾರಿ ಮೇಲೆ ಹಲ್ಲೆ ಮಾಡಿಸಿದ್ದು, ಈತನ ಕೃತ್ಯಕ್ಕೆ ಧ್ರುವ ಸರ್ಜಾ ಮ್ಯಾನೇಜರ್ ಅಶ್ವಿನ್ ಬೆಂಬಲ ಕೊಟ್ಟಿರುವ ಆರೋಪ ಕೇಳಿ ಬಂದಿದೆ. ಇನ್ನು ಪ್ರಶಾಂತ್ ಪೂಜಾರಿ ತನ್ನ ಜಿಮ್ನಲ್ಲಿ ನಟ ಧ್ರುವ ಸರ್ಜಾಗೆ ಕೂಡ ತರಬೇತಿ ನೀಡುತ್ತಿದ್ದರು. ಈ ವೇಳೆ ಇಬ್ಬರ ನಡುವಿನ ಆಪ್ತತೆಯನ್ನು ಕಂಡ ನಾಗೇಂದ್ರ ಹಾಗೂ ಅಶ್ವಿನ್ಗೆ ಸಹಿಸಿಕೊಳ್ಳಲು ಆಗದೇ ಈ ರೀತಿ ಹಲ್ಲೆ ಮಾಡಿಸಿದ್ದಾರೆ ಎನ್ನಲಾಗಿದೆ. ಸದ್ಯ ಅಶ್ವಿನ್ ಬಂಧನವಾಗಿದ್ದು, ವಿಚಾರಣೆ ಮುಂದುವರಿದಿದೆ.
The Banashankari police in southern Bengaluru have arrested four people, including the manager of Kannada actor Dhruv Sarja, for attacking the latter’s gym trainer in May, police officials said.
20-09-26 03:32 pm
HK News Staffer
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm