ಬ್ರೇಕಿಂಗ್ ನ್ಯೂಸ್
10-09-24 12:52 pm Bangalore Correspondent ಕರ್ನಾಟಕ
ಬೆಂಗಳೂರು, ಸೆ 10: ಕನ್ನಡ ಚಿತ್ರರಂಗದಲ್ಲಿ ಒಂದಾದ ಮೇಲೊಂದು ಅವಘಡಗಳು ನಡೆಯುತ್ತಲೇ ಇದೆ. ಸಾಮಾನ್ಯ ಜನರಿಗೆ ಮಾದರಿಯಾಗಬೇಕಿದ್ದ ನಟರು ಹಾಗೂ ಅವರ ಆಪ್ತರು ಈಗೀಗ ತಾವೇ ನೂರಾರು ವಿವಾದದಲ್ಲಿ ಸಿಲುಕಿ ಪೊಲೀಸ್ ಠಾಣೆಯ ಮೆಟ್ಟಿಲೇರುತ್ತಿದ್ದಾರೆ. ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲು ಸೇರಿ ಮೂರು ತಿಂಗಳು ಕಳೆಯುತ್ತಿದೆ. ಇದೀಗ ಮತ್ತೊಬ್ಬ ಜನಪ್ರಿಯ ನಟನ ಆಪ್ತನ ಬಂಧನವಾಗಿದೆ.
ಕಳೆದ ಮೇ 26ರ ರಾತ್ರಿ ಜಿಮ್ ಟ್ರೈನರ್ ಪ್ರಶಾಂತ್ ಪೂಜಾರಿ ಎಂಬಾತನ ಮೇಲೆ ಹಲ್ಲೆ ನಡೆದಿತ್ತು. ಈ ಪ್ರಕರಣ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದು, ಒಬ್ಬೊರಿಗೊಬ್ಬರು ಚೈನ್ ಲಿಂಕ್ ಎನ್ನುವಂತೆ ಇದೀಗ ಹಲ್ಲೆ ಪ್ರಕರಣದಲ್ಲಿ ಧ್ರುವ ಸರ್ಜಾ ಮ್ಯಾನೇಜರ್ ಅಶ್ವಿನ್ ಬಂಧನವಾಗಿದೆ.
ಜಿಮ್ ಟ್ರೈನರ್ ಪ್ರಶಾಂತ್ ಪೂಜಾರಿ ಮೇಲೆ ಹರ್ಷ ಮತ್ತು ಸುಭಾಷ್ ಎನ್ನುವವರು ಹಲ್ಲೆ ಮಾಡಿದ್ದರು. ವೈಯಕ್ತಿಕ ಕಾರಣದಿಂದ ನಾಗೇಂದ್ರ ಎನ್ನುವಾತ ಹರ್ಷ ಮತ್ತು ಸುಭಾಷ್ ಮೂಲಕ ಪ್ರಶಾಂತ್ ಪೂಜಾರಿ ಮೇಲೆ ಹಲ್ಲೆ ಮಾಡಿಸಿದ್ದ ಎನ್ನಲಾಗಿದೆ. ಈ ನಾಗೇಂದ್ರ ಎನ್ನುವಾತ ಕೆಲವು ದಿನಗಳ ಹಿಂದೆ ಧ್ರುವ ಸರ್ಜಾ ಬಳಿ ಕೆಲಸ ಮಾಡಿಕೊಂಡಿದ್ದ. ಧ್ರುವ ಸರ್ಜಾ ಕಾರು ಚಾಲಕನಾಗಿ ಕೂಡ ಕೆಲಸ ಮಾಡಿದ್ದ ಎನ್ನುವ ಮಾಹಿತಿ ಇದೆ.
ಈತ ಜಿಮ್ ಟ್ರೈನರ್ ಪ್ರಶಾಂತ್ ಪೂಜಾರಿ ಮೇಲೆ ಹಲ್ಲೆ ಮಾಡಿಸಿದ್ದು, ಈತನ ಕೃತ್ಯಕ್ಕೆ ಧ್ರುವ ಸರ್ಜಾ ಮ್ಯಾನೇಜರ್ ಅಶ್ವಿನ್ ಬೆಂಬಲ ಕೊಟ್ಟಿರುವ ಆರೋಪ ಕೇಳಿ ಬಂದಿದೆ. ಇನ್ನು ಪ್ರಶಾಂತ್ ಪೂಜಾರಿ ತನ್ನ ಜಿಮ್ನಲ್ಲಿ ನಟ ಧ್ರುವ ಸರ್ಜಾಗೆ ಕೂಡ ತರಬೇತಿ ನೀಡುತ್ತಿದ್ದರು. ಈ ವೇಳೆ ಇಬ್ಬರ ನಡುವಿನ ಆಪ್ತತೆಯನ್ನು ಕಂಡ ನಾಗೇಂದ್ರ ಹಾಗೂ ಅಶ್ವಿನ್ಗೆ ಸಹಿಸಿಕೊಳ್ಳಲು ಆಗದೇ ಈ ರೀತಿ ಹಲ್ಲೆ ಮಾಡಿಸಿದ್ದಾರೆ ಎನ್ನಲಾಗಿದೆ. ಸದ್ಯ ಅಶ್ವಿನ್ ಬಂಧನವಾಗಿದ್ದು, ವಿಚಾರಣೆ ಮುಂದುವರಿದಿದೆ.
The Banashankari police in southern Bengaluru have arrested four people, including the manager of Kannada actor Dhruv Sarja, for attacking the latter’s gym trainer in May, police officials said.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
23-07-26 01:51 pm
HK News Staffer
CJP ಪ್ರತಿಭಟನೆಯಲ್ಲಿ ಪೊಲೀಸ್ ದೌರ್ಜನ್ಯ; ತುರ್ತು ವ...
22-07-26 02:32 pm
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am