ಬ್ರೇಕಿಂಗ್ ನ್ಯೂಸ್
10-09-24 05:35 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.10: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಿತ್ರನಟ ದರ್ಶನ್ ಸೇರಿದಂತೆ ಆರೋಪಿಗಳ ವಿರುದ್ಧ ಪೊಲೀಸರು ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಚಾರ್ಜ್ ಶೀಟ್ ನಲ್ಲಿ ದರ್ಶನ್ ಮತ್ತು ಪವಿತ್ರಾ ಗೌಡ ಸಂಬಂಧ ಸೇರಿದಂತೆ ವಿವಿಧ ಮಾಹಿತಿಗಳಿದ್ದು, ಇದನ್ನು ಮಾಧ್ಯಮಗಳಲ್ಲಿ ಪ್ರಸಾರ ಮಾಡದಂತೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ವಿಧಿಸಿದೆ.
ಚಾರ್ಜ್ ಶೀಟ್ ಕುರಿತ ಮಾಹಿತಿಗಳನ್ನು ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ತಡೆ ಹೇರಬೇಕೆಂದು ದರ್ಶನ್ ಹೈಕೋರ್ಟ್ ಜಸ್ಟಿಸ್ ಹೇಮಂತ್ ಚಂದನಗೌಡರ್ ಅವರಿದ್ದ ಏಕಸದಸ್ಯ ಪೀಠದ ಮುಂದೆ ಕೇಳಿಕೊಂಡಿದ್ದರು. ದರ್ಶನ್ ಪರ ವಕೀಲರು ಕೋರ್ಟ್ ಮುಂದೆ ವಾದ ಮಂಡಿಸಿದ್ದು, ಈಗಾಗಲೇ ಆಗಸ್ಟ್ 27ರಂದು ದರ್ಶನ್ ಪತ್ನಿ ಅವಹೇಳನಕಾರಿ ಸುದ್ದಿ ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ತಡೆ ಹೇರುವಂತೆ ಅಹವಾಲು ಮಂಡಿಸಿದ್ದಾರೆ. ಈಗ ಚಾರ್ಜ್ ಶೀಟ್ ನಲ್ಲಿರುವ ಮಹತ್ವದ ಮಾಹಿತಿಗಳನ್ನು ಪ್ರಸಾರ ಮಾಡದಂತೆ ತಡೆ ಹೇರಬೇಕೆಂದು ಕೇಳಿಕೊಂಡಿದ್ದಾರೆ.
ಅದರಂತೆ, ನ್ಯಾಯಾಧೀಶರು ಮಧ್ಯಂತರ ತಡೆ ಹೇರಿದ್ದು, ದರ್ಶನ್ ಕುರಿತಾಗಿ ಚಾರ್ಜ್ ಶೀಟ್ ನಲ್ಲಿರುವ ಮಾಹಿತಿಗಳನ್ನು ಪ್ರಸಾರ, ಮುದ್ರಣ ಮಾಡುವಂತಿಲ್ಲ. ಮುಂದಿನ ವಿಚಾರಣೆ ದಿನಾಂಕದ ವರೆಗೆ ತಡೆ ಹೇರಲಾಗುವುದು ಎಂದು ಹೇಳಿದ್ದಾರೆ. ರೇಣುಕಾ ಕೊಲೆ ಪ್ರಕರಣ ಸಂಬಂಧಿಸಿ ಬೆಂಗಳೂರು ಪೊಲೀಸರು ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದು, ದರ್ಶನ್ – ಪವಿತ್ರಾ ಸಂಬಂಧ, ರೇಣುಕಾ ಯಾವ ರೀತಿ ಪ್ರಪೋಸ್ ಮಾಡಿದ್ದ, ಏನೆಲ್ಲಾ ಅಶ್ಲೀಲ ಮೆಸೇಜ್ ಗಳನ್ನು ಕಳುಹಿಸಿದ್ದ ಎಂಬೆಲ್ಲ ವಿಚಾರಗಳಿವೆ. ಇವನ್ನು ಟಿವಿ, ಪತ್ರಿಕೆಯಲ್ಲಿ ಪ್ರಸಾರ ಮಾಡುತ್ತಿರುವುದರಿಂದ ದರ್ಶನ್ ಘನತೆಗೆ ಕುಂದು ಬಂದಿದ್ದು, ಇದಕ್ಕಾಗಿ ಚಾರ್ಜ್ ಶೀಟ್ ಮಾಹಿತಿಗಳನ್ನು ಪ್ರಸಾರ ಮಾಡಬಾರದೆಂದು ಆತನ ಪರ ವಕೀಲರು ಕೇಳಿಕೊಂಡಿದ್ದರು.
The Karnataka High Court on Tuesday by way of an ex-parte interim order restrained the media from broadcasting, printing or publishing any details from the chargesheet filed by the police against Kannada actor Darshan Thoogudeepa who is an accused in a murder case, till next date of hearing.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
23-07-26 01:51 pm
HK News Staffer
CJP ಪ್ರತಿಭಟನೆಯಲ್ಲಿ ಪೊಲೀಸ್ ದೌರ್ಜನ್ಯ; ತುರ್ತು ವ...
22-07-26 02:32 pm
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am