ಬ್ರೇಕಿಂಗ್ ನ್ಯೂಸ್
10-09-24 05:35 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.10: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಿತ್ರನಟ ದರ್ಶನ್ ಸೇರಿದಂತೆ ಆರೋಪಿಗಳ ವಿರುದ್ಧ ಪೊಲೀಸರು ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಚಾರ್ಜ್ ಶೀಟ್ ನಲ್ಲಿ ದರ್ಶನ್ ಮತ್ತು ಪವಿತ್ರಾ ಗೌಡ ಸಂಬಂಧ ಸೇರಿದಂತೆ ವಿವಿಧ ಮಾಹಿತಿಗಳಿದ್ದು, ಇದನ್ನು ಮಾಧ್ಯಮಗಳಲ್ಲಿ ಪ್ರಸಾರ ಮಾಡದಂತೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ವಿಧಿಸಿದೆ.
ಚಾರ್ಜ್ ಶೀಟ್ ಕುರಿತ ಮಾಹಿತಿಗಳನ್ನು ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ತಡೆ ಹೇರಬೇಕೆಂದು ದರ್ಶನ್ ಹೈಕೋರ್ಟ್ ಜಸ್ಟಿಸ್ ಹೇಮಂತ್ ಚಂದನಗೌಡರ್ ಅವರಿದ್ದ ಏಕಸದಸ್ಯ ಪೀಠದ ಮುಂದೆ ಕೇಳಿಕೊಂಡಿದ್ದರು. ದರ್ಶನ್ ಪರ ವಕೀಲರು ಕೋರ್ಟ್ ಮುಂದೆ ವಾದ ಮಂಡಿಸಿದ್ದು, ಈಗಾಗಲೇ ಆಗಸ್ಟ್ 27ರಂದು ದರ್ಶನ್ ಪತ್ನಿ ಅವಹೇಳನಕಾರಿ ಸುದ್ದಿ ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ತಡೆ ಹೇರುವಂತೆ ಅಹವಾಲು ಮಂಡಿಸಿದ್ದಾರೆ. ಈಗ ಚಾರ್ಜ್ ಶೀಟ್ ನಲ್ಲಿರುವ ಮಹತ್ವದ ಮಾಹಿತಿಗಳನ್ನು ಪ್ರಸಾರ ಮಾಡದಂತೆ ತಡೆ ಹೇರಬೇಕೆಂದು ಕೇಳಿಕೊಂಡಿದ್ದಾರೆ.
ಅದರಂತೆ, ನ್ಯಾಯಾಧೀಶರು ಮಧ್ಯಂತರ ತಡೆ ಹೇರಿದ್ದು, ದರ್ಶನ್ ಕುರಿತಾಗಿ ಚಾರ್ಜ್ ಶೀಟ್ ನಲ್ಲಿರುವ ಮಾಹಿತಿಗಳನ್ನು ಪ್ರಸಾರ, ಮುದ್ರಣ ಮಾಡುವಂತಿಲ್ಲ. ಮುಂದಿನ ವಿಚಾರಣೆ ದಿನಾಂಕದ ವರೆಗೆ ತಡೆ ಹೇರಲಾಗುವುದು ಎಂದು ಹೇಳಿದ್ದಾರೆ. ರೇಣುಕಾ ಕೊಲೆ ಪ್ರಕರಣ ಸಂಬಂಧಿಸಿ ಬೆಂಗಳೂರು ಪೊಲೀಸರು ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದು, ದರ್ಶನ್ – ಪವಿತ್ರಾ ಸಂಬಂಧ, ರೇಣುಕಾ ಯಾವ ರೀತಿ ಪ್ರಪೋಸ್ ಮಾಡಿದ್ದ, ಏನೆಲ್ಲಾ ಅಶ್ಲೀಲ ಮೆಸೇಜ್ ಗಳನ್ನು ಕಳುಹಿಸಿದ್ದ ಎಂಬೆಲ್ಲ ವಿಚಾರಗಳಿವೆ. ಇವನ್ನು ಟಿವಿ, ಪತ್ರಿಕೆಯಲ್ಲಿ ಪ್ರಸಾರ ಮಾಡುತ್ತಿರುವುದರಿಂದ ದರ್ಶನ್ ಘನತೆಗೆ ಕುಂದು ಬಂದಿದ್ದು, ಇದಕ್ಕಾಗಿ ಚಾರ್ಜ್ ಶೀಟ್ ಮಾಹಿತಿಗಳನ್ನು ಪ್ರಸಾರ ಮಾಡಬಾರದೆಂದು ಆತನ ಪರ ವಕೀಲರು ಕೇಳಿಕೊಂಡಿದ್ದರು.
The Karnataka High Court on Tuesday by way of an ex-parte interim order restrained the media from broadcasting, printing or publishing any details from the chargesheet filed by the police against Kannada actor Darshan Thoogudeepa who is an accused in a murder case, till next date of hearing.
20-09-26 03:32 pm
HK News Staffer
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm