ಬ್ರೇಕಿಂಗ್ ನ್ಯೂಸ್
11-09-24 12:18 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.11: ಬೆಂಗಳೂರು ವಿಶ್ವವಿದ್ಯಾನಿಲಯವು ತನ್ನ 59ನೇ ಘಟಿಕೋತ್ಸವದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಮತ್ತು ಸಮಾಜ ಸೇವಕ ಕೆ.ಎಸ್ ರಾಜಣ್ಣ ಅವರಿಗೆ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.
ಚಲನಚಿತ್ರ ಸಂಗೀತ ಕ್ಷೇತ್ರದಲ್ಲಿ ಅದ್ವಿತೀಯ ಸಾಧನೆಯನ್ನು ಗುರುತಿಸಿ ಕರಾವಳಿ ಮೂಲದ ಹೆಸರಾಂತ ಸಂಗೀತ ನಿರ್ದೇಶಕ ಗುರುಕಿರಣ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿದರೆ, ವಿಶೇಷ ಚೇತನರಾಗಿದ್ದರೂ ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿರುವ ರಾಜಣ್ಣ ಅವರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಯಿತು. ಗೌರವ ಡಾಕ್ಟರೇಟ್ ಸ್ವೀಕಾರ ಸಂದರ್ಭದಲ್ಲಿ ಗುರುಕಿರಣ್ ಕುಟುಂಬಸ್ಥರು ಸೇರಿದಂತೆ ಅಶ್ವಿನಿ ಪುನೀತ್ ರಾಜ್ಕುಮಾರ್, ಪ್ರಿಯಾಂಕಾ ಉಪೇಂದ್ರ ಉಪಸ್ಥಿತರಿದ್ದರು.
ಘಟಿಕೋತ್ಸವದಲ್ಲಿ ಒಟ್ಟು 308 ಚಿನ್ನದ ಪದಕಗಳನ್ನು ವಿದ್ಯಾರ್ಥಿಗಳು ಮುಡಿಗೇರಿಸಿದ್ದು, 79 ನಗದು ಬಹುಮಾನವನ್ನು ಸ್ವೀಕರಿಸಿದ್ದಾರೆ. 140 ವಿದ್ಯಾರ್ಥಿಗಳು ಪಿಹೆಚ್ಡಿ ಪದವಿ ಸ್ವೀಕರಿಸಿದರು. ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದು, ಸ್ನಾತಕೋತ್ತರ ಪದವಿ ವಿಭಾಗದಲ್ಲಿ ಎಸ್.ಅನ್ನಪೂರ್ಣ 9 ಚಿನ್ನದ ಪದಕ ಮತ್ತು ಸ್ನಾತಕ ಪದವಿ ವಿಭಾಗದಲ್ಲಿ ಅನುರಾಧ 9 ಚಿನ್ನದ ಪದಕ ಸ್ವೀಕರಿಸಿ ಅತಿ ಹೆಚ್ಚು ಚಿನ್ನದ ಪದಕ ಪಡೆದ ಪಟ್ಟಿಗೆ ಸೇರಿದ್ದಾರೆ.
ಘಟಿಕೋತ್ಸವಕ್ಕೆ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಗೈರಾದ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಸಚಿವರು ಮತ್ತು ಸಹ ಕುಲಾಧಿಪತಿ ಡಾ.ಎಂ.ಸಿ.ಸುಧಾಕರ್ ಅಧ್ಯಕ್ಷತೆ ವಹಿಸಿದ್ದರು. ವಿಶ್ವವಿದ್ಯಾಲಯಗಳ ಧನಸಹಾಯ ಆಯೋಗದ ಉಪಾಧ್ಯಕ್ಷ ಪ್ರೊ.ದೀಪಕ್ ಕುಮಾರ್ ಶ್ರೀವಾಸ್ತವ ಮುಖ್ಯ ಅತಿಥಿಯಾಗಿ ಘಟಿಕೋತ್ಸವದ ಭಾಷಣ ಮಾಡಿದರು. ಕುಲಪತಿ ಡಾ.ಎಸ್.ಎಂ ಜಯಕರ, ಕುಲಸಚಿವ ಕೆ.ಎ.ಎಸ್ ಶೇಕ್ ಲತೀಫ್, ಪರೀಕ್ಷಾಂಗ ಕುಲಸಚಿವ ಸಿ.ಶ್ರೀನಿವಾಸ್ ಉಪಸ್ಥಿತರಿದ್ದರು.
In its 59th convocation, renowned music director Gurukiran and social worker KS Rajanna have been conferred honorary doctorate degrees by Bengaluru University.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
10-04-26 11:05 pm
HK News Staffer
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
10-04-26 10:12 pm
Mangalore Correspondent
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
Besant Evening College, BPL Cricket: ಬೆಸೆಂಟ್...
07-04-26 01:22 pm
10-04-26 11:06 pm
HK News Staffer
Red Corner Notice, Mangalore crime: ದೇರಳಕಟ್ಟೆ...
09-04-26 09:16 pm
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm