ಬ್ರೇಕಿಂಗ್ ನ್ಯೂಸ್
11-09-24 12:18 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.11: ಬೆಂಗಳೂರು ವಿಶ್ವವಿದ್ಯಾನಿಲಯವು ತನ್ನ 59ನೇ ಘಟಿಕೋತ್ಸವದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಮತ್ತು ಸಮಾಜ ಸೇವಕ ಕೆ.ಎಸ್ ರಾಜಣ್ಣ ಅವರಿಗೆ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.
ಚಲನಚಿತ್ರ ಸಂಗೀತ ಕ್ಷೇತ್ರದಲ್ಲಿ ಅದ್ವಿತೀಯ ಸಾಧನೆಯನ್ನು ಗುರುತಿಸಿ ಕರಾವಳಿ ಮೂಲದ ಹೆಸರಾಂತ ಸಂಗೀತ ನಿರ್ದೇಶಕ ಗುರುಕಿರಣ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿದರೆ, ವಿಶೇಷ ಚೇತನರಾಗಿದ್ದರೂ ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿರುವ ರಾಜಣ್ಣ ಅವರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಯಿತು. ಗೌರವ ಡಾಕ್ಟರೇಟ್ ಸ್ವೀಕಾರ ಸಂದರ್ಭದಲ್ಲಿ ಗುರುಕಿರಣ್ ಕುಟುಂಬಸ್ಥರು ಸೇರಿದಂತೆ ಅಶ್ವಿನಿ ಪುನೀತ್ ರಾಜ್ಕುಮಾರ್, ಪ್ರಿಯಾಂಕಾ ಉಪೇಂದ್ರ ಉಪಸ್ಥಿತರಿದ್ದರು.
ಘಟಿಕೋತ್ಸವದಲ್ಲಿ ಒಟ್ಟು 308 ಚಿನ್ನದ ಪದಕಗಳನ್ನು ವಿದ್ಯಾರ್ಥಿಗಳು ಮುಡಿಗೇರಿಸಿದ್ದು, 79 ನಗದು ಬಹುಮಾನವನ್ನು ಸ್ವೀಕರಿಸಿದ್ದಾರೆ. 140 ವಿದ್ಯಾರ್ಥಿಗಳು ಪಿಹೆಚ್ಡಿ ಪದವಿ ಸ್ವೀಕರಿಸಿದರು. ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದು, ಸ್ನಾತಕೋತ್ತರ ಪದವಿ ವಿಭಾಗದಲ್ಲಿ ಎಸ್.ಅನ್ನಪೂರ್ಣ 9 ಚಿನ್ನದ ಪದಕ ಮತ್ತು ಸ್ನಾತಕ ಪದವಿ ವಿಭಾಗದಲ್ಲಿ ಅನುರಾಧ 9 ಚಿನ್ನದ ಪದಕ ಸ್ವೀಕರಿಸಿ ಅತಿ ಹೆಚ್ಚು ಚಿನ್ನದ ಪದಕ ಪಡೆದ ಪಟ್ಟಿಗೆ ಸೇರಿದ್ದಾರೆ.
ಘಟಿಕೋತ್ಸವಕ್ಕೆ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಗೈರಾದ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಸಚಿವರು ಮತ್ತು ಸಹ ಕುಲಾಧಿಪತಿ ಡಾ.ಎಂ.ಸಿ.ಸುಧಾಕರ್ ಅಧ್ಯಕ್ಷತೆ ವಹಿಸಿದ್ದರು. ವಿಶ್ವವಿದ್ಯಾಲಯಗಳ ಧನಸಹಾಯ ಆಯೋಗದ ಉಪಾಧ್ಯಕ್ಷ ಪ್ರೊ.ದೀಪಕ್ ಕುಮಾರ್ ಶ್ರೀವಾಸ್ತವ ಮುಖ್ಯ ಅತಿಥಿಯಾಗಿ ಘಟಿಕೋತ್ಸವದ ಭಾಷಣ ಮಾಡಿದರು. ಕುಲಪತಿ ಡಾ.ಎಸ್.ಎಂ ಜಯಕರ, ಕುಲಸಚಿವ ಕೆ.ಎ.ಎಸ್ ಶೇಕ್ ಲತೀಫ್, ಪರೀಕ್ಷಾಂಗ ಕುಲಸಚಿವ ಸಿ.ಶ್ರೀನಿವಾಸ್ ಉಪಸ್ಥಿತರಿದ್ದರು.
In its 59th convocation, renowned music director Gurukiran and social worker KS Rajanna have been conferred honorary doctorate degrees by Bengaluru University.
09-03-26 09:51 pm
HK News Staffer
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
ಕ್ಷುಲ್ಲಕ ಕಾರಣಕ್ಕೆ ಪತಿ- ಪತ್ನಿ ಜಗಳ, ಎರಡು ವರ್ಷದ...
09-03-26 05:44 pm
ಅವಕಾಶ ಕೊಟ್ಟರೆ ಮತ್ತೆರಡು ವರ್ಷ ಬಜೆಟ್ ಮಂಡಿಸುತ್ತೇನ...
09-03-26 04:17 pm
ಬಳ್ಳಾರಿ ವಸತಿ ಶಾಲೆಯಲ್ಲೇ ವಿದ್ಯಾರ್ಥಿಗಳ ಸಂಘರ್ಷ ;...
09-03-26 03:24 pm
09-03-26 01:44 pm
HK News Staffer
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
09-03-26 09:52 pm
HK News Staffer
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
CM Siddaramaiah, Kambala Bantwal: ರಮಾನಾಥ ರೈ ಐ...
07-03-26 11:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm