ಬ್ರೇಕಿಂಗ್ ನ್ಯೂಸ್
11-09-24 12:18 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.11: ಬೆಂಗಳೂರು ವಿಶ್ವವಿದ್ಯಾನಿಲಯವು ತನ್ನ 59ನೇ ಘಟಿಕೋತ್ಸವದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಮತ್ತು ಸಮಾಜ ಸೇವಕ ಕೆ.ಎಸ್ ರಾಜಣ್ಣ ಅವರಿಗೆ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.
ಚಲನಚಿತ್ರ ಸಂಗೀತ ಕ್ಷೇತ್ರದಲ್ಲಿ ಅದ್ವಿತೀಯ ಸಾಧನೆಯನ್ನು ಗುರುತಿಸಿ ಕರಾವಳಿ ಮೂಲದ ಹೆಸರಾಂತ ಸಂಗೀತ ನಿರ್ದೇಶಕ ಗುರುಕಿರಣ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿದರೆ, ವಿಶೇಷ ಚೇತನರಾಗಿದ್ದರೂ ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿರುವ ರಾಜಣ್ಣ ಅವರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಯಿತು. ಗೌರವ ಡಾಕ್ಟರೇಟ್ ಸ್ವೀಕಾರ ಸಂದರ್ಭದಲ್ಲಿ ಗುರುಕಿರಣ್ ಕುಟುಂಬಸ್ಥರು ಸೇರಿದಂತೆ ಅಶ್ವಿನಿ ಪುನೀತ್ ರಾಜ್ಕುಮಾರ್, ಪ್ರಿಯಾಂಕಾ ಉಪೇಂದ್ರ ಉಪಸ್ಥಿತರಿದ್ದರು.
ಘಟಿಕೋತ್ಸವದಲ್ಲಿ ಒಟ್ಟು 308 ಚಿನ್ನದ ಪದಕಗಳನ್ನು ವಿದ್ಯಾರ್ಥಿಗಳು ಮುಡಿಗೇರಿಸಿದ್ದು, 79 ನಗದು ಬಹುಮಾನವನ್ನು ಸ್ವೀಕರಿಸಿದ್ದಾರೆ. 140 ವಿದ್ಯಾರ್ಥಿಗಳು ಪಿಹೆಚ್ಡಿ ಪದವಿ ಸ್ವೀಕರಿಸಿದರು. ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದು, ಸ್ನಾತಕೋತ್ತರ ಪದವಿ ವಿಭಾಗದಲ್ಲಿ ಎಸ್.ಅನ್ನಪೂರ್ಣ 9 ಚಿನ್ನದ ಪದಕ ಮತ್ತು ಸ್ನಾತಕ ಪದವಿ ವಿಭಾಗದಲ್ಲಿ ಅನುರಾಧ 9 ಚಿನ್ನದ ಪದಕ ಸ್ವೀಕರಿಸಿ ಅತಿ ಹೆಚ್ಚು ಚಿನ್ನದ ಪದಕ ಪಡೆದ ಪಟ್ಟಿಗೆ ಸೇರಿದ್ದಾರೆ.
ಘಟಿಕೋತ್ಸವಕ್ಕೆ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಗೈರಾದ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಸಚಿವರು ಮತ್ತು ಸಹ ಕುಲಾಧಿಪತಿ ಡಾ.ಎಂ.ಸಿ.ಸುಧಾಕರ್ ಅಧ್ಯಕ್ಷತೆ ವಹಿಸಿದ್ದರು. ವಿಶ್ವವಿದ್ಯಾಲಯಗಳ ಧನಸಹಾಯ ಆಯೋಗದ ಉಪಾಧ್ಯಕ್ಷ ಪ್ರೊ.ದೀಪಕ್ ಕುಮಾರ್ ಶ್ರೀವಾಸ್ತವ ಮುಖ್ಯ ಅತಿಥಿಯಾಗಿ ಘಟಿಕೋತ್ಸವದ ಭಾಷಣ ಮಾಡಿದರು. ಕುಲಪತಿ ಡಾ.ಎಸ್.ಎಂ ಜಯಕರ, ಕುಲಸಚಿವ ಕೆ.ಎ.ಎಸ್ ಶೇಕ್ ಲತೀಫ್, ಪರೀಕ್ಷಾಂಗ ಕುಲಸಚಿವ ಸಿ.ಶ್ರೀನಿವಾಸ್ ಉಪಸ್ಥಿತರಿದ್ದರು.
In its 59th convocation, renowned music director Gurukiran and social worker KS Rajanna have been conferred honorary doctorate degrees by Bengaluru University.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
23-07-26 01:51 pm
HK News Staffer
CJP ಪ್ರತಿಭಟನೆಯಲ್ಲಿ ಪೊಲೀಸ್ ದೌರ್ಜನ್ಯ; ತುರ್ತು ವ...
22-07-26 02:32 pm
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am