ಬ್ರೇಕಿಂಗ್ ನ್ಯೂಸ್
11-09-24 10:11 pm Bangalore Correspondent ಕರ್ನಾಟಕ
ಬೆಂಗಳೂರು, ಸೆ 11: ಅಧಿಕಾರ ಪ್ರಭಾವ ಬಳಸಿ ಉದ್ಯಮಿಯೊಬ್ಬರ ಕಂಪನಿ ಮೇಲೆ ದಾಳಿ ನಡೆಸಿ ಹಲ್ಲೆ ಮಾಡಿ ಅಕ್ರಮವಾಗಿ 1.5 ಕೋಟಿ ರೂಪಾಯಿ ಸುಲಿಗೆ ಮಾಡಿದ್ದ ಆರೋಪದಡಿ ಓರ್ವ ಮಹಿಳೆ ಸೇರಿ ನಾಲ್ವರು ಜಿಎಸ್ಟಿ ಅಧಿಕಾರಿಗಳನ್ನು ಬೈಯಪ್ಪನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಜೀವನ್ ಭೀಮಾನಗರದ ಜಿ.ಎಂ. ಪಾಳ್ಯದಲ್ಲಿ ನೆಲೆಸಿರುವ ಉದ್ಯಮಿ ಕೇಶವ್ ತಕ್ ನೀಡಿದ ದೂರಿನ ಮೇರೆಗೆ ಬೆಂಗಳೂರು ಜಿಎಸ್ಟಿ ವಿಭಾಗದಲ್ಲಿ ಗುಪ್ತಚರ ಅಧಿಕಾರಿಗಳಾಗಿ ಕಾರ್ಯನಿರ್ವಹಿಸುತ್ತಿದ್ದ ಅಭಿಷೇಕ್, ಮನೋಜ್, ನಾಗೇಶ್ ಬಾಬು ಹಾಗೂ ಸೋನಾಲಿ ಅವರನ್ನು ಬಂಧಿಸಲಾಗಿದೆ. ಹೆಚ್ಚಿನ ವಿಚಾರಣೆಗಾಗಿ ನಗರ ಪೊಲೀಸ್ ಆಯುಕ್ತ ಬಿ. ದಯಾನಂದ ಅವರು ಪ್ರಕರಣವನ್ನು ಸಿಸಿಬಿಗೆ ಹಸ್ತಾಂತರಿಸಿದ್ದಾರೆ.
ಜೀವನ್ ಭೀಮಾನಗರದಲ್ಲಿ ಮೆಕ್ಸೊ ಸಲ್ಯೂಷನ್ ಪ್ರೈವೇಟ್ ಕಂಪನಿ ನಡೆಸುತ್ತಿದ್ದ ಕೇಶವ್ ತಕ್ ಮನೆಗೆ ಕಳೆದ ಆಗಸ್ಟ್ 31ರಂದು ಆರೋಪಿಗಳು ಜಾರಿ ನಿರ್ದೇಶನಾಲಯ (ಇ.ಡಿ) ಹಾಗೂ ಜಿಎಸ್ಟಿ ಅಧಿಕಾರಿಗಳು ಎಂದು ಪರಿಚಯಿಸಿಕೊಂಡು ಬಂದಿದ್ದಾರೆ. ಏಕಾಏಕಿ ಮೊಬೈಲ್ ಸೇರಿದಂತೆ ಇನ್ನಿತರ ವಸ್ತುಗಳನ್ನ ವಶಪಡಿಸಿಕೊಂಡು ಅಕ್ರಮವಾಗಿ ಕಂಪನಿ ನಡೆಸುತ್ತಿದ್ದೀರಾ ಎಂದು ಆರೋಪಿಸಿ ಕೇಶವ್ ಮನೆಯಲ್ಲಿದ್ದ ಪವನ್, ಮುಖೇಶ್, ರಾಕೇಶ್ ಅವರನ್ನು ಬಲವಂತವಾಗಿ ಎಳೆದುಕೊಂಡು ಎರಡು ಕಾರಿನಲ್ಲಿ ಕೂರಿಸಿದ್ದರು
ಕಚೇರಿ ವಿಳಾಸಕ್ಕೆ ಕರೆತಂದು ಹಲ್ಲೆ ಮಾಡಿ ಪ್ರತ್ಯೇಕ ಕೊಠಡಿಯಲ್ಲಿ ಕೂಡಿಹಾಕಿದ್ದರು. ಹಿರಿಯ ಜಿಎಸ್ಟಿ ಅಧಿಕಾರಿ ಎಂದು ಪರಿಚಯಿಸಿಕೊಂಡ ಮನೋಜ್, ಇಂದಿರಾನಗರಕ್ಕೆ ಕೇಶವ್ನನ್ನ ಕರೆದೊಯ್ದಿದ್ದ. ಸ್ನೇಹಿತ ರೋಷನ್ ಜೈನ್ಗೆ ವಾಟ್ಸ್ಆ್ಯಪ್ ಕರೆ ಮಾಡಿಸಿ 3 ಕೋಟಿ ರೂಪಾಯಿ ತರುವಂತೆ ಒತ್ತಾಯಿಸಿ ಹಲ್ಲೆ ಮಾಡಿದ್ದರು. ಸ್ನೇಹಿತನಿಗೆ 3 ಕೋಟಿ ಒಗ್ಗೂಡಿಸಲು ಸಾಧ್ಯವಾಗಿರಲಿಲ್ಲ. ಸೆ.1ರ ಮುಂಜಾನೆ 2.30ರ ವೇಳೆ ಹೇಗೋ 1.50 ಕೋಟಿ ರೂ.ಹಣ ಹೊಂದಿಸಿದ್ದ. ಆರೋಪಿತ ಅಧಿಕಾರಿಗಳು ಒಂದೂವರೆ ಕೋಟಿ ಹಣ ಪಡೆದು ಪರಾರಿಯಾಗಿದ್ದರು ಎಂದು ದೂರಿನಲ್ಲಿ ಉದ್ಯಮಿ ವಿವರಿಸಿದ್ದರು.
1.50 ಕೋಟಿ ಹಣ ವಸೂಲಿ ಬಗ್ಗೆ ನೈಜತೆ ಬಗ್ಗೆ ಅರಿಯಲು ಉದ್ಯಮಿ ಪರಿಶೀಲಿಸಿದಾಗ ಜಿಎಸ್ಟಿ ಅಧಿಕಾರಿಗಳೇ ಹಣ ಸುಲಿಗೆ ಮಾಡಿರುವುದು ಗೊತ್ತಾಗಿದೆ. ಪ್ರಕರಣ ದಾಖಲಿಸಿ ಬಂಧಿಸಿದ್ದ ಬೈಯಪ್ಪನಹಳ್ಳಿ ಪೊಲೀಸರು ನಗರ ಪೊಲೀಸ್ ಆಯುಕ್ತರ ಆದೇಶ ಮೇರೆಗೆ ಪ್ರಕರಣವನ್ನ ಸಿಸಿಬಿಗೆ ಹಸ್ತಾಂತರಿಸಿರುವುದಾಗಿ ಪೊಲೀಸ್ ಕಮಿಷನರ್ ವಿವರಿಸಿದರು
Bengalore central crime branch (CCB) police have arrested four officials of the GST Intelligence, Bengaluru Zonal Unit of Central GST on charges of conducting an unauthorized raid on a business in Bengaluru and extorting Rs 1.5 crore in cash on September 1, after introducing themselves as senior GST and Enforcement Directorate (ED) officials.
20-09-26 03:32 pm
HK News Staffer
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 02:16 pm
HK News Staffer
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm