ಬ್ರೇಕಿಂಗ್ ನ್ಯೂಸ್
11-09-24 10:11 pm Bangalore Correspondent ಕರ್ನಾಟಕ
ಬೆಂಗಳೂರು, ಸೆ 11: ಅಧಿಕಾರ ಪ್ರಭಾವ ಬಳಸಿ ಉದ್ಯಮಿಯೊಬ್ಬರ ಕಂಪನಿ ಮೇಲೆ ದಾಳಿ ನಡೆಸಿ ಹಲ್ಲೆ ಮಾಡಿ ಅಕ್ರಮವಾಗಿ 1.5 ಕೋಟಿ ರೂಪಾಯಿ ಸುಲಿಗೆ ಮಾಡಿದ್ದ ಆರೋಪದಡಿ ಓರ್ವ ಮಹಿಳೆ ಸೇರಿ ನಾಲ್ವರು ಜಿಎಸ್ಟಿ ಅಧಿಕಾರಿಗಳನ್ನು ಬೈಯಪ್ಪನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಜೀವನ್ ಭೀಮಾನಗರದ ಜಿ.ಎಂ. ಪಾಳ್ಯದಲ್ಲಿ ನೆಲೆಸಿರುವ ಉದ್ಯಮಿ ಕೇಶವ್ ತಕ್ ನೀಡಿದ ದೂರಿನ ಮೇರೆಗೆ ಬೆಂಗಳೂರು ಜಿಎಸ್ಟಿ ವಿಭಾಗದಲ್ಲಿ ಗುಪ್ತಚರ ಅಧಿಕಾರಿಗಳಾಗಿ ಕಾರ್ಯನಿರ್ವಹಿಸುತ್ತಿದ್ದ ಅಭಿಷೇಕ್, ಮನೋಜ್, ನಾಗೇಶ್ ಬಾಬು ಹಾಗೂ ಸೋನಾಲಿ ಅವರನ್ನು ಬಂಧಿಸಲಾಗಿದೆ. ಹೆಚ್ಚಿನ ವಿಚಾರಣೆಗಾಗಿ ನಗರ ಪೊಲೀಸ್ ಆಯುಕ್ತ ಬಿ. ದಯಾನಂದ ಅವರು ಪ್ರಕರಣವನ್ನು ಸಿಸಿಬಿಗೆ ಹಸ್ತಾಂತರಿಸಿದ್ದಾರೆ.
ಜೀವನ್ ಭೀಮಾನಗರದಲ್ಲಿ ಮೆಕ್ಸೊ ಸಲ್ಯೂಷನ್ ಪ್ರೈವೇಟ್ ಕಂಪನಿ ನಡೆಸುತ್ತಿದ್ದ ಕೇಶವ್ ತಕ್ ಮನೆಗೆ ಕಳೆದ ಆಗಸ್ಟ್ 31ರಂದು ಆರೋಪಿಗಳು ಜಾರಿ ನಿರ್ದೇಶನಾಲಯ (ಇ.ಡಿ) ಹಾಗೂ ಜಿಎಸ್ಟಿ ಅಧಿಕಾರಿಗಳು ಎಂದು ಪರಿಚಯಿಸಿಕೊಂಡು ಬಂದಿದ್ದಾರೆ. ಏಕಾಏಕಿ ಮೊಬೈಲ್ ಸೇರಿದಂತೆ ಇನ್ನಿತರ ವಸ್ತುಗಳನ್ನ ವಶಪಡಿಸಿಕೊಂಡು ಅಕ್ರಮವಾಗಿ ಕಂಪನಿ ನಡೆಸುತ್ತಿದ್ದೀರಾ ಎಂದು ಆರೋಪಿಸಿ ಕೇಶವ್ ಮನೆಯಲ್ಲಿದ್ದ ಪವನ್, ಮುಖೇಶ್, ರಾಕೇಶ್ ಅವರನ್ನು ಬಲವಂತವಾಗಿ ಎಳೆದುಕೊಂಡು ಎರಡು ಕಾರಿನಲ್ಲಿ ಕೂರಿಸಿದ್ದರು
ಕಚೇರಿ ವಿಳಾಸಕ್ಕೆ ಕರೆತಂದು ಹಲ್ಲೆ ಮಾಡಿ ಪ್ರತ್ಯೇಕ ಕೊಠಡಿಯಲ್ಲಿ ಕೂಡಿಹಾಕಿದ್ದರು. ಹಿರಿಯ ಜಿಎಸ್ಟಿ ಅಧಿಕಾರಿ ಎಂದು ಪರಿಚಯಿಸಿಕೊಂಡ ಮನೋಜ್, ಇಂದಿರಾನಗರಕ್ಕೆ ಕೇಶವ್ನನ್ನ ಕರೆದೊಯ್ದಿದ್ದ. ಸ್ನೇಹಿತ ರೋಷನ್ ಜೈನ್ಗೆ ವಾಟ್ಸ್ಆ್ಯಪ್ ಕರೆ ಮಾಡಿಸಿ 3 ಕೋಟಿ ರೂಪಾಯಿ ತರುವಂತೆ ಒತ್ತಾಯಿಸಿ ಹಲ್ಲೆ ಮಾಡಿದ್ದರು. ಸ್ನೇಹಿತನಿಗೆ 3 ಕೋಟಿ ಒಗ್ಗೂಡಿಸಲು ಸಾಧ್ಯವಾಗಿರಲಿಲ್ಲ. ಸೆ.1ರ ಮುಂಜಾನೆ 2.30ರ ವೇಳೆ ಹೇಗೋ 1.50 ಕೋಟಿ ರೂ.ಹಣ ಹೊಂದಿಸಿದ್ದ. ಆರೋಪಿತ ಅಧಿಕಾರಿಗಳು ಒಂದೂವರೆ ಕೋಟಿ ಹಣ ಪಡೆದು ಪರಾರಿಯಾಗಿದ್ದರು ಎಂದು ದೂರಿನಲ್ಲಿ ಉದ್ಯಮಿ ವಿವರಿಸಿದ್ದರು.
1.50 ಕೋಟಿ ಹಣ ವಸೂಲಿ ಬಗ್ಗೆ ನೈಜತೆ ಬಗ್ಗೆ ಅರಿಯಲು ಉದ್ಯಮಿ ಪರಿಶೀಲಿಸಿದಾಗ ಜಿಎಸ್ಟಿ ಅಧಿಕಾರಿಗಳೇ ಹಣ ಸುಲಿಗೆ ಮಾಡಿರುವುದು ಗೊತ್ತಾಗಿದೆ. ಪ್ರಕರಣ ದಾಖಲಿಸಿ ಬಂಧಿಸಿದ್ದ ಬೈಯಪ್ಪನಹಳ್ಳಿ ಪೊಲೀಸರು ನಗರ ಪೊಲೀಸ್ ಆಯುಕ್ತರ ಆದೇಶ ಮೇರೆಗೆ ಪ್ರಕರಣವನ್ನ ಸಿಸಿಬಿಗೆ ಹಸ್ತಾಂತರಿಸಿರುವುದಾಗಿ ಪೊಲೀಸ್ ಕಮಿಷನರ್ ವಿವರಿಸಿದರು
Bengalore central crime branch (CCB) police have arrested four officials of the GST Intelligence, Bengaluru Zonal Unit of Central GST on charges of conducting an unauthorized raid on a business in Bengaluru and extorting Rs 1.5 crore in cash on September 1, after introducing themselves as senior GST and Enforcement Directorate (ED) officials.
16-09-24 07:49 pm
HK News Desk
P Murthy, Ambedkar Sena, MLA Munirathna: ದಲಿತ...
15-09-24 05:33 pm
BJP, RSS: ರಾಜ್ಯ ಬಿಜೆಪಿಗೆ ಮತ್ತೆ ಸಂಘಟನಾ ಕಾರ್ಯದರ...
15-09-24 01:53 pm
Munirathan: ಗುತ್ತಿಗೆದಾರನಿಗೆ ಜಾತಿ ನಿಂದನೆ, ಲಂಚಕ...
15-09-24 12:47 pm
Nagamangala violence, Hemant Nimbalkar IPS: ನ...
13-09-24 09:10 pm
17-09-24 07:28 pm
HK News Desk
Arvind Kejriwal, Atishi New CM Delhi; ದೆಹಲಿ ಸ...
17-09-24 07:08 pm
ಜಾಲತಾಣದಲ್ಲಿ ಪ್ರವಾದಿ ಬಗ್ಗೆ ಅವಹೇಳನಕಾರಿ ಪೋಸ್ಟ್ ;...
16-09-24 02:04 pm
ಆರು ತಿಂಗಳು ಜೈಲಲ್ಲಿದ್ದರೂ, ಸಿಎಂ ಸ್ಥಾನ ಬಿಟ್ಟುಕೊಡ...
15-09-24 06:55 pm
ಪೋರ್ಟ್ ಬ್ಲೇರ್ ಇನ್ನು ಶ್ರೀವಿಜಯ ಪುರಂ ; ವಸಾಹತು ಶಾ...
14-09-24 09:46 pm
17-09-24 10:11 pm
Mangalore Correspondent
Brijesh Chowta, Msez, JBF: ಎಂಎಸ್ಇಝೆಡ್ ಗೆ ಭೂಮ...
17-09-24 09:56 pm
Udupi, Sunil Kumar, Kota srinivas, CM: ರಾಜ್ಯ...
17-09-24 09:34 pm
iPhone, protest, Maple, Mangalore: ಆಪಲ್ ಐಫೋನಲ...
17-09-24 07:25 pm
Mangalore, Street Vendors; ಬೀದಿ ಬದಿ ವ್ಯಾಪಾರಿಗ...
17-09-24 03:43 pm
15-09-24 01:21 pm
Bangalore Correspondent
MLA Munirathna Arrest: ತಿಂಗಳಿಗೆ 30 ಲಕ್ಷ ಲಂಚಕ್...
14-09-24 06:54 pm
Srimathi Shetty murder case, Mangalore Court...
14-09-24 11:52 am
Kristina Joksimovic, Miss Switzerland finalis...
13-09-24 10:50 pm
Mangalore crime, Bantwal Bank: ಬ್ಯಾಂಕ್ ಕಚೇರಿಯ...
13-09-24 09:08 pm