ಬ್ರೇಕಿಂಗ್ ನ್ಯೂಸ್
12-09-24 09:13 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.12: ಮಂಗಳೂರಿನ ಪಿಲಿಕುಲ ನಿಸರ್ಗಧಾಮಕ್ಕೆ ಪುನಶ್ಚೇತನ ನೀಡುವ ನಿಟ್ಟಿನಲ್ಲಿ ಕಂಬಳ ತುಳುನಾಡ ಉತ್ಸವವನ್ನು ಎಲ್ಲರ ಸಹಭಾಗಿತ್ವದಲ್ಲಿ ಅದ್ದೂರಿಯಾಗಿ ನಡೆಸುವಂತೆ ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಸಲಹೆ ನೀಡಿದ್ದಾರೆ.
ಗುರುವಾರ ವಿಧಾನಸಭಾ ಕಚೇರಿ ಸಭಾಂಗಣದಲ್ಲಿ ಪಿಲಿಕುಳ ಕಂಬಳ, ತುಳುನಾಡ ಉತ್ಸವದ ಬಗ್ಗೆ ಜನಪ್ರತಿನಿಧಿಗಳು ಅಧಿಕಾರಿಗಳ ಸಭೆಯನ್ನುದ್ದೇಶಿಸಿ ಮಾತನಾಡಿದರು. ಪಿಲಿಕುಲದಲ್ಲಿ ಕೆಲವೊಂದು ಶಾಶ್ವತವಾದ ಕಾಮಗಾರಿಗಳನ್ನು ಕೈಗೊಂಡು ಅಭಿವೃದ್ಧಿ ಪಡಿಸಲು ಸಂಘಟಿತ ಪ್ರಯತ್ನ ನಡೆಸಬೇಕು. ತುಳುನಾಡು ಉತ್ಸವದ ಮೂಲಕ ಕಂಬಳ ಸೇರಿದಂತೆ ಕಲೆ, ಸಾಂಸ್ಕೃತಿಕ ಕಾರ್ಯಕ್ರಮ, ವಸ್ತು ಪ್ರದರ್ಶನ, ಕೃಷಿಮೇಳ, ಆಹಾರ ಮೇಳಗಳನ್ನು ನಡೆಸುವ ಚಿಂತನೆ ಇದೆ. ಈ ಬಗ್ಗೆ ಸಂಸದರು, ಶಾಸಕರು, ಅಧಿಕಾರಿಗಳು, ಇತರ ಜನಪ್ರತಿನಿಧಿಗಳು ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಸಲಹೆ ಪಡೆದು ಕಾರ್ಯಕ್ರಮ ರೂಪಿಸಲಾಗುವುದು. ಇದಕ್ಕೆ ಪೂರಕವಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು, ಜಿಲ್ಲಾ ಮಟ್ಟದ ಅಧಿಕಾರಿಗಳು, ಸಂಘ ಸಂಸ್ಥೆಗಳ ಪ್ರತಿನಿಧಿಗಳ ಸಭೆ ನಡೆಸಿ ಕಾರ್ಯಯೋಜನೆ ರೂಪಿಸಲು ಯು.ಟಿ.ಖಾದರ್ ಸಲಹೆ ನೀಡಿದರು.

ತುಳುನಾಡು ಉತ್ಸವವನ್ನು ಈ ಬಾರಿ ಯಶಸ್ವಿಯಾಗಿ ಆಚರಿಸಿ ಮುಂದಿನ ಹಂತದಲ್ಲಿ ರಾಜ್ಯದ ಬಜೆಟ್ ನಲ್ಲಿ ಉತ್ಸವಕ್ಕೆ ಅನುದಾನ ನಿಗದಿ ಪಡಿಸಿ ಶಾಶ್ವತವಾಗಿ ಕಾರ್ಯಕ್ರಮ ನಡೆಸಬಹುದು ಎಂದು ಯು.ಟಿ.ಖಾದರ್ ತಿಳಿಸಿದ್ದಾರೆ. ದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ, ಪಿಲಿಕುಳದ ಅಭಿವೃದ್ಧಿ ಹಾಗೂ ಜಿಲ್ಲೆಯ ಅಭಿವೃದ್ಧಿ ನಿಟ್ಟಿನಲ್ಲಿ ಒಳ್ಳೆಯ ಉದ್ದೇಶದಿಂದ ಈ ಉತ್ಸವ ಹಮ್ಮಿಕೊಳ್ಳಲಾಗಿದೆ. ಈ ಬಗ್ಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಸದರು, ಶಾಸಕರು, ಅಧಿಕಾರಿಗಳ ಸಮಾಲೋಚನಾ ಸಭೆ ಕರೆಯುವುದಾಗಿ ತಿಳಿಸಿದ್ದಾರೆ.
ಸಂಸದ ಬೃಜೇಶ್ ಚೌಟ ಮಾತನಾಡಿ ಈ ಉತ್ಸವದಲ್ಲಿ ವಿದ್ಯಾರ್ಥಿಗಳು ಹೆಚ್ಚಿನ ಪ್ರಯೋಜನ ಪಡೆದುಕೊಳ್ಳುವಂತಾಗಬೇಕು ಎಂದರು. ಈ ಸಂದರ್ಭದಲ್ಲಿ ಶಾಸಕರಾದ ಉಮಾನಾಥ ಕೋಟ್ಯಾನ್, ವೇದವ್ಯಾಸ ಕಾಮತ್ ರಾಜೇಶ್ ನಾಯ್ಕ್, ಡಾ.ಭರತ್ ಶೆಟ್ಟಿ, ಹರೀಶ್ ಪೂಂಜಾ, ಅಶೋಕ್ ಕುಮಾರ್ ರೈ, ಡಾ.ಮಂಜುನಾಥ ಭಂಡಾರಿ, ಐವನ್ ಡಿಸೋಜ, ಭೋಜೇ ಗೌಡ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ದಕ್ಷಿಣ ಕನ್ನಡ ಕಂಬಳ ಸಮಿತಿಯ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ, ಮೂಡಾ ಅಧ್ಯಕ್ಷ ಸದಾಶಿವ ಉಳ್ಳಾಲ್, ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ.ಮೋಹನ್ ಆಳ್ವ, ಪಿಲಿಕುಳ ಅಭಿವೃದ್ಧಿ ಪ್ರತಿಷ್ಠಾನದ ಅಧಿಕಾರಿಗಳು, ರಾಜ್ಯದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
Pilikula kamabala meeting held in Bangalore, Speaker UT Khader gives suggestions.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 04:14 pm
HK News Staffer
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
ಚರಕದಿಂದ ನೂಲು ತೆಗೆದು, ಸಮುದ್ರ ಕಿನಾರೆಯಲ್ಲಿ ಉಪ್ಪು...
15-08-26 10:08 pm
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm