ಬ್ರೇಕಿಂಗ್ ನ್ಯೂಸ್
12-09-24 10:41 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.12: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ನಿವೇಶನ ಹಂಚಿಕೆ ಪ್ರಕರಣದಲ್ಲಿ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ನಿರ್ಧಾರ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿರುವ ರಿಟ್ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಪೂರ್ತಿಗೊಳಿಸಿದ್ದು ತೀರ್ಪನ್ನು ಕಾಯ್ದಿರಿಸಿದೆ.
ವಿಚಾರಣೆ ಪೂರ್ಣಗೊಳಿಸಿದ ನ್ಯಾಯಾಧೀಶ ಎಂ. ನಾಗಪ್ರಸನ್ನ ಅವರು, ತೀರ್ಪು ಕಾಯ್ದಿರಿಸಿದ್ದು ಮಧ್ಯಂತರ ಆದೇಶ ಮುಂದುವರಿಯುತ್ತದೆ ಎಂದು ಹೇಳಿದ್ದಾರೆ. ಈಗಾಗಲೇ ರಾಜ್ಯಪಾಲರ ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ರಾಜ್ಯ ಸರ್ಕಾರದ ಪರವಾಗಿ ಶಶಿಕಿರಣ್ ಶೆಟ್ಟಿ ವಾದ ಮಂಡಿಸಿದ್ದಾರೆ. ಗುರುವಾರ ಮುಖ್ಯಮಂತ್ರಿಗಳ ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಿದರು.
ರಾಜ್ಯಪಾಲರು 23 ವರ್ಷದ ಹಳೆಯ ಪ್ರಕರಣದ ತನಿಖೆಗೆ ಅನುಮತಿ ನೀಡಿದ್ದಾರೆ. ಇದು ರಾಷ್ಟ್ರಪತಿ ಆಳ್ವಿಕೆಗಿಂತ ಹೆಚ್ಚು ರಾಜಕೀಯ ಪ್ರೇರಿತ. ಸೆಕ್ಷೆನ್ 17ಎ ಅಡಿ ಅನುಮತಿ ನೀಡುವಾಗ ಸಚಿವ ಸಂಪುಟದ ಶಿಫಾರಸು ಪಾಲಿಸಬೇಕು. ಪಾಲಿಸದಿದ್ದರೆ ಅದಕ್ಕೆ ಸೂಕ್ತ ಕಾರಣ ನೀಡುವ ಹೊಣೆ ರಾಜ್ಯಪಾಲರ ಮೇಲಿದೆ. ಎಲ್ಲಾ ಪ್ರಕರಣಗಳಲ್ಲೂ ಸಚಿವ ಸಂಪುಟ ಸಿಎಂ ಪರ ಇದೆ, ತಾರತಮ್ಯ ಮಾಡಿದೆ ಎನ್ನಲಾಗದು. ಸಚಿವ ಸಂಪುಟ ಸಭೆಯಲ್ಲಿ ಮಂತ್ರಿಗಳು ಬೇರೆ ಬೇರೆ ಅಭಿಪ್ರಾಯ ಮಂಡಿಸಬಹುದು ಎಂದು ಅಭಿಷೇಕ್ ಮನು ಸಿಂಘ್ವಿ ವಾದಿಸಿದರು.
ರಾಜ್ಯಪಾಲರು ಸಚಿವ ಸಂಪುಟದ ಶಿಫಾರಸು ಪಾಲಿಸಲೇಬೇಕೆಂದಿಲ್ಲ. ಆದರೆ ಭಿನ್ನ ನಿಲುವಿಗೆ ಕಾರಣ ನೀಡಬೇಕೆಂಬುದು ನಿಮ್ಮ ವಾದವೇ? ಎಂದು ನ್ಯಾಯಾಧೀಶರು ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಸಿಂಘ್ವಿ, ಸಚಿವ ಸಂಪುಟದ ಶಿಫಾರಸನ್ನು ಸಾರಾಸಗಟಾಗಿ ತಳ್ಳಿಹಾಕುವಂತಿಲ್ಲ. ರಾಜ್ಯಪಾಲರು ಸಚಿವ ಸಂಪುಟದ ಶಿಫಾರಸ್ಸು ತಪ್ಪೆಂದು ಹೇಳಿಲ್ಲ. ಹೀಗಾಗಿ ಕಾರಣವೇ ಹೇಳದೆ ಸಚಿವ ಸಂಪುಟದ ಕ್ರಮ ತಾರತಮ್ಯಪೂರಿತ ಎನ್ನಲಾಗದು ಎಂದು ಅಭಿಷೇಕ್ ಮನು ಸಿಂಘ್ವಿ ಹೇಳಿದರು. ಸುಧೀರ್ಘ ವಾದ, ಪ್ರತಿವಾದ ಆಲಿಸಿದ ನ್ಯಾಯಾಧೀಶರಾದ ಎಂ. ನಾಗಪ್ರಸನ್ನ ಅವರು ತೀರ್ಪು ಕಾಯ್ದಿರಿಸಿದ್ದಾರೆ.
The Karnataka High Court on Thursday completed its hearing on Chief Minister Siddaramaiah's petition challenging the legality of Governor Thaawarchand Gehlot's approval for his prosecution in the Mysuru Urban Development Authority (MUDA) case, and reserved its orders.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
30-06-26 11:02 pm
HK News Staffer
ಪಾಗಲ್ ಪ್ರೇಮಿ ಕೇಸ್ ಬೆನ್ನಲ್ಲೇ ಬಯಲಾಯ್ತು ಅಕ್ರಮ ಬ...
30-06-26 03:48 pm
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm