ಬ್ರೇಕಿಂಗ್ ನ್ಯೂಸ್
12-09-24 10:41 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.12: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ನಿವೇಶನ ಹಂಚಿಕೆ ಪ್ರಕರಣದಲ್ಲಿ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ನಿರ್ಧಾರ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿರುವ ರಿಟ್ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಪೂರ್ತಿಗೊಳಿಸಿದ್ದು ತೀರ್ಪನ್ನು ಕಾಯ್ದಿರಿಸಿದೆ.
ವಿಚಾರಣೆ ಪೂರ್ಣಗೊಳಿಸಿದ ನ್ಯಾಯಾಧೀಶ ಎಂ. ನಾಗಪ್ರಸನ್ನ ಅವರು, ತೀರ್ಪು ಕಾಯ್ದಿರಿಸಿದ್ದು ಮಧ್ಯಂತರ ಆದೇಶ ಮುಂದುವರಿಯುತ್ತದೆ ಎಂದು ಹೇಳಿದ್ದಾರೆ. ಈಗಾಗಲೇ ರಾಜ್ಯಪಾಲರ ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ರಾಜ್ಯ ಸರ್ಕಾರದ ಪರವಾಗಿ ಶಶಿಕಿರಣ್ ಶೆಟ್ಟಿ ವಾದ ಮಂಡಿಸಿದ್ದಾರೆ. ಗುರುವಾರ ಮುಖ್ಯಮಂತ್ರಿಗಳ ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಿದರು.
ರಾಜ್ಯಪಾಲರು 23 ವರ್ಷದ ಹಳೆಯ ಪ್ರಕರಣದ ತನಿಖೆಗೆ ಅನುಮತಿ ನೀಡಿದ್ದಾರೆ. ಇದು ರಾಷ್ಟ್ರಪತಿ ಆಳ್ವಿಕೆಗಿಂತ ಹೆಚ್ಚು ರಾಜಕೀಯ ಪ್ರೇರಿತ. ಸೆಕ್ಷೆನ್ 17ಎ ಅಡಿ ಅನುಮತಿ ನೀಡುವಾಗ ಸಚಿವ ಸಂಪುಟದ ಶಿಫಾರಸು ಪಾಲಿಸಬೇಕು. ಪಾಲಿಸದಿದ್ದರೆ ಅದಕ್ಕೆ ಸೂಕ್ತ ಕಾರಣ ನೀಡುವ ಹೊಣೆ ರಾಜ್ಯಪಾಲರ ಮೇಲಿದೆ. ಎಲ್ಲಾ ಪ್ರಕರಣಗಳಲ್ಲೂ ಸಚಿವ ಸಂಪುಟ ಸಿಎಂ ಪರ ಇದೆ, ತಾರತಮ್ಯ ಮಾಡಿದೆ ಎನ್ನಲಾಗದು. ಸಚಿವ ಸಂಪುಟ ಸಭೆಯಲ್ಲಿ ಮಂತ್ರಿಗಳು ಬೇರೆ ಬೇರೆ ಅಭಿಪ್ರಾಯ ಮಂಡಿಸಬಹುದು ಎಂದು ಅಭಿಷೇಕ್ ಮನು ಸಿಂಘ್ವಿ ವಾದಿಸಿದರು.
ರಾಜ್ಯಪಾಲರು ಸಚಿವ ಸಂಪುಟದ ಶಿಫಾರಸು ಪಾಲಿಸಲೇಬೇಕೆಂದಿಲ್ಲ. ಆದರೆ ಭಿನ್ನ ನಿಲುವಿಗೆ ಕಾರಣ ನೀಡಬೇಕೆಂಬುದು ನಿಮ್ಮ ವಾದವೇ? ಎಂದು ನ್ಯಾಯಾಧೀಶರು ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಸಿಂಘ್ವಿ, ಸಚಿವ ಸಂಪುಟದ ಶಿಫಾರಸನ್ನು ಸಾರಾಸಗಟಾಗಿ ತಳ್ಳಿಹಾಕುವಂತಿಲ್ಲ. ರಾಜ್ಯಪಾಲರು ಸಚಿವ ಸಂಪುಟದ ಶಿಫಾರಸ್ಸು ತಪ್ಪೆಂದು ಹೇಳಿಲ್ಲ. ಹೀಗಾಗಿ ಕಾರಣವೇ ಹೇಳದೆ ಸಚಿವ ಸಂಪುಟದ ಕ್ರಮ ತಾರತಮ್ಯಪೂರಿತ ಎನ್ನಲಾಗದು ಎಂದು ಅಭಿಷೇಕ್ ಮನು ಸಿಂಘ್ವಿ ಹೇಳಿದರು. ಸುಧೀರ್ಘ ವಾದ, ಪ್ರತಿವಾದ ಆಲಿಸಿದ ನ್ಯಾಯಾಧೀಶರಾದ ಎಂ. ನಾಗಪ್ರಸನ್ನ ಅವರು ತೀರ್ಪು ಕಾಯ್ದಿರಿಸಿದ್ದಾರೆ.
The Karnataka High Court on Thursday completed its hearing on Chief Minister Siddaramaiah's petition challenging the legality of Governor Thaawarchand Gehlot's approval for his prosecution in the Mysuru Urban Development Authority (MUDA) case, and reserved its orders.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
10-04-26 11:05 pm
HK News Staffer
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
10-04-26 10:12 pm
Mangalore Correspondent
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
Besant Evening College, BPL Cricket: ಬೆಸೆಂಟ್...
07-04-26 01:22 pm
10-04-26 11:06 pm
HK News Staffer
Red Corner Notice, Mangalore crime: ದೇರಳಕಟ್ಟೆ...
09-04-26 09:16 pm
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm