ಬ್ರೇಕಿಂಗ್ ನ್ಯೂಸ್
13-09-24 09:10 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.13: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶನ ಮೆರವಣಿಗೆ ವೇಳೆ ನಡೆದ ಗಲಭೆ ಬೆನ್ನಲ್ಲೇ ರಾಜ್ಯ ಸರ್ಕಾರ ಗುಪ್ತಚರ ಇಲಾಖೆಯ ಎಡಿಜಿಪಿ ಹುದ್ದೆಯಿಂದ ಹಿರಿಯ ಪೊಲೀಸ್ ಅಧಿಕಾರಿ ಕೆ.ವಿ.ಶರತ್ ಚಂದ್ರ ಅವರನ್ನು ಕೆಳಗಿಳಿಸಿದೆ. ಗುಪ್ತಚರ ಇಲಾಖೆ ನೂತನ ಎಡಿಜಿಪಿಯಾಗಿ ಹಿರಿಯ ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಅವರನ್ನು ನೇಮಕ ಮಾಡಲಾಗಿದೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾಗಿಯೂ ನಿಂಬಾಳ್ಕರ್ ಮುಂದುವರಿಯಲಿದ್ದಾರೆ.
ಶರತ್ ಚಂದ್ರ ಅವರನ್ನು ಪೊಲೀಸ್ ನೇಮಕಾತಿ ವಿಭಾಗದ ಎಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದ್ದು, ಇದರ ಜೊತೆಗೆ ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗ ಮುಖ್ಯಸ್ಥರಾಗಿಯೂ ಹೆಚ್ಚುವರಿ ಜವಾಬ್ದಾರಿ ನೀಡಲಾಗಿದೆ. ಇದೇ ವೇಳೆ, ಎಡಿಜಿಪಿ ಅಲೋಕ್ ಕುಮಾರ್ ಅವರನ್ನು ರಸ್ತೆ ಸುರಕ್ಷತೆ ಮತ್ತು ಸಂಚಾರ ವಿಭಾಗದಿಂದ ಬಿಡುಗಡೆ ಮಾಡಲಾಗಿದೆ.
ಈ ಹಿಂದೆಯೂ ಸಿದ್ದರಾಮಯ್ಯ ಅವರ ಅಧಿಕಾರ ಅವಧಿಯಲ್ಲಿ ಹೇಮಂತ್ ನಿಂಬಾಳ್ಕರ್ ಗುಪ್ತಚರ ಇಲಾಖೆಯಲ್ಲಿದ್ದರು. ರಾಜ್ಯದಲ್ಲಿ ದುರ್ಘಟನೆ ಮರುಕಳಿಸುತ್ತಿರುವ ಹಿನ್ನೆಲೆಯಲ್ಲಿ ಇದೀಗ ಮತ್ತೆ ನಿಂಬಾಳ್ಕರ್ ಅವರಿಗೇ ಗುಪ್ತಚರ ಇಲಾಖೆಯ ಜವಾಬ್ದಾರಿ ನೀಡಿದ್ದಾರೆ ಎನ್ನಲಾಗಿದೆ.
ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಎರಡು ದಿನಗಳ ಹಿಂದೆ ಗಣೇಶನ ಮೆರವಣಿಗೆ ವೇಳೆ ನಡೆದ ದಾಳಿ ರಾಜ್ಯ ರಾಜಕಾರಣದಲ್ಲಿ ಕಿಡಿ ಸೃಷ್ಟಿಸಿದೆ. ಗಲಭೆ ಘಟನೆ ರಾಜಕೀಯ ಸ್ವರೂಪ ಪಡೆದಿದ್ದು, ಕಾಂಗ್ರೆಸ್-ಬಿಜೆಪಿ ನಡುವೆ ಕಿತ್ತಾಟಕ್ಕೆ ಕಾರಣವಾಗಿದೆ.
Nagamangala violence, intelligence ADGP Sharath Chandra transferred, Hemant Nimbalkar appointed as new officer. The Karnataka Government on Friday announced several high-level police transfers effective immediately, according to a notification from the Vidhana Soudha, Bengaluru, dated September 13, 2024.
08-06-25 06:03 pm
Bangalore Correspondent
Bhaskar Rao, Cm Siddaramaiah, DK Shivakumar:...
07-06-25 08:04 pm
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
08-06-25 10:51 pm
Mangalore Correspondent
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
08-06-25 10:29 pm
HK News Desk
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm