ಬ್ರೇಕಿಂಗ್ ನ್ಯೂಸ್
13-09-24 09:10 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.13: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶನ ಮೆರವಣಿಗೆ ವೇಳೆ ನಡೆದ ಗಲಭೆ ಬೆನ್ನಲ್ಲೇ ರಾಜ್ಯ ಸರ್ಕಾರ ಗುಪ್ತಚರ ಇಲಾಖೆಯ ಎಡಿಜಿಪಿ ಹುದ್ದೆಯಿಂದ ಹಿರಿಯ ಪೊಲೀಸ್ ಅಧಿಕಾರಿ ಕೆ.ವಿ.ಶರತ್ ಚಂದ್ರ ಅವರನ್ನು ಕೆಳಗಿಳಿಸಿದೆ. ಗುಪ್ತಚರ ಇಲಾಖೆ ನೂತನ ಎಡಿಜಿಪಿಯಾಗಿ ಹಿರಿಯ ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಅವರನ್ನು ನೇಮಕ ಮಾಡಲಾಗಿದೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾಗಿಯೂ ನಿಂಬಾಳ್ಕರ್ ಮುಂದುವರಿಯಲಿದ್ದಾರೆ.
ಶರತ್ ಚಂದ್ರ ಅವರನ್ನು ಪೊಲೀಸ್ ನೇಮಕಾತಿ ವಿಭಾಗದ ಎಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದ್ದು, ಇದರ ಜೊತೆಗೆ ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗ ಮುಖ್ಯಸ್ಥರಾಗಿಯೂ ಹೆಚ್ಚುವರಿ ಜವಾಬ್ದಾರಿ ನೀಡಲಾಗಿದೆ. ಇದೇ ವೇಳೆ, ಎಡಿಜಿಪಿ ಅಲೋಕ್ ಕುಮಾರ್ ಅವರನ್ನು ರಸ್ತೆ ಸುರಕ್ಷತೆ ಮತ್ತು ಸಂಚಾರ ವಿಭಾಗದಿಂದ ಬಿಡುಗಡೆ ಮಾಡಲಾಗಿದೆ.
ಈ ಹಿಂದೆಯೂ ಸಿದ್ದರಾಮಯ್ಯ ಅವರ ಅಧಿಕಾರ ಅವಧಿಯಲ್ಲಿ ಹೇಮಂತ್ ನಿಂಬಾಳ್ಕರ್ ಗುಪ್ತಚರ ಇಲಾಖೆಯಲ್ಲಿದ್ದರು. ರಾಜ್ಯದಲ್ಲಿ ದುರ್ಘಟನೆ ಮರುಕಳಿಸುತ್ತಿರುವ ಹಿನ್ನೆಲೆಯಲ್ಲಿ ಇದೀಗ ಮತ್ತೆ ನಿಂಬಾಳ್ಕರ್ ಅವರಿಗೇ ಗುಪ್ತಚರ ಇಲಾಖೆಯ ಜವಾಬ್ದಾರಿ ನೀಡಿದ್ದಾರೆ ಎನ್ನಲಾಗಿದೆ.
ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಎರಡು ದಿನಗಳ ಹಿಂದೆ ಗಣೇಶನ ಮೆರವಣಿಗೆ ವೇಳೆ ನಡೆದ ದಾಳಿ ರಾಜ್ಯ ರಾಜಕಾರಣದಲ್ಲಿ ಕಿಡಿ ಸೃಷ್ಟಿಸಿದೆ. ಗಲಭೆ ಘಟನೆ ರಾಜಕೀಯ ಸ್ವರೂಪ ಪಡೆದಿದ್ದು, ಕಾಂಗ್ರೆಸ್-ಬಿಜೆಪಿ ನಡುವೆ ಕಿತ್ತಾಟಕ್ಕೆ ಕಾರಣವಾಗಿದೆ.
Nagamangala violence, intelligence ADGP Sharath Chandra transferred, Hemant Nimbalkar appointed as new officer. The Karnataka Government on Friday announced several high-level police transfers effective immediately, according to a notification from the Vidhana Soudha, Bengaluru, dated September 13, 2024.
16-09-24 07:49 pm
HK News Desk
P Murthy, Ambedkar Sena, MLA Munirathna: ದಲಿತ...
15-09-24 05:33 pm
BJP, RSS: ರಾಜ್ಯ ಬಿಜೆಪಿಗೆ ಮತ್ತೆ ಸಂಘಟನಾ ಕಾರ್ಯದರ...
15-09-24 01:53 pm
Munirathan: ಗುತ್ತಿಗೆದಾರನಿಗೆ ಜಾತಿ ನಿಂದನೆ, ಲಂಚಕ...
15-09-24 12:47 pm
Nagamangala violence, Hemant Nimbalkar IPS: ನ...
13-09-24 09:10 pm
18-09-24 11:03 am
HK News Desk
ಬುಲ್ಡೋಜರ್ ನ್ಯಾಯವನ್ನು ವೈಭವೀಕರಿಸುವುದು ತಪ್ಪು, ಅತ...
17-09-24 07:28 pm
Arvind Kejriwal, Atishi New CM Delhi; ದೆಹಲಿ ಸ...
17-09-24 07:08 pm
ಜಾಲತಾಣದಲ್ಲಿ ಪ್ರವಾದಿ ಬಗ್ಗೆ ಅವಹೇಳನಕಾರಿ ಪೋಸ್ಟ್ ;...
16-09-24 02:04 pm
ಆರು ತಿಂಗಳು ಜೈಲಲ್ಲಿದ್ದರೂ, ಸಿಎಂ ಸ್ಥಾನ ಬಿಟ್ಟುಕೊಡ...
15-09-24 06:55 pm
17-09-24 10:11 pm
Mangalore Correspondent
Brijesh Chowta, Msez, JBF: ಎಂಎಸ್ಇಝೆಡ್ ಗೆ ಭೂಮ...
17-09-24 09:56 pm
Udupi, Sunil Kumar, Kota srinivas, CM: ರಾಜ್ಯ...
17-09-24 09:34 pm
iPhone, protest, Maple, Mangalore: ಆಪಲ್ ಐಫೋನಲ...
17-09-24 07:25 pm
Mangalore, Street Vendors; ಬೀದಿ ಬದಿ ವ್ಯಾಪಾರಿಗ...
17-09-24 03:43 pm
15-09-24 01:21 pm
Bangalore Correspondent
MLA Munirathna Arrest: ತಿಂಗಳಿಗೆ 30 ಲಕ್ಷ ಲಂಚಕ್...
14-09-24 06:54 pm
Srimathi Shetty murder case, Mangalore Court...
14-09-24 11:52 am
Kristina Joksimovic, Miss Switzerland finalis...
13-09-24 10:50 pm
Mangalore crime, Bantwal Bank: ಬ್ಯಾಂಕ್ ಕಚೇರಿಯ...
13-09-24 09:08 pm