ಬ್ರೇಕಿಂಗ್ ನ್ಯೂಸ್
13-09-24 09:10 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.13: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶನ ಮೆರವಣಿಗೆ ವೇಳೆ ನಡೆದ ಗಲಭೆ ಬೆನ್ನಲ್ಲೇ ರಾಜ್ಯ ಸರ್ಕಾರ ಗುಪ್ತಚರ ಇಲಾಖೆಯ ಎಡಿಜಿಪಿ ಹುದ್ದೆಯಿಂದ ಹಿರಿಯ ಪೊಲೀಸ್ ಅಧಿಕಾರಿ ಕೆ.ವಿ.ಶರತ್ ಚಂದ್ರ ಅವರನ್ನು ಕೆಳಗಿಳಿಸಿದೆ. ಗುಪ್ತಚರ ಇಲಾಖೆ ನೂತನ ಎಡಿಜಿಪಿಯಾಗಿ ಹಿರಿಯ ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಅವರನ್ನು ನೇಮಕ ಮಾಡಲಾಗಿದೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾಗಿಯೂ ನಿಂಬಾಳ್ಕರ್ ಮುಂದುವರಿಯಲಿದ್ದಾರೆ.
ಶರತ್ ಚಂದ್ರ ಅವರನ್ನು ಪೊಲೀಸ್ ನೇಮಕಾತಿ ವಿಭಾಗದ ಎಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದ್ದು, ಇದರ ಜೊತೆಗೆ ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗ ಮುಖ್ಯಸ್ಥರಾಗಿಯೂ ಹೆಚ್ಚುವರಿ ಜವಾಬ್ದಾರಿ ನೀಡಲಾಗಿದೆ. ಇದೇ ವೇಳೆ, ಎಡಿಜಿಪಿ ಅಲೋಕ್ ಕುಮಾರ್ ಅವರನ್ನು ರಸ್ತೆ ಸುರಕ್ಷತೆ ಮತ್ತು ಸಂಚಾರ ವಿಭಾಗದಿಂದ ಬಿಡುಗಡೆ ಮಾಡಲಾಗಿದೆ.
ಈ ಹಿಂದೆಯೂ ಸಿದ್ದರಾಮಯ್ಯ ಅವರ ಅಧಿಕಾರ ಅವಧಿಯಲ್ಲಿ ಹೇಮಂತ್ ನಿಂಬಾಳ್ಕರ್ ಗುಪ್ತಚರ ಇಲಾಖೆಯಲ್ಲಿದ್ದರು. ರಾಜ್ಯದಲ್ಲಿ ದುರ್ಘಟನೆ ಮರುಕಳಿಸುತ್ತಿರುವ ಹಿನ್ನೆಲೆಯಲ್ಲಿ ಇದೀಗ ಮತ್ತೆ ನಿಂಬಾಳ್ಕರ್ ಅವರಿಗೇ ಗುಪ್ತಚರ ಇಲಾಖೆಯ ಜವಾಬ್ದಾರಿ ನೀಡಿದ್ದಾರೆ ಎನ್ನಲಾಗಿದೆ.
ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಎರಡು ದಿನಗಳ ಹಿಂದೆ ಗಣೇಶನ ಮೆರವಣಿಗೆ ವೇಳೆ ನಡೆದ ದಾಳಿ ರಾಜ್ಯ ರಾಜಕಾರಣದಲ್ಲಿ ಕಿಡಿ ಸೃಷ್ಟಿಸಿದೆ. ಗಲಭೆ ಘಟನೆ ರಾಜಕೀಯ ಸ್ವರೂಪ ಪಡೆದಿದ್ದು, ಕಾಂಗ್ರೆಸ್-ಬಿಜೆಪಿ ನಡುವೆ ಕಿತ್ತಾಟಕ್ಕೆ ಕಾರಣವಾಗಿದೆ.
Nagamangala violence, intelligence ADGP Sharath Chandra transferred, Hemant Nimbalkar appointed as new officer. The Karnataka Government on Friday announced several high-level police transfers effective immediately, according to a notification from the Vidhana Soudha, Bengaluru, dated September 13, 2024.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm