Shobha Karandlaje, R Ashok, Nagamangala riot: ನಾಗಮಂಗಲ ಗಲಭೆ ; ಸುಳ್ಳು ಸುದ್ದಿ ಹಂಚಿದ್ದಾರೆಂದು ಆರ್.ಅಶೋಕ್, ಶೋಭಾ ಕರಂದ್ಲಾಜೆ ವಿರುದ್ಧ ಎಫ್ಐಆರ್ ದಾಖಲು, ದೊಂಬಿಗೆ ಪ್ರಚೋದನೆ ಆರೋಪ  

19-09-24 06:48 pm       HK News Desk   ಕರ್ನಾಟಕ

ನಾಗಮಂಗಲ ಕೋಮುಗಲಭೆ ಪ್ರಕರಣ ಹಿನ್ನೆಲೆಯಲ್ಲಿ ಸುಳ್ಳು ಸುದ್ದಿ ಹಬ್ಬಿಸಿದ್ದಾರೆಂದು ವಿಪಕ್ಷ ನಾಯಕ ಆರ್. ಅಶೋಕ್ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ  ವಿರುದ್ಧ ಮಂಡ್ಯದಲ್ಲಿ ಎಫ್ಐಆರ್ ದಾಖಲಾಗಿದೆ.

ಮಂಡ್ಯ, ಸೆ.19: ನಾಗಮಂಗಲ ಕೋಮುಗಲಭೆ ಪ್ರಕರಣ ಹಿನ್ನೆಲೆಯಲ್ಲಿ ಸುಳ್ಳು ಸುದ್ದಿ ಹಬ್ಬಿಸಿದ್ದಾರೆಂದು ವಿಪಕ್ಷ ನಾಯಕ ಆರ್. ಅಶೋಕ್ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ  ವಿರುದ್ಧ ಮಂಡ್ಯದಲ್ಲಿ ಎಫ್ಐಆರ್ ದಾಖಲಾಗಿದೆ.  

ಕಲ್ಲು ತೂರಿ, ಬೆಂಕಿ ಹಚ್ಚಿದವರನ್ನ ರಕ್ಷಿಸಿ, ಗಣೇಶನನ್ನ ಬಂಧಿಸಲಾಗಿದೆ ಎಂದು ಶೋಭಾ ಕರಂದ್ಲಾಜೆ ಟ್ವಿಟರ್ ನಲ್ಲಿ ಪೋಸ್ಟ್ ಹಾಕಿದ್ದರು. ಬೆಂಗಳೂರಿನಲ್ಲಿ ನಡೆದ ಗಣೇಶ ಮೂರ್ತಿ ವಶಪಡಿಸಿದ ಘಟನೆಯನ್ನ ನಾಗಮಂಗಲದಲ್ಲಿ ನಡೆದ ಘಟನೆ ಎಂದು ಶೋಭಾ ಪೋಸ್ಟ್ ಮಾಡಿದ್ದರು. ಈ ಬಗ್ಗೆ ಸುಳ್ಳು ಮಾಹಿತಿ ಹರಡಿದ್ದಾರೆಂದು ಆರೋಪ ಹೊರಿಸಿ ಪೊಲೀಸರು ಶೋಭಾ ವಿರುದ್ಧ ಸುಮೊಟೋ ಕೇಸು ದಾಖಲಿಸಿದ್ದಾರೆ. 

ಇದಲ್ಲದೆ, ನಾಗಮಂಗಲ ಘಟನೆ ವೇಳೆ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ ಬಗ್ಗೆ ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ ಎಂದು ಅಶೋಕ್ ಪೋಸ್ಟ್ ಹಾಕಿದ್ದರು. ಬೇರೆಡೆ ನಡೆದ ಎರಡು ವಿಡಿಯೋ ಲಗತ್ತಿಸಿ ಆರ್ ಅಶೋಕ್ ಪೋಸ್ಟ್ ಹಾಕಿದ್ದು ಆಮೂಲಕ ಪ್ರಚೋದನೆ ಮಾಡಿರುವ ಆರೋಪ ಕೇಳಿಬಂದಿದೆ. 

ಹೀಗಾಗಿ ಆರ್. ಅಶೋಕ್ ಹಾಗೂ ಶೋಭಾ‌ ಕರಂದ್ಲಾಜೆ ವಿರುದ್ಧ ಬಿಎನ್ ಎಸ್  ಸೆಕ್ಷನ್ 192ರ ಅಡಿ ಪ್ರಕರಣ ಪೊಲೀಸರು ಸುಮೊಟೋ ಕೇಸ್ ದಾಖಲಿಸಿದ್ದು
ನಾಗಮಂಗಲ ನಗರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

The Karnataka Police on Wednesday registered a case against Union Minister Shobha Karandlaje and Leader of Opposition R Ashok for allegedly sharing misleading information on social media platforms regarding the recent riot at Nagamangala town in Mandya district.