ಬ್ರೇಕಿಂಗ್ ನ್ಯೂಸ್
19-09-24 10:42 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.19: ವಾಣಿಜ್ಯ ಸಂಕೀರ್ಣ ನಿರ್ಮಿಸಲು ವಿವಿಧ ಸೆಸ್ ವಿಧಿಸಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) 2022ರಲ್ಲಿ ನೀಡಿದ್ದ ಡಿಮ್ಯಾಂಡ್ ನೋಟಿಸ್ ಪ್ರಶ್ನಿಸಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮತ್ತು ಅವರ ಪತ್ನಿ ತಬಸ್ಸುಮ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹಾಗೂ ಪತ್ನಿ ತಬಸ್ಸುಮ್ ದಿನೇಶ್ ರಾವ್ ಸಲ್ಲಿಸಿರುವ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಅಶೋಕ್ ಎಸ್.ಕಿಣಗಿ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿತು. ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ, ಸಂಸದೀಯ ವ್ಯವಹಾರ ಹಾಗೂ ಶಾಸನ ರಚನಾ ಇಲಾಖೆ ಕಾರ್ಯದರ್ಶಿ, ಬಿಬಿಎಂಪಿ ಆಯುಕ್ತ, ಬಿಬಿಎಂಪಿ ಪೂರ್ವ ವಿಭಾಗದ ನಗರ ಯೋಜನಾ ಸಹಾಯಕ ನಿರ್ದೇಶಕರಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿದ ನ್ಯಾಯಪೀಠ, ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ ವಿಚಾರಣೆ ಮುಂದೂಡಿದೆ.

ಆರ್.ಟಿ. ನಗರದ ಮಠದಹಳ್ಳಿಯಲ್ಲಿ ನಮ್ಮ ಒಡೆತನದಲ್ಲಿ 608.21 ಚದರ ಅಡಿ ಆಸ್ತಿ ಇದೆ. ಇದಕ್ಕೆ ಬಿಬಿಎಂಪಿ ಖಾತೆಯನ್ನೂ ನೀಡಿದೆ. ಈ ಆಸ್ತಿಗೆ ಚಾಲ್ತಿ ತೆರಿಗೆ ಕಟ್ಟಲಾಗಿದೆ. ಈ ಜಾಗದಲ್ಲಿ ವಾಣಿಜ್ಯ ಕಟ್ಟಡ ನಿರ್ಮಾಣಕ್ಕೆ ನಕ್ಷೆ ಮಂಜೂರಾತಿ ಕೋರಿ ಮನವಿ ಸಲ್ಲಿಸಿದ್ದೆವು. ಆದರೆ, ನಕ್ಷೆ ಮಂಜೂರಾತಿ ನೀಡಲು ನೆಲ ಬಾಡಿಗೆ ಶುಲ್ಕ, ಅದರ ಮೇಲೆ ಶೇ 18ರಷ್ಟು ಜಿಎಸ್ಟಿ, ಭದ್ರತಾ ಠೇವಣಿ, ಕಟ್ಟಡ ಹಾಗೂ ನಿವೇಶನ ಅಭಿವೃದ್ಧಿ ಶುಲ್ಕ, ಕೆರೆ ಜೀರ್ಣೋದ್ಧಾರ ಶುಲ್ಕ, ವರ್ತುಲ ರಸ್ತೆ ಶುಲ್ಕ, ಕೊಳೆಗೇರಿ ಅಭಿವೃದ್ಧಿ ಸೆಸ್ ಸೇರಿದಂತೆ ವಿವಿಧ ಬಗೆಯ 41.55 ಲಕ್ಷ ಮೊತ್ತದ ಶುಲ್ಕ, ತೆರಿಗೆ, ಸೆಸ್ಗಳು ಹಾಗೂ 3.46 ಲಕ್ಷ ಕಾರ್ಮಿಕರ ಸೆಸ್ ಪಾವತಿಸುವಂತೆ ಬಿಬಿಎಂಪಿ 2024ರ ಆಗಸ್ಟ್ 29ರಂದು ಡಿಮ್ಯಾಂಡ್ ನೋಟಿಸ್ ಜಾರಿಗೊಳಿಸಿದೆ. ಇದು ಕಾನೂನು ಬಾಹಿರ' ಎಂದು ಅರ್ಜಿದಾರರು ದೂರಿದ್ದಾರೆ.
ಕರ್ನಾಟಕ ಪೌರ ನಿಗಮಗಳು ಹಾಗೂ ಇತರೆ ಕೆಲವು ಕಾನೂನುಗಳ (ತಿದ್ದುಪಡಿ) ಕಾಯ್ದೆ-2021 ಅನ್ನು ಅಸಾಂವಿಧಾನಿಕ ಎಂದು ಘೋಷಿಸಬೇಕು. ಕರ್ನಾಟಕ ಪಟ್ಟಣ ಹಾಗೂ ನಗರ ಯೋಜನಾ ಕಾಯ್ದೆ-2004ರ ಕಲಂ 18-ಎ ರದ್ದುಪಡಿಸಬೇಕು. ಬಿಬಿಎಂಪಿ ಜಾರಿಗೊಳಿಸಿರುವ ಡಿಮ್ಯಾಂಡ್ ನೋಟಿಸ್ ರದ್ದುಪಡಿಸಬೇಕು. ನಮ್ಮ ಒಡೆತನದ ಆಸ್ತಿಯಲ್ಲಿ ವಾಣಿಜ್ಯ ಕಟ್ಟಡ ನಿರ್ಮಿಸಲು ಯಾವುದೇ ಷರತ್ತು ಹಾಗೂ ತೆರಿಗೆ, ಶುಲ್ಕಗಳನ್ನು ವಿಧಿಸದೆ ನಕ್ಷೆ ಮಂಜೂರು ಮಾಡಲು ಬಿಬಿಎಂಪಿಗೆ ನಿರ್ದೇಶಿಸಬೇಕು' ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ.
Minister for Health Dinesh Gundu Rao and his wife Tabassum Dinesh Rao have approached the Karnataka High Court challenging the legality of the Karnataka Municipal Corporation and Certain Other Law (Amendment) Act, 2021. This Act, enacted in January 2022, was designed to “nullify” the court’s 2021 judgment, which had declared charges such as ground rent, licence fees, scrutiny fees, and security deposits levied for sanctioning building plans as illegal.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm