Nandini ghee; ತಿರುಪತಿ ಲಡ್ಡಿನಲ್ಲಿ ಪ್ರಾಣಿಜನ್ಯ ಕೊಬ್ಬು ಪತ್ತೆ ಬೆನ್ನಲ್ಲೇ ಎಚ್ಚೆತ್ತ ರಾಜ್ಯ ಸರ್ಕಾರ ; ಎಲ್ಲ ಮುಜರಾಯಿ ದೇವಸ್ಥಾನಗಳಲ್ಲೂ ನಂದಿನಿ ತುಪ್ಪ ಮಾತ್ರ ಬಳಕೆಗೆ ಸುತ್ತೋಲೆ 

20-09-24 11:01 pm       HK News Desk   ಕರ್ನಾಟಕ

ತಿರುಪತಿ ಲಡ್ಡಿನಲ್ಲಿ ಪ್ರಾಣಿಜನ್ಯ ಕೊಬ್ಬಿನಂಶ ಬಳಸಲಾಗಿದೆ ಎಂಬ ಸುದ್ದಿಯ ನಡುವಲ್ಲೇ ಕರ್ನಾಟಕ ಸರ್ಕಾರ, ರಾಜ್ಯದ ಧಾರ್ಮಿಕ ಮತ್ತು ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ದೀಪ, ಪ್ರಸಾದ ತಯಾರಿ ಸೇರಿದಂತೆ ಎಲ್ಲ ರೀತಿಯ ಸೇವೆಗೂ ನಂದಿನಿ ತುಪ್ಪವನ್ನೇ ಬಳಸಬೇಕೆಂದು ಆದೇಶ ಹೊರಡಿಸಿದೆ.

ಬೆಂಗಳೂರು, ಸೆ.20: ತಿರುಪತಿ ಲಡ್ಡಿನಲ್ಲಿ ಪ್ರಾಣಿಜನ್ಯ ಕೊಬ್ಬಿನಂಶ ಬಳಸಲಾಗಿದೆ ಎಂಬ ಸುದ್ದಿಯ ನಡುವಲ್ಲೇ ಕರ್ನಾಟಕ ಸರ್ಕಾರ, ರಾಜ್ಯದ ಧಾರ್ಮಿಕ ಮತ್ತು ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ದೀಪ, ಪ್ರಸಾದ ತಯಾರಿ ಸೇರಿದಂತೆ ಎಲ್ಲ ರೀತಿಯ ಸೇವೆಗೂ ನಂದಿನಿ ತುಪ್ಪವನ್ನೇ ಬಳಸಬೇಕೆಂದು ಆದೇಶ ಹೊರಡಿಸಿದೆ.

ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ಅಧಿಸೂಚಿತ ದೇವಾಲಯಗಳಲ್ಲಿ ಸೇವೆಗಳಿಗೆ, ಪ್ರಸಾದ ತಯಾರಿಕೆಗೆ ಮತ್ತು ಶುದ್ಧ ನಂದಿನಿ ತುಪ್ಪವನ್ನು ಮಾತ್ರ ಬಳಸುವಂತೆ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ. ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ ಮೂಲಕ ಶುಕ್ರವಾರ ಆದೇಶ ಹೊರಡಿಸಲಾಗಿದೆ. 

ಇದರ ಜೊತೆಗೆ ದೇವಾಲಯಗಳಲ್ಲಿ ತಯಾರಿಸಲಾಗುವ ಎಲ್ಲ ರೀತಿಯ ಪ್ರಸಾದಗಳಲ್ಲಿ ಗುಣಮಟ್ಟ ಕಾಯ್ದುಕೊಳ್ಳುವಂತೆ ಸೂಚನೆ ನೀಡಿದೆ. ಆಂಧ್ರಪ್ರದೇಶದಲ್ಲಿ ಈ ಹಿಂದಿನ ಜಗನ್ ರೆಡ್ಡಿ ಸರ್ಕಾರದ ಅವಧಿಯಲ್ಲಿ ತಿರುಮಲ ತಿರುಪತಿ ದೇವಸ್ಥಾನ ಆಡಳಿತ ಮಂಡಳಿ ತುಪ್ಪದ ಬದಲಿಗೆ ಪ್ರಾಣಿಗಳ ಕೊಬ್ಬನ್ನು ಬಳಸಿ ಲಡ್ಡು ತಯಾರಿಸಿತ್ತು ಎಂಬ ಪ್ರಯೋಗಾಲಯ ವರದಿ ಬಂದಿರುವುದು ಭಾರೀ ವಿವಾದಕ್ಕೆ ಕಾರಣವಾಗಿದೆ.

Amid a massive row over the alleged use of substandard ingredients and animal fat in the preparation of Tirupati laddus, the Karnataka Milk Federation (KMF), producer of Nandini ghee, has clarified the status of its contract with Tirumala Tirupati Devasthanams (TTD), which manages the Sri Venkateswara Swamy temple.